Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ : ಡಾ.ಡಿ.ಎಂ.ಅಭಿನವ್

---Advertisement---

 

ಚಿತ್ರದುರ್ಗ. ಸೆ. 06: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ ಕಂಡುಬರುವ ಖಾಯಿಲೆಗಳಿಗೆ ಆರೋಗ್ಯ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕ್ರಮವಹಿಸುವುದರ ಜೊತೆಗೆ ಒಳ್ಳೆಯ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಬೇಕು ಎಂದು ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಹೇಳಿದರು.

ನಗರದ ದರ್ಜಿ ಕಾಲೋನಿಯ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಪೋಷಣ್ ಮಾಸಾಚರಣೆಯ ಗುರಿ- ಉದ್ದೇಶಗಳು ಪ್ರಮುಖವಾಗಿ ತಳಮಟ್ಟದಲ್ಲಿ ಬೇರೂರಬೇಕು. ಎಲ್ಲಾ ಗರ್ಭಿಣಿಯರು, ಬಾಣಂತಿಯರು, ಮಕ್ಕಳ ಆರೋಗ್ಯ ಸುಧಾರಕ ಅಂಶಗಳ ಮೇಲೆ ಬೆಳಕು ಚೆಲ್ಲಬೇಕು ಎಂದು ಹೇಳಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ವಿ.ವೀಣಾ ಮಾತನಾಡಿ, ಮಹಿಳೆಯರಿಗೆ, ಮಕ್ಕಳಿಗೆ, ಗರ್ಭಿಣಿಯರಿಗೆ, ಹದಿಹರೆಯದವರಿಗೆ ಕಬ್ಬಿಣಾಂಶದ ಅವಶ್ಯಕತೆ, ನಾರಿನ ಅಂಶದ ಉಪಯೋಗದ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಕಾರ್ಯಕ್ರಮ ಸಂಯೋಜಕ ಕರಕಪ್ಪ ಮೇಟಿ ಮಾತನಾಡಿ, ಪೋಷಣ್ ಅಭಿಯಾನ ಕಾರ್ಯಕ್ರಮ 2018ರ ಮಾರ್ಚ್ 8ರಂದು ಪ್ರಧಾನಮಂತ್ರಿಗಳು ರಾಜಸ್ಥಾನದಲ್ಲಿ ಆರಂಭಿಸಿದರು. ಇದರಲ್ಲಿ 0-6 ವರ್ಷದ ಮಕ್ಕಳು, ಗರ್ಭಿಣಿಯರು, ಬಾಣಂತಿಯರು, ಮಹಿಳೆಯರು, ಹದಿಹರೆಯದವರು ಅಪೌಷ್ಠಿಕತೆ, ರಕ್ತಹೀನತೆ, ಕಡಿಮೆ ಹುಟ್ಟುತೂಕ, ಅನೀಮಿಯಾ ಬಗ್ಗೆ ಸವಿವರವಾಗಿ ತಿಳಿಸಿದರು. ಅದರಂತೆ ಪ್ರಮುಖವಾದ 11 ಜೀವಸತ್ವಗಳು ಮತ್ತು ಅವುಗಳ ಕೊರತೆಯಿಂದ ಬರುವ ರೋಗಗಳು ಹಾಗೂ ನಿಯಂತ್ರಣಾ ಕ್ರಮಗಳ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾರುತಿ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಯಶಸ್, ಆರೋಗ್ಯ ನಿರೀಕ್ಷಣಾಧಿಕಾರಿ ನಂದಿಶ್, ಅಂಗನವಾಡಿ ಮೇಲ್ವಿಚಾರಕಿ ಹೆಚ್.ಎಸ್.ಮಂಜುಳಾ, ಆರೋಗ್ಯ ಇಲಾಖೆಯ ಕಿ.ಮ.ಆ.ಸ ರವರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಗರ್ಭಿಣಿಯರು, ಬಾಣಂತಿಯರು, ಮಕ್ಕಳು, ಹದಿಹರೆಯದವರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment