Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಕೆ ಹರಿಪ್ರಸಾದ್ ಚಡ್ಡಿ ವಿಚಾರಕ್ಕೆ ಪ್ರಹ್ಲಾದ್ ಜೋಶಿ ಗರಂ..!

Facebook
Twitter
Telegram
WhatsApp

ಹುಬ್ಬಳ್ಳಿ: ಸಚಿವ ಸ್ಥಾನ ಸಿಗದೆ ಇರುವ ಕಾರಣಕ್ಕೆ ಬಿಕೆ ಹರಿಪ್ರಸಾದ್ ಕಾಂಗ್ರೆಸ್ ನಲ್ಲಿ ಕೆಂಡಾಮಂಡಲರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಇತ್ತಿಚೆಗೆ ಪರೋಕ್ಷವಾಗಿಯೂ ಕಿಡಿಕಾರಿದ್ದರು. ಪಂಚೆ ಹಾಕಿಕೊಂಡು, ಹ್ಯೂಬ್ಲೋಟ್ ವಾಚ್ ಕಟ್ಟಿಕೊಂಡು, ಒಳಗೆ ಖಾಕಿ ಚಡ್ಡಿ ಹಾಕಿಕೊಂಡು, ತಾನೂ ಸಮಾಜವಾದಿ ಎಂದು ಹೇಳಿದರೆ ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದರು.

 

ಈ ಚಡ್ಡಿ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ. ಒಳಜಗಳ ಜಾಸ್ತಿಯಾಗಿದೆ. ಸಿದ್ದರಾಮಯ್ಯ ಅವರು ಚಡ್ಡಿ ಹಾಕಿದ್ದಾರೆಂದು ಹರಿಪ್ರಸಾದ್ ಹೇಳಿದ್ದಾರೆ. ಇವರು ಚಡ್ಡಿ ಹಾಕಿದ್ದಾರೋ..? ಇಲ್ಲವೋ..? ಗೊತ್ತಿಲ್ಲ. ಬಿ ಕೆ ಹರಿಪ್ರಸಾದ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ.

 

ಹರಿಪ್ರಸಾದ್ ಅವರು ಬಿಜೆಪಿಗೆ ಬೈದಿದ್ದಾರೆ. ಎಲ್ಲವನ್ನು ಮಾತನಾಡಿ, ಕಡೆಗೆ ಬಿಜೆಪಿಗೆ ಬೈದಿದ್ದಾರೆ. ಕಾಂಗ್ರೆಸ್ ನಲ್ಲಿ ಅವರ ವಿರುದ್ಧ ಮಸಲತ್ತು ಮಾಡುವವರ ವಿರುದ್ಧ ಮಾತನಾಡುವ ತಾಕತ್ತು ಅವರಿಗೆ ಇಲ್ಲ. ಈಡಿಗ ಸಮುದಾಯದವರು ಹರಿಪ್ರಸಾದ್ ಅವರನ್ನು ಗುರುತಿಸಿದೆ. ಅದರ ವಿರುದ್ಧ ಸಿಎಂ ಸಿದ್ದರಾಮಯ್ಯ ಸಮಾವೇಶ ಮಾಡುತ್ತಿದ್ದಾರೆ. ಹೀಗಾಗಿ ಅವರು ಎಷ್ಟು ಪುಟಿತಾರೆ ನೋಡೋಣಾ ಎಂದಿದ್ದಾರೆ.

 

ಪ್ರಧಾನಿ ಮೋದಿ ಅವರು ನೀಡುವ ಅಕಗಕಿ ಬಿಟ್ಟು ಒಂದು ಕಾಳು ಅಕ್ಕಿಯನ್ನು ರಾಜ್ಯ ಸರ್ಕಾರ ನೀಡಿಲ್ಲ. ಅದನ್ನೇ ಅನ್ನಭಾಗ್ಯ ಯೋಜನೆ ಎನ್ನುತ್ತಾರೆ. ಸರ್ಕಾರ ವಿದ್ಯುತ್ ಕೊಡುತ್ತಿಲ್ಲ ಅಂತ ರೈತರೇ ಹೇಳುತ್ತಾರೆ. ಸರ್ಕಾರದಲ್ಲಿ ಪರಸ್ಪರ ಜಗಳ – ಕೆಸರು ಎರಚಾಟ ಜಾಸ್ತಿ ಆಗಿದೆ. ಇದರಿಂದ ಅಭಿವೃದ್ಧಿಯ ಮೇಲೆ ಹೊಡೆತ ಬೀಳುತ್ತಿದೆ. ಇದು ಆಡಳಿತದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜ್ಞಾನಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಗಾಳಿಪಟ ಹಬ್ಬ : ಕಣ್ಮನ ಸೆಳೆದ ವಿವಿಧ ಬಗೆಯ ಗಾಳಿಪಟಗಳು

  ಸುದ್ದಿಒನ್, ಚಿತ್ರದುರ್ಗ, ಜುಲೈ.27 : ಗಾಳಿಪಟಹಬ್ಬ ನಮ್ಮ ಶಾಲೆಯ ವಿಶೇಷ ಹಬ್ಬಗಳಲ್ಲಿ ಒಂದಾಗಿದೆ. ಆಷಾಢ ಶುದ್ಧ ಏಕಾದಶಿಯ ದಿನದಂದು  ದೇಶದ ಅನೇಕ ಭಾಗಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಕಾರ್ಯದರ್ಶಿ ಡಾ.ಕೆ ರಾಜೀವಲೋಚನ್

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!