ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಮೇ.20) : ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವು ಜಮೆಯಾಗುತ್ತಿದ್ದು, ಈ ಕುರಿತು ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು. ಇದು ಕೊನೆಯ ಅವಕಾಶ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಪಿ.ರಮೇಶ್ ಕುಮಾರ್ ಜಿಲ್ಲೆಯ ರೈತರಿಗೆ ಮನವಿ ಮಾಡಿದ್ದಾರೆ.
ಈಗಾಗಲೇ ಅನೇಕ ಬಾರಿ ಮನವಿ ಮಾಡಿದರೂ ಕೆಲವು ರೈತರು ಇ-ಕೆವೈಸಿ ಮಾಡಿಸಿರುವುದಿಲ್ಲ. ಅರ್ಹ ರೈತ ಫಲಾನುಭವಿಯು http://pmkisan.gov.in ವೈಬ್ಸೈಟ್ಗೆ ಭೇಟಿ ನೀಡಿ, ಆಧಾರ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ನಮೂದಿಸಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಬಹುದು.
ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ನೋಂದಾಣೆಯಾಗದ ರೈತರು ಅಥವಾ ಓಟಿಸಿ ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಒನ್ ಸೇವಾ ಕೇಂದ್ರ ಅಥವಾ ಸಮಾನ್ಯ ಸೇವಾ ಕೇಂದ್ರಕ್ಕೆ (csc) ಭೇಟಿ ನೀಡಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳಚ್ಚು ನಮೂದಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಭೇಟಿ ನೀಡಿ, ಮಾಹಿತಿ ಪಡೆದು ಇ-ಕೆವೈಸಿ ನೋಂದಾಯಿಸಲು ಜಂಟಿ ಕೃಷಿ ನಿರ್ದೇಶಕ ಪಿ. ರಮೇಶಕುಮಾರ್ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…