Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಲಾಪದ ವೇಳೆ ಹಸಿವಿನ ಬಗ್ಗೆ ಮಾತನಾಡಿ ಸಿದ್ದರಾಮಯ್ಯರನ್ನ ಹೊಗಳಿದ ಪ್ರದೀಪ್ ಈಶ್ವರ್

Facebook
Twitter
Telegram
WhatsApp

 

ಬೆಂಗಳೂರು: ವಿಧಾನಸಭಾ ಕಲಾಪದಲ್ಲಿ ಇಂದು ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ತಮ್ಮ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಜೊತೆಗೆ ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದರು.

ಹಸಿವಿನ ಬೆಲೆ ಗೊತ್ತಿದ್ದವರಿಗೆ ಮಾತ್ರ ಇಂತಹ ಗ್ಯಾರಂಟಿಗಳನ್ನು ಹಾಗೂ ಅನ್ನ ಭಾಗ್ಯ ಯೋಜನೆಯನ್ನು ತರುವುದಕ್ಕೆ ಸಾಧ್ಯವಾಗುತ್ತದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಈ ರಾಜ್ಯದ ಭರವಸೆಗಳಿದ್ದಂತೆ. ಹೀಗಾಗಿ ನಾನು ವಿರೋಧ ಪಕ್ಷಗಳಿಗೆ ವಿನಂತಿ‌ ಮಾಡಿಕೊಳ್ಳುತ್ತೇನೆ.

ಗ್ಯಾರಂಟಿ ಯೋಜನೆಗಳಲ್ಲಿ ಯಾರೂ ಕೂಡ ರಾಜಕೀಯ ಮಾಡಬೇಡಿ. ಇದು ಮುಖ್ಯವಾದ ಯೋಜನೆ. ಸಿದ್ರಾಮನ ಹುಂಡಿಯಲ್ಲಿ ಹುಟ್ಟಿದಂತಹ ಹುಡುಗನಿಗೆ ಹಸಿವಿನ ಬೆಲೆ ಗೊತ್ತಿತ್ತು ಎನಿಸುತ್ತದೆ. ಬಡವರ ಮಕ್ಕಳು ಬೆಳೀಬೇಕು ಕಣ್ರಯ್ಯ ಎಂದು ಯೋಜನೆಯ ಬಗ್ಗೆ ಮಾತನಾಡಿದ್ದಾರೆ.

ಇನ್ನು ಸರ್ಕಾರಿ ಆಸ್ಪತ್ರೆ ಬಗ್ಗೆ ಮಾತನಾಡಿ, ಸರ್ಕಾರಿ ಆಸ್ಪತ್ರೆ ಎಂದರೆ ನನಗೊಂದು ಭಾವುಕ. ನಾನು, ನನ್ನ ತಂದೆ, ತಾಯಿಯನ್ನು ಕಳೆದುಕೊಂಡಿದ್ದೇನೆ. ಆ ನೋವು ನನ್ನಲ್ಲಿ ಇದೆ. ಅಂದು ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಕ್ಕಿದ್ದರೆ ಅವರು ಬದುಕುಳಿಯುತ್ತಿದ್ದರು. ಆದರೆ ನನ್ನ ಬ್ಯಾಡ್ ಲಕ್. ಅಪ್ಪ ಅಮ್ಮನನ್ನು ಕಳೆದುಕೊಂಡೆ. ಆ ನೋವು ನನ್ನಲ್ಲಿ ಇನ್ನೂ ಇದೆ ಎಂದು ಭಾವುಕರಾದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

  ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಛಲವಾದಿ ನಾರಾಯಣಸ್ವಾಮಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಎಸ್ ಟಿ ಸೋಮಶೇಖರ್ ಬಿಜೆಪಿಯಿಂದ ಹೊರಗೆ ನಿಂತಿದ್ದಾರೆ. ಬಿಜೆಪಿ ಶಾಸಕರು ಯಾರೂ ಅಷ್ಟು ದಡ್ಡತನ ಮಾಡುವುದಿಲ್ಲ. ಈಗ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ

error: Content is protected !!