ಪ್ರಹ್ಲಾದ್ ಜೋಶಿ ಮತ್ತುಬಿ.ಎಲ್. ಸಂತೋಷ್ ಅವರ ಮುಂದಿನ ಟಾರ್ಗೆಟ್  ಬೊಮ್ಮಾಯಿ : ಕಾಂಗ್ರೆಸ್ ಟ್ವೀಟ್

1 Min Read

 

ಬೆಂಗಳೂರು : ಹೊಂದಾಣಿಕೆ ರಾಜಕೀಯದ ವಿಚಾರ ಬಿಜೆಪಿಯಲ್ಲಿ ಸಾಕಷ್ಟು ಸದ್ದು ಮಾಡ್ತಾ ಇದೆ.ಮಾಜಿ ಸಿಎಂ ಬೊಮ್ಮಾಯಿ ಅವರು ಸ್ಪಷ್ಟನೆ ನೀಡಿದ್ದರು. ಅದರ ಒಂದು ಪೇಪರ್ ಪೋಸ್ಟನ್ನು ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಸಂತೋಷ್ ಹಾಗೂ ಜೋಶಿ ವಿರುದ್ಧ ಕಿಡಿಕಾರಿದೆ.

ಜೋಶಿ, ಸಂತೋಷ್ ಅವರುಗಳು @mepratap ಹೆಗಲ ಮೇಲೆ ಗನ್ನಿಟ್ಟು ಶೂಟ್ ಮಾಡಿದ ಗುಂಡು @BSBommai ಅವರ ಎದೆಗೆ ತಗುಲಿದೆ! ಸಿಎಂ ಆದರೂ ಬಿಜೆಪಿಯ ಗರ್ಭಗುಡಿಯ ಒಳಗೆ ಪ್ರವೇಶ ಪಡೆಯಲಾಗದ ವಲಸಿಗ ಬೊಮ್ಮಾಯಿಯವರೇ ಜೋಶಿ ಸಂತೋಷರ ಮುಂದಿನ ಟಾರ್ಗೆಟ್!. ಬೊಮ್ಮಾಯಿಯವರನ್ನು ಮುಗಿಸಿದರೆ “ಟಾರ್ಗೆಟ್ ಲಿಂಗಾಯತ” ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದಂತಾಗುತ್ತದೆ ಎಂದು ಟ್ವೀಟ್ ಮಾಡಿದೆ.

ಅದರಲ್ಲೂ ಬಿಜೆಪಿ ವರ್ಸಸ್ ಬಿಜೆಪಿ ಎಂಬ ಹ್ಯಾಷ್ ಟ್ಯಾಗ್ ಬಳಸಿ, ಟ್ವೀಟ್ ಮಾಡಲಾಗಿದೆ. ಬಿಜೆಪಿಯ ಒಳಗೆ ಬಿಜೆಪಿಯ ಕಾಂಪಿಟೇಷನ್ ಶುರುವಾಗಿದೆ ಎಂಬ ರೀತಿ ಟ್ವೀಟ್ ಮಾಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *