Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಸಚಿವ ಪರಮೇಶ್ವರ್
---Advertisement---

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಊರು ಬಿಟ್ಟು ಜರ್ಮನಿ ಸೇರಿದ್ದಾರೆ. ಆದರೆ ಇಂದು ಟಿಕೆಟ್ ಬುಕ್ಕಿಂಗ್ ಆಗಿತ್ತು. ಮಧ್ಯರಾತ್ರಿ ಬರುತ್ತಾರೆ ಎಂಬ ಮಾಹಿತಿಯು ಲಭ್ಯವಾಗಿತ್ತು. ಆದರೆ ಅವರ ವಾಪಾಸ್ ಪ್ರಯಾಣ ಕ್ಯಾನ್ಸಲ್ ಆಗಿದೆ.

 

ಈ ಸಂಬಂಧ ಮಾತನಾಡಿರುವ ಗೃಹ ಸಚಿವ ಜಿ ಪರಮೇಶ್ವರ್, ಈ ಪ್ರಕರಣ ಅಂತರಾಷ್ಟ್ರೀಯ ಮಟ್ಟಕ್ಕೆ ತಲುಪಿದೆ. ಇದು ಬಹಳ ಗಂಭೀರವಾದಂತ ವಿಚಾರ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳುವುದಕ್ಕೆ ಅವಕಾಶವೇ ಇಲ್ಲ. ಸಂತ್ರಸ್ತೆಯಿಂದ ದೂರು ಬಂದ ಕೂಡಲೇ ಎಸ್ಐಟಿ ತನಿಖೆಗೆ ಒಪ್ಪಿಸಲಾಗಿದೆ.

ಪ್ರಜ್ವಲ್ ರೇವಣ್ಣ ಅವರು ರಾತ್ರೋ ರಾತ್ರಿ ವಿದೇಶಕ್ಕೆ ಹೋಗಿದ್ದಾರೆ. ಸೆಕ್ಷನ್ 41(A) ಪ್ರಕಾರ ನೋಟೀಸ್ ನೀಡಿದ್ದು, 24 ಗಂಟೆ ಒಳಗಡೆ ವಿಚಾರಣೆಗೆ ಬರಬೇಕಾಗುತ್ತದೆ. ಅವರು ಬರದೆ ಹೋದರೆ ಕಾನೂನು ಪ್ರಕಾರ ಅರೆಸ್ಟ್ ಮಾಡಬೇಕಾಗುತ್ತದೆ. ಪ್ರಜ್ವಲ್ ರೇವಣ್ಣ ಅವರಿಗೆ ಲುಕ್ ಔಟ್ ನೋಟೀಸ್ ಕೂಡ ನೀಡಲಾಗಿದೆ. ಸಂತ್ರಸ್ತ ಮಹಿಳೆಯರ ಹೇಳಿಕೆಗಳನ್ನು ರೆಕಾರ್ಡ್ ಕೂಡ ಮಾಡಲಾಗಿದೆ. ನಿನ್ನೆ ಇನ್ನೊಬ್ಬ ಮಹಿಳೆ ಕೂಡ ದೂರು ಕೊಟ್ಟಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಮಹಿಳೆಯರಿಗೆ ಸರ್ಕಾರ ರಕ್ಷಣೆ ಕೊಡುತ್ತದೆ‌. ಇದರಲ್ಲಿ ಮಹಿಳೆಯರ ಭವಿಷ್ಯ, ಅವರ ಕುಟುಂಬದ ಭವಿಷ್ಯ ಅಡಗಿದೆ‌. ಹೀಗಾಗಿ ಸರ್ಕಾರ ಈ ವಿಚಾರವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment