Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಜ್ವಲ್ ರೇವಣ್ಣ ಮಾತಿನಿಂದ ಕಾಂಗ್ರೆಸ್ ಹೋಗುವ ಯೋಚನೆ ಬಿಡ್ತಾರಾ ಶಿವಲಿಂಗೇಗೌಡ..?

Facebook
Twitter
Telegram
WhatsApp

 

 

ಹಾಸನ: ಜೆಡಿಎಸ್ ಶಿವಲಿಂಗೇಗೌಡ ಪಕ್ಷ ಬಿಟ್ಟು ಕಾಂಗ್ರೆಸ್ ಸೇರುವ ಪ್ಲ್ಯಾನ್ ನಲ್ಲಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲೂ ಇದ್ದಾರೆ ಎನ್ನಲಾಗಿದೆ. ಇದೀಗ ಪ್ರಜ್ವಲ್ ರೇವಣ್ಣ ಮತ್ತೆ ಪರೋಕ್ಷವಾಗಿ ಶಿವಲಿಂಗೇಗೌಡ ಅವರಿಗೆ ಆಫರ್ ನೀಡಿದ್ದಾರೆ. ಜೆಡಿಎಸ್ ನಲ್ಲಿಯೇ ಉಳಿದುಕೊಂಡರೆ ನಮಗೆ ಸಂತೋಷ ಎಂದಿದ್ದಾರೆ.

ಹಾಸನದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ನಾವೂ ಅರಸೀಕೆರೆಗೆ ಇನ್ನು ಯಾವ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಹಾಲಿ ಶಾಸಕ ಶಿವಲಿಂಗೇಗೌಡ ನಾನಿನ್ನು ಜೆಡಿಎಸ್ ನಲ್ಲಿಯೇ ಇದ್ದೀನಿ ಅಂತ ಸದನದಲ್ಲಿ ಹೇಳಿದ್ದಾರೆ. ಹಾಸನ ಜಿಲ್ಲೆಯ ಎಲ್ಲಾ ಟಿಕೆಟ್ ಗಳನ್ನು ನಮ್ಮ ಕುಮಾರಣ್ಣನೇ ಅನೌನ್ಸ್ ಮಾಡುತ್ತಾರೆ. ನಾವೂ ಯಾರನ್ನು ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ.

ಮುಂದಿನ ತಿಂಗಳು ಪಂಚರತ್ನ ರಥಯಾತ್ರೆ ಹಾಸನದಲ್ಲಿ ನಡೆಯಲಿದೆ. ಕುಮಾರಸ್ವಾಮಿ ಮುಖ್ಯಮಂತ್ರಿ ಹಾಗೂ ಅರಸೀಕೆರೆ ಕ್ಷೇತ್ರದವರು ಶಾಸಕರಾಗುವ ತನಕ ಪ್ರಜ್ವಲ್ ರೇವಣ್ಣ ನಿದ್ದೆ ಮಾಡಲ್ಲ. ಯಾವತ್ತಿಗೂ ಶಿವಲಿಂಗಣ್ಣನನ್ನು ಆಚೆ ಹೋಗು ಅಂತ ಹೇಳಿಲ್ಲ. ಯಾರೇ ಅಭ್ಯರ್ಥಿ ಆಗಲಿ ಅವರ ಪರ ನಾವೂ ಕೆಲಸ ಮಾಡಬೇಕು. ಶಿವಲಿಂಗಣ್ಣ ಸದನದಲ್ಲಿ ಹೇಳಿದ್ದನ್ನೇ ಹೊರಗೆ ಬಂದು ಹೇಳಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

ಮಾಜಿ ಸಿಎಂ ಬಿಎಸ್ವೈ ವಿರುದ್ದ ಸಮರ ಸಾರಿದ್ರಾ ಪರಮಾಪ್ತ ಶಾಸಕ ಎಂ.ಚಂದ್ರಪ್ಪ. ?

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮಾ.28 : ಪುತ್ರನಿಗೆ ಬಿಜೆಪಿ ಟಿಕೇಟ್ ಕೈ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ ಅಸಮಧಾನ ವ್ಯಕ್ತಪಡಿಸಿದ್ದು,

error: Content is protected !!