Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪ್ರಜ್ವಲ್ ರೇವಣ್ಣ ಕೇಸ್ : ಚಾರ್ಜ್ಶೀಟ್ ನಲ್ಲಿ ಜೆಡಿಎಸ್ ನಾಯಕರನ್ನ ಉಲ್ಲೇಖಿಸಿದ್ದಕ್ಕೆ ಶಾಸಕ ಸ್ವರೂಪ್ ಗರಂ..!

---Advertisement---

ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಗೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಈಗಾಗಲೇ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಜೆಡಿಎಸ್ ನಾಯಕರ ಹೆಸರುಗಳನ್ನು ಉಲ್ಲೇಖ ಮಾಡಲಾಗಿದೆ. ಅದರಲ್ಲೂ ಜೆಡಿಎಸ್ ಶಾಸಕ ಸ್ವರೂಪ್ ಪ್ರಕಾಶ್ ಅವರ ಸಂಬಂಧಿಯ ಹೆಸರು ಕೂಡ ಇದೆ. ಈ ಸಂಬಂಧ ಶಾಸಕ ಸ್ವರೂಪ್ ಪ್ರಕಾಶ್ ಪ್ರತಿಕ್ರಿಯೆ ನೀಡಿದ್ದಾರೆ.

ಸ್ವರೂಪ್ ಪ್ರಕಾಶ್ ಅವರ ಚಿಕ್ಕಪ್ಪನ ಮಗ ಆಗಿರಬಹುದು ಅಥವಾ ಕಾರ್ಯಕರ್ತರಾಗಿರಬಹುದು ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಅನ್ನು ಹರಿಬಿಟ್ಟಿದ್ದಾರೆ ಎಂಬ ಸುದ್ದಿಯನ್ನ ನಾನು ನೋಡ್ತಾ ಇದ್ದೆ. ಖಂಡಿತವಾಗಲು ಇದು ಸತ್ಯಕ್ಕೆ ದೂರವಾದಂತ ವಿಚಾರ. ತಮ್ಮ ಮೂಲಕ ಸರ್ಕಾರಕ್ಕೆ ಮತ್ತು ಎಸ್ಐಟಿ ತನಿಖಾ ತಂಡಕ್ಕೂ ಕೇಳಲು ಬಯಸುತ್ತೇನೆ, ಸತ್ಯಾಸತ್ಯತೆಯನ್ನ ಹೊರಗೆ ತರ್ತೀವಿ ಅಂತ ಎಸ್ಐಟಿ ತಂಡ ಏನು ತನಿಖೆ ಮಾಡಿದ್ರು, ಹಲವಾರು ಪ್ರಮುಖರು ಮತ್ತು ಪ್ರಭಾವಿಗಳನ್ನ ಯಾಕೆ ಕೈ ಬಿಟ್ಟಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಎ1 ನವೀನ್ ನನ್ನ ಮಂಪರು ಪರೀಕ್ಷೆಗೆ ಒಳಪಡಿಸಿದ್ರೆ ಪೆನ್ ಡ್ರೈವ್ ಹಂಚಿಕೆ ಮಾಡುವ ವಿಚಾರದಲ್ಲಿ ಯಾರ್ಯಾರು ಪ್ರಭಾವಿಗಳಿದ್ದರು ಎಂಬುದು ತಿಳಿಯುತ್ತೆ. ಈ ಬಗ್ಗೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸಬೇಕು. ಸರ್ಕಾರ ಲೋಕಸಭೆ ಚುನಾವಣೆಯನ್ನ ಗೆಲ್ಲೋದಕ್ಕೆ ಯಾವ ರೀತಿಯ ವಾಮಮಾರ್ಗ ಹಿಡಿದರು ಎಂಬುದು ತಮಗೆ ಗೊತ್ತಿದೆ. ಈಗ ಈ ಕೇಸಲ್ಲಿ ಪ್ರಭಾವಿ ನಾಯಕರನ್ನು ಕೈ ಬಿಟ್ಟು ಜೆಡಿಎಸ್ ನವರನ್ನ ತಮ್ಮ ಸಂಬಂಧಿಯನ್ನು ಸೇರಿ ಕಾರ್ಯಕರ್ತರನ್ನು ಸೇರಿಸಿ ತಂದಿರೋದು ನಮಗೂ ಬೇಸರ ತರಿಸಿದೆ. ಕೇಸನ್ನು ದಿಕ್ಕು ತಪ್ಪಿಸಲು ಈ ಕೆಲಸ ಮಾಡಿದ್ದಾರೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now