Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಜ್ವಲ್ ಇರೋದು ಜರ್ಮನ್ ನಲ್ಲಿ ಅಲ್ಲ ಯೂರೋಪ್ ನಲ್ಲಿ : ಟ್ರೇಸ್ ಮಾಡಿದ ಎಸ್ಐಟಿ..!

---Advertisement---

 

 

ಬೆಂಗಳೂರು :  ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳು ರಿಲೀಸ್ ಆದ ಬೆನ್ನಲ್ಲೇ ದೇಶ ಬಿಟ್ಟು ಓಡಿ ಹೋಗಿದ್ದರು. ಜರ್ಮನ್, ಲಂಡನ್ ಅಂತ ಓಡಾಡುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಪ್ರಜ್ವಲ್ ರೇವಣ್ಣ ಇರುವುದೇ ಬೇರೆ ದೇಶದಲ್ಲಿ ಎಂಬುದು ಅವರೇ ಬಿಟ್ಟ ವಿಡಿಯೋದಿಂದ ಗೊತ್ತಾಗಿದೆ. ಎಸ್ಐಟಿ ಅಧಿಕಾರಿಗಳು ಅದನ್ನು ಟ್ರೇಸ್ ಮಾಡಿದ್ದಾರೆ.

ಪ್ರಜ್ವಲ್ ರೇವಣ್ಣ ಅವರಿಗೆ ಹಲವು ಬಾರಿ ನೋಟೀಸ್ ನೀಡಲಾಗಿತ್ತು. ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. ಆದರೂ ದೇಶಕ್ಕೆ ಬಂದಿರಲಿಲ್ಲ. ಈಗ ಚುನಾವಣೆಯೆಲ್ಲಾ ಮುಗಿದಿದೆ. ಮೇ 30ಕ್ಕೆ ಬಂದು ತನಿಖೆಗೆ ಹಾಜರಾಗುತ್ತೇನೆ ಎಂದು ವಿಡಿಯೋ ಮೂಲಕ ತಿಳಿಸಿದ್ದಾರೆ. ಈ ವಿಡಿಯೋ ಬಿಡುಗಡೆಯಾಗಿದ್ದು ಯಾವ ಜಾಗದಿಂದ ಎಂಬುದನ್ನು ಇದೀಗ ಎಸ್ಐಟಿ ಅಧಿಕಾರಿಗಳು ಮಾಹಿತಿ ಕಲೆಕ್ಟ್ ಮಾಡಿದ್ದಾರೆ.

ಪ್ರಜ್ವಲ್ ಜರ್ಮನ್ ದೇಶದಲ್ಲಿ ಇದ್ದಾರೆ ಎನ್ನಲಾಗಿತ್ತು. ಆದರೆ ಅವರು ಇರುವುದು ಯೂರೋಪ್ ನಲ್ಲಿ. ವಿಡಿಯೋ ರಿಲೀಸ್ ಆದ ಐಪಿ ಅಡ್ರೆಸ್ ಚೇಸ್ ಮಾಡಿದಾಗಲೇ ಅವರು ಯೂರೋಪ್ ನ ಹಂಗೇರಿಯ ಬುಡಾಪೆಸ್ಟ್ ನಲ್ಲಿ ಇದ್ದಾರೆ ಎಂಬುದು ತಿಳಿದಿದೆ. ಇನ್ನು ಆ ವಿಡಿಯೋ ಕೂಡ ಬಿಡುಗಡೆಯಾಗುವುದಕ್ಕೂ ಎರೆಉ ದಿನ ಮೊದಲೇ ರೆಕಾರ್ಡ್ ಆಗಿತ್ತು ಎಂಬುದನ್ನು ಎಸ್ಐಟಿಯ ಟೆಕ್ನಿಕಲ್ ಟೀಂ ಕಂಡು ಹಿಡಿದಿದೆ.

ಮೇ 31ಕ್ಕೆ ಎಸ್ಐಟಿ ಮುಂದೆ ಹಾಜರಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಅವರು ಹೇಳಿದ್ದಾರೆ. ಆದರೆ ನಾಳೆಯೇ ಪ್ರಜ್ವಲ್ ರೇವಣ್ಣ ವಿರುದ್ಧ ದೊಡ್ಡಮಟ್ಟದ ಪ್ರತಿಭಟನೆ ಮಾಡಲು ಸಂಘಟನೆಗಳು ಸಜ್ಜಾಗಿವೆ. ಪ್ರಜ್ವಲ್ ರೇವಣ್ಣ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ, ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment