Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಜ್ವಲ್ ರೇವಣ್ಣ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ..!

---Advertisement---

ಬೆಂಗಳೂರು: ಹಾಸನದ ಅಶ್ಲೀಲ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಎಸ್ಐಟಿ ಅಧಿಕಾರಿಗಳ ವಶದಲ್ಲಿಯೇ ಇದ್ದಾರೆ. ಇಂದಿಗೆ ಅವರ ನ್ಯಾಯಾಂಗ ಬಂಧನದ ಅವಧಿ ಮುಗಿದಿತ್ತು. ಹೀಗಾಗಿ ಮತ್ತೆ ನ್ಯಾಯಾಲಯಕ್ಕೆ ಒಪ್ಪಿಸಲಾಗಿತ್ತು. ನ್ಯಾಯಾಲಯದಲ್ಲಿ ವಿಚಾರಣೆ ನಡೆದ ಬಳಿಕ ಮತ್ತೆ ಕಸ್ಟಡಿಗೆ ನೀಡಲಾಗಿದೆ. ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.

ಕೋರ್ಟ್ ನಿಂದ ಆದೇಶ ಬಂದೊಡನೆ ಎಸ್ಐಟಿ ಅಧಿಕಾರಿಗಳು ನೇರವಾಗಿ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದ ಎಸ್ಐಟಿ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೇಳಿಕೊಂಡಿದ್ದರು. ಕೋರ್ಟ್ ಮತ್ತೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ನಿಮಗೆ ತೊಂದರೆ ಕೊಟ್ರಾ ಎಂಬ ಪ್ರಶ್ನೆ ಕೇಳಿದೆ. ಅದಕ್ಕೆ ಪ್ರಜ್ವಲ್ ರೇವಣ್ಣ ಅವರು ಮತ್ತೆ ಇಲ್ಲ ಎಂದೇ ಉತ್ತರಿಸಿದ್ದಾರೆ.

ವಾದ-ಪ್ರತಿವಾದ ಆಲಿಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಇವತ್ತು ಕೋರ್ಟ್ ಗೆ ಹಾಜರುಪಡಿಸುವ ಮುನ್ನ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಸವನಗುಡಿಯ ಮನೆಗೆ ಕರೆದುಕೊಂಡು ಹೋಗಿದ್ದರು. ಮನರಯಲಗಲಿ ಸ್ಥಳ ಮಹಜರು ಮಾಡಿಕೊಂಡರು. ಅಲ್ಲಿಯೇ ಪ್ರಜ್ವಲ್ ರೇವಣ್ಣ ಅವರ ಹೇಳಿಕೆಯನ್ನು ಪಡೆದುಕೊಂಡು, ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ರೇವಣ್ಣ ಅವರನ್ನು ಮಹಿಳೆಯ ಕಿಡ್ನ್ಯಾಪ್ ಕೇಸಲ್ಲಿ ಬಂಧಿಸಿದಾಗಲೂ ಬಸವನಗುಎಇಯ ಮನೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಸ್ಥಳ ಮಹಜರು ಮಾಡಿದ್ದರು. ಇದೀಗ ಪ್ರಜ್ವಲ್ ರೇವಣ್ಣ ಅವರನ್ನು ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment