Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪ್ರಜ್ವಲ್ ರೇವಣ್ಣ ಕೇಸ್ : ತುರ್ತು ಸುದ್ದಿಗೋಷ್ಠಿ ನಡೆಸಿ 15 ಪ್ರಶ್ನೆ ಕೇಳಿದ ಕುಮಾರಸ್ವಾಮಿ

---Advertisement---

 

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಬರೀ ಹಾಸನ ಅಷ್ಟೇ ಅಲ್ಲ, ಎಲ್ಲೆಲ್ಲಿ ಪೆನ್ ಡ್ರೈವ್ ಹಂಚಿದ್ದಾರೆ ಗೊತ್ತಾ..? ನಾನು ಯಾರಿಗೂ ರಕ್ಷಣೆ ಕೊಡಲ್ಲ ಎಂದು ಒಂದಷ್ಟು ಪ್ರೂಫ್ ತೋರಿಸಿದ್ದಾರೆ.

ಇದೇ ವೇಳೆ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

1. ಪ್ರಜ್ವಲ್ ಪರ ಪ್ರಚಾರ ಮಾಡಿದ್ದಾಕೆಯೇ ದೂರು ಕೊಟ್ಟಿದ್ದೇಗೆ..?

2. ಆಕೆ ಕಡೆಯಿಂದ ಪ್ರಜ್ವಲ್ ವಿರುದ್ಧ ದೂರು ಕೊಡಿಸಿದ್ದು ಯಾರು..?

3. ಕಿಡ್ನ್ಯಾಪ್ ಆಗಿದ್ದ ಸಂತ್ರಸ್ತೆಯನ್ನು ಎಲ್ಲಿಂದ ಕರೆದುಕೊಂಡು ಬಂದ್ರಿ..?

4. ಕಿಡ್ನ್ಯಾಪ್ ಸಂತ್ರಸ್ತೆ ಸಿಕ್ಕ ತೋಟದ ಮನೆಯಲ್ಲಿ ಮಹಜರಾಗಿದ್ಯಾ..?

5. ಸಂತ್ರಸ್ತೆಯನ್ನು ಜಡ್ಜ್ ಮುಂದೆ ಹಾಜರು ಪಡಿಸಿಲ್ಲ ಯಾಕೆ..?

6. ನಿಮಗೆ ಬೇಕಾದ ರೀತಿಯಲ್ಲಿ ರೇವಣ್ಣ ಹೇಳಿಕೆ ನೀಡಬೇಕಾ..?

7. ಕಾರ್ತಿಕ್ ಗೌಡ ವಿಡಿಯೋ ಮಾಡಿ ಹಂಚಿದ್ದು ಯಾರು..?

8. ಕಾರ್ತಿಗ್ ಗೌಡನನ್ನು ಈವರೆಗೂ ಯಾಕೆ ಹುಡುಕಿಲ್ಲ..?

9. ಎಸ್ಐಟಿ ತನಿಖೆ ಕೇವಲ ಪ್ರಜ್ವಲ್, ರೇವಣ್ಣ ವಿರುದ್ಧವಷ್ಟೇನಾ..?

10. ಕಾರ್ತಿಕ್ ಗೌಡ ಎಲ್ಲಿದ್ದಾನೆ..? ಯಾಕೆ ಆತನಿಗೆ ರಕ್ಷಣೆ..?

11. ಕಾರ್ತಿಕ್ ಗೌಡನನ್ನು ರಕ್ಷಣೆ ಮಾಡ್ತಿರೋದು ಯಾಕೆ..?

12. 25 ಸಾವಿರ ಪೆನ್ ಡ್ರೈವ್ ಬಿಟ್ಟವರ ಮೇಲೆ ಕ್ರಮವಿಲ್ಲ ಯಾಕೆ..?

13. ಐದು ಜನರ ಮೇಲೆ ಕಂಪ್ಲೈಂಟ್ ಕೊಟ್ಟರು ಕ್ರಮವಿಲ್ಲ ಯಾಕೆ..?

14. ವಿಡಿಯೋ ರಿಲೀಸ್ ಮಾಡಿದವರ ಮೇಲೆ ಯಾಕೆ ಕ್ರಮ ತೆಗೆದುಕೊಂಡಿಲ್ಲ..?

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...