Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ಶಾಲೆಯಲ್ಲಿ ಸಂಭ್ರಮದ 75 ಗಣರಾಜ್ಯೋತ್ಸವ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ.26 :  ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ಶಾಲೆಯಲ್ಲಿ 75 ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿಸಲಾಯಿತು.

ಶಾಲೆಯ ಉಪಾಧ್ಯಕ್ಷ ಮತ್ತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ರೋಟೆರಿಯನ್ ಪಿ.ಎಚ್.ಎಫ್ ಉಮೇಶ್ ವಿ ತುಪ್ಪದ ತಮ್ಮ ಅಧ್ಯಕ್ಷತೆಯ ನುಡಿಯಲ್ಲಿ ಸಂವಿಧಾನದ ಹಾಗೂ ಕಾನೂನಿನ ಬಗ್ಗೆ ನಮ್ಮ ಜೀವನದಲ್ಲಿ ಹೇಗೆ ಪಾಲಿಸಬೇಕೆಂದು ತಿಳಿಸಿಕೊಟ್ಟರು.


ನಿಖಿತಾ ಮತ್ತು ತಂಡದವರು ದೇಶಭಕ್ತಿ ಗೀತೆ ಹಾಡುವುದರ ಮೂಲಕ ಪ್ರಾರ್ಥನೆಯನ್ನು ಕಾರ್ಯಕ್ರಮವನ್ನು ಪ್ರಾರಂಭಿಸಿದರು.
ಗಣ್ಯರೆಲ್ಲರಿಗೂ ಶಾಲಾ ಶಿಕ್ಷಕಿಯಾದ ತೇಜಸ್ವಿನಿ ಸ್ವಾಗತವನ್ನು ಕೋರಿದರು. ಪಥ ಸಂಚಲನ ಕಾರ್ಯಕ್ರಮವನ್ನು ಶಿಕ್ಷಕಿ ರಮ್ಯಾ  ತಂಡಗಳ ಪರಿಚಯದ ಮೂಲಕ ಬಂದಂತಹ ಅತಿಥಿಗಳಿಗೆ ಪರಿಚಿಸಿ ಕೊಟ್ಟರು. ಹಾಗೂ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಮಕ್ಕಳು ರಾಷ್ಟ್ರಗೀತೆಯ ಹಾಡುವದರ ಮೂಲಕ ಧ್ವಜಕ್ಕೆ ಗೌರವವನ್ನು ಸಲ್ಲಿಸಿದರು.

6ನೇ ತರಗತಿಯ ವಿದ್ಯಾರ್ಥಿ ವರುಣ್  ಮತ್ತು 5 ನೇ ತರಗತಿಯ ಮಹಮ್ಮದ್ ಅರ್ಬಾಸ್ ಗಣರಾಜ್ಯೋತ್ಸವದ ಬಗ್ಗೆ ಭಾಷಣವನ್ನು ಮಾಡಿದರು.

ಶಾಲೆಯ ಶಿಕ್ಷಕಿಯಾದ ಶ್ರೀಮತಿ ರೇಷ್ಮಾ ಸಂವಿಧಾನದ ಸಮಿತಿಯ ಬಗ್ಗೆ ಹಾಗೂ ಭಾರತದಲ್ಲಿರುವ ವಿವಿಧತೆಯಲ್ಲಿ ಏಕತೆಯ ಬಗ್ಗೆ ತಿಳಿಸಿಕೊಟ್ಟರು.

ದೇಶದ ಸೈನಿಕರನ್ನು ನೆನಪಿಸಿಕೊಳ್ಳುತ್ತಾ ನಮ್ಮ ಶಾಲೆಯ 4ನೇ ತರಗತಿಯ ವಿದ್ಯಾರ್ಥಿಯಾದ ಶ್ರೀನಿಧಿ ದೇಶಭಕ್ತಿ ಗೀತೆಯನ್ನು ಹಾಡಿದರು. ಅಧ್ಯಾಪನ ಮಕ್ಕಳಿಂದ ದೇಶಭಕ್ತಿ ಗೀತೆಯ ನೃತ್ಯವನ್ನು ಮಾಡಿದರು. ಕಾರ್ಯದರ್ಶಿಗಳಾದಂತಹ ಕಾರ್ತಿಕ್ ಎಂ ರವರು ವಂದನಾರ್ಪಣೆಯನ್ನು ನಡೆಸಿಕೊಟ್ಟರು. 7ನೇ ತರಗತಿಯ ಮಕ್ಕಳದಂತಹ ಕುಮಾರಿ ಹೇಮಲತಾ ವೈ ಹಾಗೂ ಸೈಯದ್ ಫರಾನ್ ಈ ಕಾರ್ಯಕ್ರಮದ ನಿರೂಪಣೆಯನ್ನು ನೆರವೇರಿಸಿದರು.

ಈ ಕಾರ್ಯಕ್ರಮಕ್ಕೆ ಟ್ರಸ್ಟಿಗಳಾದ ಮಾರುತಿ ಮೋಹನ್, ಡಾ. ಮಧುಸೂಧನ, ಡಾ.ಶ್ವೇತ ಕಾರ್ತಿಕ್  ಮತ್ತು  ಮುಖ್ಯ ಶಿಕ್ಷಕಿಯಾದ ಶ್ರೀಮತಿ ಶಶಿಕಲಾ ಎಂ. ಎಸ್ ರವರು  ಸಿಹಿ ವಿತರಿಸುವುದರ ಮೂಲಕ ಈ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment