Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ : ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ ಜೆಡಿಎಸ್ ನಿಯೋಗ..!

Facebook
Twitter
Telegram
WhatsApp

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ ಪರಾರಿಯಾಗಿ ವಿದೇಶದಲ್ಲಿದ್ದಾರೆ. ಎಷ್ಟೇ ನೋಟೀಸ್ ಕೊಟ್ಟರು ದೇಶಕ್ಕೆ ಬರುವ ಮನಸ್ಸು ಮಾಡುತ್ತಿಲ್ಲ. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಿಯೋಗ ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಜೆಡಿಎಸ್ ದೂರು ನೀಡಿದೆ.

ಪ್ರಜ್ವಲ್ ರೇವಣ್ಣ ಪ್ರಕರಣ ಬೆಳಕಿಗೆ ಬಂದಾಗ ರಾಹುಲ್ ಗಾಂಧಿ, ಇದು ನಾನೂರು ಮಹಿಳೆಯರ ಮೇಲೆ‌ ನಡೆದ ಮಾಸ್ ರೇಪ್ ಎಂದು ಹೇಳಿದ್ದರು. ಆ ಪ್ರಕರಣ ಸಂಬಂಧ ದೂರು ನೀಡಲಾಗಿದ್ದು, ಕ್ರಿಮಿನಲ್ ಕೇಸ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ. ರಂಗನಾಥ್ ಸೇರಿದಂತೆ ಹಲವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರನ್ನು ಭೇಟಿಯಾಗಿ, ದೂರು ಸಲ್ಲಿಸಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ ಅವರು ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಗಳಲ್ಲಿ ಮಾಸ್ ರೇಪ್ ಬಗ್ಗೆ ಮಾತನಾಡಿದ್ದರು. ಇದೇ ಮಾತನ್ನು ಮಾಧ್ಯಮಗಳ ಮುಂದೆಯೂ ಹೇಳಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ತಿಳಿಸಿದ್ದಾರೆ. ಈ ದೂರಿನ ಪತ್ರಕ್ಕೆ ಹೆಚ್.ಎಂ. ರಮೇಶ್ ಗೌಡ ಸಹಿ ಕೂಡ ಹಾಕಿದ್ದಾರೆ. ರಾಹುಲ್ ಗಾಂಧಿ ಅವರ ಹೇಳಿಕೆ ವಿದ್ಯುನ್ಮಾನ ಹಾಗೂ ಪ್ರಿಂಟ್ ಮಾಧ್ಯಮದಲ್ಲಿಯೂ ಮುದ್ರಣವಾಗಿದೆ. ಹೀಗಾಗಿ ಅವರ ಮೇಕೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Petrol, Diesel Prices: ವಾಹನ ಸವಾರರಿಗೆ ಶಾಕ್ :  ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆ

ಸುದ್ದಿಒನ್, ಬೆಂಗಳೂರು : ಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ. ಈ ಹಿಂದೆ 100 ರೂಪಾಯಿಗಿಂತಲೂ ಹೆಚ್ಚಾಗಿದ್ದ ಪೆಟ್ರೋಲ್ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಚುನಾವಣೆಗೂ ಮೊದಲು ನಿರ್ಧಾರ ಕೈಗೊಂಡಿತ್ತು.

ಈ ರಾಶಿಯವರಿಗೆ ಏನು ಮುಟ್ಟಿದರು ಚಿನ್ನ, ಧನ ಲಾಭದ ಜೊತೆಗೆ ಸಾಲದಿಂದ ಮುಕ್ತಿ

ಈ ರಾಶಿಯವರಿಗೆ ಏನು ಮುಟ್ಟಿದರು ಚಿನ್ನ, ಧನ ಲಾಭದ ಜೊತೆಗೆ ಸಾಲದಿಂದ ಮುಕ್ತಿ, ಭಾನುವಾರ ರಾಶಿ ಭವಿಷ್ಯ -ಜೂನ್-16,2024 ಸೂರ್ಯೋದಯ: 05:46, ಸೂರ್ಯಾಸ್ತ : 06:47 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ

ನಿಮ್ಮ ಕಣ್ಣಿನಲ್ಲಿ ಚಿಕ್ಕ ವ್ಯತ್ಯಾಸ ಕಂಡುಬಂದರೂ ನಿರ್ಲಕ್ಷಿಸಬೇಡಿ : ಕ್ಯಾನ್ಸರ್ ರೋಗಲಕ್ಷಣಗಳಿರಬಹುದು…!

ಸುದ್ದಿಒನ್ : ಭಾರತ ಈಗ ಎದುರಿಸುತ್ತಿರುವ ದೊಡ್ಡ ಆರೋಗ್ಯ ಸಮಸ್ಯೆಯೆಂದರೆ ಅದು ಕ್ಯಾನ್ಸರ್. ಈ ಸಾಂಕ್ರಾಮಿಕ ರೋಗವು ವಯಸ್ಸಿನ ಭೇದವಿಲ್ಲದೆ ಜನರ ಮೇಲೆ ದಾಳಿ ಮಾಡುತ್ತಿದೆ. ಈಗ ಆಧುನಿಕ ಕಾಲದಲ್ಲಿಯೂ ಔಷಧ ಲಭ್ಯವಿದ್ದರೂ ಸಕಾಲದಲ್ಲಿ

error: Content is protected !!