Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

Facebook
Twitter
Telegram
WhatsApp

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್ ಕೂಡ ನೀಡಲಾಗಿದೆ. ರೇವಣ್ಣ ಅವರನ್ನು ಬಂಧಿಸಲಾಗಿದೆ. ಆದರೆ ಈಗ ವಕೀಲ ದೇವರಾಜೇಗೌಡ ಶಾಕಿಂಗ್ ಹೇಳಿಕೆಯನ್ನು ನೀಡಿದ್ದು, ಇದಕ್ಕೆಲ್ಲ ರುವಾರಿ ಒನ್ ಅಂಡ್ ಓನ್ಲಿ ಡಿಸಿಎಂ ಡಿಕೆ ಶಿವಕುಮಾರ್ ಎಂದಿದ್ದಾರೆ.

ಕಾಂಗ್ರೆಸ್ ಗೆ ಬರುವುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಆಫರ್ ಕೊಟ್ಟರು ಎನ್ನಲಾದ ಆಡಿಯೋವನ್ನು ದೇವರಾಜೇಗೌಡ ಬಿಡುಗಡೆ ಮಾಡಿದ್ದಾರೆ. ಅರ್ಧಂಬರ್ಧ ಆಡಿಯೋ ಮಾತ್ರ ಪ್ಲೇ ಮಾಡಿದ್ದು, ಫುಲ್ ಆಡಿಯೋ ಪ್ಲೇ ಮಾಡುವುದಕ್ಕೆ ಆಗಲ್ಲ ಎಂದಿದ್ದಾರೆ. ಆ ಆಡಿಯೋದಲ್ಲಿ ಹೇಳ್ರೀ ಏನು ವಿಚಾರ ಎಂಬುದಷ್ಟೇ ಕೇಳಿಸಿದೆ. ಎಸ್ಐಟಿ ಅಧಿಕಾರಿಯ ಫೋಟೊ ತೋರಿಸಿ, ಇವರು ನನ್ನ ಹೇಳಿಕೆಯಲ್ಲಿರುವ ಡಿಕೆ ಶಿವಕುಮಾರ್ ಅವರ ಹೆಸರನ್ನು ತೆಗೆಯುವುದಕ್ಕೆ ಹೇಳಿದರು ಎಂದು ಆರೋಪಿಸಿದ್ದಾರೆ.

ಇಡೀ ಪ್ರಕರಣ ಕಾಂಗ್ರೆಸ್ ಕುಮ್ಮಕ್ಕಿನಿಂದ ನಡೆದಿದೆ. ನಿಜವಾದ ಆರೋಪಿಗಳನ್ನು ಕಾಂಗ್ರೆಸ್ ಬಚ್ಚಿಟ್ಟುಕೊಂಡಿದ್ದು, ಸಂತ್ರಸ್ತೆಯರನ್ನು ತಂದು ಫೀಡ್ ಮಾಡುತ್ತಿದೆ. ಸಂತ್ರಸ್ತೆಯರಿಗೆ ಹಣ ಕೊಟ್ಟು ಇವರು ಕರೆದುಕೊಂಡು ಬಂದಿದ್ದಾರೆ. ಒಟ್ಟಾರೆ ಕಾಂಗ್ರೆಸ್ ಸರ್ಕಾರ ನನ್ನನ್ನು ಸಿಕ್ಕಿಸುವುದಕ್ಕೆ ಹೊರಟಿದೆ. ಎಲ್.ಆರ್. ಶಿವರಾನೇಗೌಡ ಅವರನ್ನು ಮಧ್ಯವರ್ತಿಯಾಗಿ ಕಳುಹಿಸಿದೆ. ಆ ಮಹಾನಾಯಕ ಶಿವರಾಮೇಗೌಡರನ್ನು ಮಧ್ಯವರ್ತಿಯಾಗಿ ನಮ್ಮ ನಡುವೆ ಬಿಟ್ಟಿದ್ದಾರೆ. ನಾನು ಸಿಬಿಐಗೆ ಎಲ್ಲಾ ಮಾಹಿತಿಯನ್ನು ನೀಡುತ್ತೇನೆ. ಪೆನ್ ಡ್ರೈವ್ ಹಂಚಿಕೆ ಮಾಡುವ ಗೇಮ್ ಪ್ಲ್ಯಾನ್ ಕಾಂಗ್ರೆಸ್ ಸರ್ಕಾರದ್ದು. ವೈರಲ್ ಆಗಿರುವ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

error: Content is protected !!