Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ : ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

---Advertisement---

ಶಿವಮೊಗ್ಗ: ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ಮತಯಾಚನೆ ನಡೆಸುತ್ತಿವೆ. ರಾಹುಲ್ ಗಾಂಧಿ ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಗೀತಾ ಶಿವ ರಾಜ್‍ಕುಮಾರ್ ಪರವಾಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ವಿರುದ್ಧ ಹರಿಹಾಯುವುದರ ಜೊತೆಗೆ ಪ್ರಜ್ವಲ್ ರೇವಣ್ಣ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ.

ಪ್ರಜ್ವಲ್ ರೇವಣ್ಣ ಎನ್ ಡ್ರೈವ್ ಪ್ರಕರಣ ಇಡೀ ದೇಶದ ಗಮನವನ್ನೇ ಸೆಳೆದಿದೆ. 400 ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಿದ್ದಾರೆ. ಇದು ಬರೀ ಅತ್ಯಾಚಾರವಷ್ಟೇ ಅಲ್ಲ. ಇದೊಂದು ಸಾಮೂಹಿಕ ಅತ್ಯಾಚಾರವಾಗಿದೆ. ಒಬ್ಬ ಮಾಸ್ ರೇಪಿಸ್ಟ್ ಪರವಾಗಿ ಪ್ರಧಾನಿ ಮೋದಿ ಅವರು ಮತಯಾಚನೆ ಮಾಡಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ. ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಪ್ರಕರಣ ಬಿಜೆಪಿ ನಾಯಕರಿಗೆ ಮೊದಲೇ ಗೊತ್ತಿತ್ತು. ಆದರೂ ಆ ಪಕ್ಷದ ಮುಖಂಡರು ಹಾಗೂ ಪ್ರಧಾನಿ ಮೋದಿ ಅವರು ಆ ವ್ಯಕ್ತಿಯ ಪರವಾಗಿ ಮತಯಾಚನೆ ಮಾಡಿದ್ದಾರೆ. ಹೀಗಾಗಿ ಪ್ರಜ್ವಲ್ ರೇವಣ್ಣ ಪರವಾಗಿ ಬಿಜೆಪಿ ನಾಯಕರು ಆ ಮಹಿಳೆಯರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

400 ಜನ ಮಹಿಳೆಯರ ಮೇಲೆ ಅತ್ಯಾಚಾರ ಮಾಡಲಾಗಿದೆ. ಇದನ್ನು ಮಾಸ್ ರೇಪ್ ಎಂದು ಕರೆಯಲಾಗುತ್ತದೆ. ಪ್ರಜ್ವಲ್ ರೇವಣ್ಣಗೆ ವೋಟ್ ಹಾಕಿ ಅಂತ ಪ್ರಧಾನಿ ಮೋದಿ ಅವರು ಕೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂತ್ರಸ್ತೆಯರ ತನಿಖೆ ನಡೆಸಿದ್ದು, ಪ್ರಜ್ವಲ್ ರೇವಣ್ಣನಿಗೂ ನೋಟೀಸ್ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment