Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೊಡ್ಡಬಳ್ಳಾಪುರದ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಬಂದ ಪ್ರಭುದೇವ

Facebook
Twitter
Telegram
WhatsApp

ಭಾರತದ ಮೈಕೆಲ್ ಜಾಕ್ಸನ್ ಎಂದೇ ಖ್ಯಾತಿ ಪಡೆದಿರುವ ನಟ ಪ್ರಭುದೇವ ಇತ್ತಿಚೆಗೆ ತಂದೆಯಾಗಿದ್ದಾರೆ. ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿದ್ದಾರೆ. ಎರಡನೇ ಹೆಂಡತಿಗೆ ಹೆಣಚಣು ಮಗುವಾಗಿರುವುದು ಕುಟುಂಬದಲ್ಲಿ ಸಂತಸ ತಂದಿದೆ. ಹೀಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಘಾಟಿ ಸುಬ್ರಮಣ್ಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಪ್ರಭುದೇವ ಅವರು ತಮ್ಮ ಮೊದಲ ಪತ್ನಿಗೆ ಡಿವೋರ್ಸ್ ನೀಡಿದ ಬಳಿಕ ಸಮಯ ತೆಗೆದುಕೊಂಡು ಫಿಸಿಯೋಥೆರಪಿಸ್ಟ್ ಹಿಮಾನಿ ಸಿಂಗ್ ಅವರನ್ನು ಮದುವೆಯಾಗಿದ್ದರು. ಇದೀಗ ಹಿಮಾನಿ ಮುಂಬೈನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಪ್ರಭುದೇವ ಅವರ ಕುಟುಂಬಕ್ಕೆ ಇದು ಮೊದಲ ಹೆಣ್ಣು ಮಗು. ಹೀಗಾಗಿಯೇ ಇಡೀ ಕುಟುಂಬ ಸಂಭ್ರಮದಲ್ಲಿ ತೇಲುತ್ತಿದೆ.

ಪ್ರಭುದೇವ ಅವರ ಮೊದಲ ಪತ್ನಿಗೆ ಜನಿಸಿದ್ದ ಮಕ್ಕಳಲ್ಲಿ ಒಬ್ಬ ಮಗ ತೀರಿಕೊಂಡಿದ್ದ. ಈ ವಿಚಾರವನ್ನು ಪ್ರಭುದೇವ ಅವರೇ ತಿಳಿಸಿದ್ದಾರೆ. ಈಗ ಮಗಳು ಬಂದಿರುವುದು ಮಹಾಲಕ್ಷ್ಮಿ ಬಂದಂತೆ ಖುಷಿಯಾಗಿದ್ದು, ಜೊತೆಗೆ ಹೆಣ್ಣು ಮಗು ಎಂಬ ಖುಷಿ ಡಬ್ಬಲ್ ಆಗಿದೆ. ಸದ್ಯ ಅಮ್ಮ – ಮಗು ಆರೋಗ್ಯವಾಗಿದ್ದು, ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಇನ್ನು ಮಗು ಜನಿಸಿದ್ದ ಖುಷಿಯಲ್ಲಿ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಮಾಡೊಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!