Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಜ್ವಲ್ ಇರೋದು ಜರ್ಮನ್ ನಲ್ಲಿ ಅಲ್ಲ ಯೂರೋಪ್ ನಲ್ಲಿ : ಟ್ರೇಸ್ ಮಾಡಿದ ಎಸ್ಐಟಿ..!

Facebook
Twitter
Telegram
WhatsApp

 

 

ಬೆಂಗಳೂರು :  ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳು ರಿಲೀಸ್ ಆದ ಬೆನ್ನಲ್ಲೇ ದೇಶ ಬಿಟ್ಟು ಓಡಿ ಹೋಗಿದ್ದರು. ಜರ್ಮನ್, ಲಂಡನ್ ಅಂತ ಓಡಾಡುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಪ್ರಜ್ವಲ್ ರೇವಣ್ಣ ಇರುವುದೇ ಬೇರೆ ದೇಶದಲ್ಲಿ ಎಂಬುದು ಅವರೇ ಬಿಟ್ಟ ವಿಡಿಯೋದಿಂದ ಗೊತ್ತಾಗಿದೆ. ಎಸ್ಐಟಿ ಅಧಿಕಾರಿಗಳು ಅದನ್ನು ಟ್ರೇಸ್ ಮಾಡಿದ್ದಾರೆ.

ಪ್ರಜ್ವಲ್ ರೇವಣ್ಣ ಅವರಿಗೆ ಹಲವು ಬಾರಿ ನೋಟೀಸ್ ನೀಡಲಾಗಿತ್ತು. ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. ಆದರೂ ದೇಶಕ್ಕೆ ಬಂದಿರಲಿಲ್ಲ. ಈಗ ಚುನಾವಣೆಯೆಲ್ಲಾ ಮುಗಿದಿದೆ. ಮೇ 30ಕ್ಕೆ ಬಂದು ತನಿಖೆಗೆ ಹಾಜರಾಗುತ್ತೇನೆ ಎಂದು ವಿಡಿಯೋ ಮೂಲಕ ತಿಳಿಸಿದ್ದಾರೆ. ಈ ವಿಡಿಯೋ ಬಿಡುಗಡೆಯಾಗಿದ್ದು ಯಾವ ಜಾಗದಿಂದ ಎಂಬುದನ್ನು ಇದೀಗ ಎಸ್ಐಟಿ ಅಧಿಕಾರಿಗಳು ಮಾಹಿತಿ ಕಲೆಕ್ಟ್ ಮಾಡಿದ್ದಾರೆ.

ಪ್ರಜ್ವಲ್ ಜರ್ಮನ್ ದೇಶದಲ್ಲಿ ಇದ್ದಾರೆ ಎನ್ನಲಾಗಿತ್ತು. ಆದರೆ ಅವರು ಇರುವುದು ಯೂರೋಪ್ ನಲ್ಲಿ. ವಿಡಿಯೋ ರಿಲೀಸ್ ಆದ ಐಪಿ ಅಡ್ರೆಸ್ ಚೇಸ್ ಮಾಡಿದಾಗಲೇ ಅವರು ಯೂರೋಪ್ ನ ಹಂಗೇರಿಯ ಬುಡಾಪೆಸ್ಟ್ ನಲ್ಲಿ ಇದ್ದಾರೆ ಎಂಬುದು ತಿಳಿದಿದೆ. ಇನ್ನು ಆ ವಿಡಿಯೋ ಕೂಡ ಬಿಡುಗಡೆಯಾಗುವುದಕ್ಕೂ ಎರೆಉ ದಿನ ಮೊದಲೇ ರೆಕಾರ್ಡ್ ಆಗಿತ್ತು ಎಂಬುದನ್ನು ಎಸ್ಐಟಿಯ ಟೆಕ್ನಿಕಲ್ ಟೀಂ ಕಂಡು ಹಿಡಿದಿದೆ.

ಮೇ 31ಕ್ಕೆ ಎಸ್ಐಟಿ ಮುಂದೆ ಹಾಜರಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಅವರು ಹೇಳಿದ್ದಾರೆ. ಆದರೆ ನಾಳೆಯೇ ಪ್ರಜ್ವಲ್ ರೇವಣ್ಣ ವಿರುದ್ಧ ದೊಡ್ಡಮಟ್ಟದ ಪ್ರತಿಭಟನೆ ಮಾಡಲು ಸಂಘಟನೆಗಳು ಸಜ್ಜಾಗಿವೆ. ಪ್ರಜ್ವಲ್ ರೇವಣ್ಣ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ, ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಎಂ ಪತ್ನಿ ಹೆಸರಿಗೆ 14 ಮೂಡಾ ಸೈಟ್ ಗಳು : ಸಿದ್ದರಾಮಯ್ಯ ಹೇಳಿದ್ದೇನು..?

  ಬೆಂಗಳೂರು: ಸಿಎಂ ಸಿದ್ದರಾಮಯ್ಯ ಧರ್ಮಪತ್ನಿ ಪಾರ್ವತಿ ಅವರ ಹೆಸರಿನಲ್ಲಿ 14 ಮೂಡಾ ಸೈಟುಗಳನ್ನು ಮಾಡಲಾಗಿದೆ ಎಂಬುದು ಬಾರೀ ಚರ್ಚೆಗೆ ಗ್ರಾಸವಾಗಿದೆ. ಆರ್ಟಿಐ ಕಾರ್ಯಕರ್ತ ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದಿದ್ದಾರೆ. ಜೊತೆಗೆ ಸಿಎಂ

ಉತ್ತರಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ : ಕಾಲ್ತುಳಿತಕ್ಕೆ 80 ಕ್ಕೂ ಹೆಚ್ಚು ಮಂದಿ ಸಾವು…!

ಸುದ್ದಿಒನ್, ಜುಲೈ. 02 : ನವದೆಹಲಿ: ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೋಲೆ ಬಾಬಾರವರ ಸತ್ಸಂಗ

ಎಸ್‍ಎಸ್‍ಎಲ್‍ಸಿ, ಪಿಯು ಫಲಿತಾಂಶ ವೃದ್ಧಿಗೆ ಅಗತ್ಯ ಕಾರ್ಯಕ್ರಮ ರೂಪಿಸಿ : ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ

ಚಿತ್ರದುರ್ಗ. ಜುಲೈ.02:  2024-25ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷಾ ಫಲಿತಾಂಶ ವೃದ್ಧಿಗೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

error: Content is protected !!