Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೀಪಿಕಾ ಪಡುಕೋಣೆ ಪರವಾಗಿ ನಿಂತ ಪ್ರಕಾಶ್ ರಾಜ್..!

Facebook
Twitter
Telegram
WhatsApp

 

ಕಳೆದ ಕೆಲವು ದಿನಗಳಿಂದ ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಖಾನ್ ವಿರುದ್ಧ ಹಿಂದೂಪರ ಸಂಘಟನೆಗಳು ರೊಚ್ಚಿಗೆದ್ದಿವೆ. ನಮ್ಮ ಭಾವನೆಗಳಿಗೆ ಧಕ್ಕೆ ತಂದಿದ್ದೀರಿ ಅಂತ ಕೆಂಡಕಾರುತ್ತಿದ್ದಾರೆ. ಅದಕ್ಕೆಲ್ಲಾ ಕಾರಣ ದೀಪಿಕಾ ಪಡುಕೋಣೆ ಧರಿಸಿರುವ ಕೇಸರಿ ಕಲರ್ ಡ್ರೆಸ್.

ಪಠಾಣ್ ಸಿನಿಮಾದಲ್ಲಿ ಶಾರುಖ್ ಖಾನ್ ಜೊತೆಗೆ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಜೀರೋ ಸಿನಿಮಾದ ಸೋಲಿನ ಬಳಿಕ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿರುವಂತ ಸಿನಿಮಾವಾಗಿದೆ. ಈ ಸಿನಿಮಾ ಮುಂದಿನ ವರ್ಷ ಜನವರಿ 25ಕ್ಕೆ ತೆರೆಗೆ ಬರುತ್ತಿದೆ. ಆದ್ರೆ ರಿಲೀಸ್ ಗೂ ಮುನ್ನ ವಿವಾದಕ್ಕೆ ಸಿಲುಕಿದೆ.

ಸಿನಿಮಾದಲ್ಲಿ ಬೇಷರಂ ರಂಗ್ ಗೀತೆಯೊಂದಿದೆ. ಈ ಸಾಂಗ್ ನಲ್ಲಿ ದೀಪಿಕಾ ಅವರನ್ನು ನೋಡುತ್ತಿದ್ದರೆ ಪಡ್ಡೆ ಹೈಕ್ಳ ಹಾರ್ಟ್ ಗಲಿಬಿಲಿ ಆಗೋದು ಗ್ಯಾರಂಟಿ. ಸಿಕ್ಕಾಪಟ್ಟೆ ಹಾಟ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಬೇಷರಂ ರಂಗ್ ಹಾಡಲ್ಲಿ ಬಿಕಿನಿ ತೊಟ್ಟು ಡ್ಯಾನ್ಸ್ ಮಾಡುವ ದೀಪಿಕಾ ಕಡೆಯಲ್ಲಿ ಕೇಸರಿ ಬಣ್ಣದ ಡ್ರೆಸ್ ತೊಟ್ಟು ಶಾರುಕ್ ಜೊತೆಗೆ ಡ್ಯಾನ್ಸ್ ಮಾಡುತ್ತಾರೆ. ಇದು ಹಿಂದೂಪರ ಸಂಘಟನೆಗಳನ್ನು ಕೆರಳಿಸಿದೆ.

ಸಿನಿಮಾದಿಂದ ಮೊದಲು ಹಾಡನ್ನು ಡಿಲಿಟ್ ಮಾಡಿ ಇಲ್ಲವಾದರೆ ಸಿನಿಮಾವನ್ನು ನೋಡುವುದಕ್ಕೆ ಬಿಡುವುದಿಲ್ಲ ಎಂದು ಬಾಯ್ಕಾಟ್ ಸಂಸ್ಕೃತಿಯಲ್ಲಿ ಸಿನಿಮಾ ಬ್ಯಾನ್ ಗೆ ನಿಂತಿದ್ದಾರೆ. ಇದೀಗ ಇಷ್ಟೆಲ್ಲಾ ರಾದ್ಧಾಂತವಾದ ಬಳಿಕ ನಟ ಪ್ರಕಾಶ್ ರಾಜ್ ದೀಪಿಕಾ ಪಡುಕೋಣೆ ಪರವಾಗಿ ನಿಂತಿದ್ದಾರೆ. ಟ್ವೀಟ್ ಮಾಡಿರುವ ಪ್ರಕಾಶ್ ರಾಜ್, ಇನ್ನು ಎಷ್ಟು ದಿನ ನಾವೂ ಇಂತಹ ಅಂಧ ಭಕ್ತರನ್ನು ಸಹಿಸಿಕೊಳ್ಳಬೇಕು. ಇದು ಬಣ್ಣದ ಕುರುಡಲ್ಲವೇ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!