Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ..!

---Advertisement---

ಬೆಂಗಳೂರು: ಹಾಸನದಲ್ಲಿ ಅಶ್ಲೀಲ ವಿಡಿಯೋಗಳು ವೈರಲ್ ಆದ ಹಿನ್ನೆಲೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಜೆಡಿಎಸ್ ವರಿಷ್ಠರು ಈ ಸಂಬಂಧ ಮಹತ್ವದ ಆದೇಶ ಹೊರಡಿಸಿದ್ದಾರೆ.

 

ಹಾಸನದಲ್ಲೆಲ್ಲಾ ಈ ಪೆನ್ ಡ್ರೈವ್ ವಿಚಾರವೇ ಸಾಕಷ್ಟು ಸದ್ದು ಮಾಡಿತ್ತು. ಚುನಾವಣೆ ಬಳಿಕ ರಾಜ್ಯಾದ್ಯಂತ ಪೆನ್ ಡ್ರೈವ್ ನದ್ದೇ ಚರ್ಚೆಯಾಗುತ್ತಿದೆ. ಈ ವಿಚಾರ ಜೆಡಿಎಸ್ ಪಕ್ಷಕ್ಕೆ ಮುಜುಗರ ತಂದಿತ್ತು. ಪಕ್ಷದಲ್ಲೂ ಪ್ರಶ್ನೆ ಮಾಡಲು ಶುರು ಮಾಡಿದರು. ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದ್ದು, ದೂರುಗಳು ಬರುತ್ತಲೆ ಇದಾವೆ. ಪ್ರಜ್ವಲ್ ರೇವಣ್ಣ ಅವರನ್ನು ಮೊದಲು ಪಕ್ಷದಿಂದ ವಜಾಗೊಳಿಸಿ ಎಂಬ ಒತ್ತಾಯಗಳು ಪಕ್ಷದಿಂದಾನೇ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರಾದ ದೇವೇಗೌಡ ಅವರು, ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.

ಒಂದಲ್ಲ ಎರಡಲ್ಲ ಸುಮಾರು 3 ಸಾವಿರ ವಿಡಿಯೋಗಳು ಆ ಪೆನ್ ಡ್ರೈವ್ ನಲ್ಲಿ ದಾಖಲಾಗಿವೆ. ಪ್ರಜ್ವಲ್ ರೇವಣ್ಣ ಅವರ ಜೊತೆಗಿನ ಅಶ್ಲೀಲ ವಿಡಿಯೋಗಳು ರಿಲೀಸ್ ಆಗಿರುವುದು ಆ ಹೆಣ್ಣು ಮಕ್ಕಳಿಗೂ ಸಮಸ್ಯೆಯಾಗಿದೆ. ಕೆಲವು ಸಂತ್ರಸ್ತೆಯರು ಧೈರ್ಯ ಮಾಡಿ ಈಗಾಗಲೇ ದೂರು ನೀಡಿದ್ದಾರೆ. ಪ್ರಜ್ವಲ್ ರೇವಣ್ಣ ಮಾತ್ರವಲ್ಲ ರೇವಣ್ಣ ಅವರ ಮೇಲೂ ದೂರುಗಳು ದಾಖಲಾಗಿವೆ.

ಈ ಸಂಬಂಧ ಕಾಂಗ್ರೆಸ್ ನಾಯಕರು ಆಕ್ರೋಶ ಭರಿತರಾಗಿದ್ದಾರೆ. ಸಂಸದ ಸ್ಥಾನದಲ್ಲಿದ್ದುಕೊಂಡು ಸಹಾಯ ಕೇಳಲು ಬಂದ ಮಹಿಳೆಯರನ್ನು ಈ ರೀತಿ ಬಳಸಿಕೊಳ್ಳುವುದು ಎಷ್ಟು ಸರಿ ಎಂದಿದ್ದಾರೆ. ಇನ್ನು ಕುಮಾರಸ್ವಾಮಿ ಅವರು ನಮ್ಮ ಕುಟುಂಬವೇ ಬೇರೆ ಅವರ ಕುಟುಂಬವೇ ನೇರ ಎಂದು ಹೇಳುವ ಮೂಲಕ ಕೈ ತೊಳೆದುಕೊಂಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment