Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ಶಾಲೆಯಲ್ಲಿ ಸಂಭ್ರಮದ 75 ಗಣರಾಜ್ಯೋತ್ಸವ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜನವರಿ.26 :  ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ಶಾಲೆಯಲ್ಲಿ 75 ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿಸಲಾಯಿತು.

ಶಾಲೆಯ ಉಪಾಧ್ಯಕ್ಷ ಮತ್ತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ರೋಟೆರಿಯನ್ ಪಿ.ಎಚ್.ಎಫ್ ಉಮೇಶ್ ವಿ ತುಪ್ಪದ ತಮ್ಮ ಅಧ್ಯಕ್ಷತೆಯ ನುಡಿಯಲ್ಲಿ ಸಂವಿಧಾನದ ಹಾಗೂ ಕಾನೂನಿನ ಬಗ್ಗೆ ನಮ್ಮ ಜೀವನದಲ್ಲಿ ಹೇಗೆ ಪಾಲಿಸಬೇಕೆಂದು ತಿಳಿಸಿಕೊಟ್ಟರು.


ನಿಖಿತಾ ಮತ್ತು ತಂಡದವರು ದೇಶಭಕ್ತಿ ಗೀತೆ ಹಾಡುವುದರ ಮೂಲಕ ಪ್ರಾರ್ಥನೆಯನ್ನು ಕಾರ್ಯಕ್ರಮವನ್ನು ಪ್ರಾರಂಭಿಸಿದರು.
ಗಣ್ಯರೆಲ್ಲರಿಗೂ ಶಾಲಾ ಶಿಕ್ಷಕಿಯಾದ ತೇಜಸ್ವಿನಿ ಸ್ವಾಗತವನ್ನು ಕೋರಿದರು. ಪಥ ಸಂಚಲನ ಕಾರ್ಯಕ್ರಮವನ್ನು ಶಿಕ್ಷಕಿ ರಮ್ಯಾ  ತಂಡಗಳ ಪರಿಚಯದ ಮೂಲಕ ಬಂದಂತಹ ಅತಿಥಿಗಳಿಗೆ ಪರಿಚಿಸಿ ಕೊಟ್ಟರು. ಹಾಗೂ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಮಕ್ಕಳು ರಾಷ್ಟ್ರಗೀತೆಯ ಹಾಡುವದರ ಮೂಲಕ ಧ್ವಜಕ್ಕೆ ಗೌರವವನ್ನು ಸಲ್ಲಿಸಿದರು.

6ನೇ ತರಗತಿಯ ವಿದ್ಯಾರ್ಥಿ ವರುಣ್  ಮತ್ತು 5 ನೇ ತರಗತಿಯ ಮಹಮ್ಮದ್ ಅರ್ಬಾಸ್ ಗಣರಾಜ್ಯೋತ್ಸವದ ಬಗ್ಗೆ ಭಾಷಣವನ್ನು ಮಾಡಿದರು.

ಶಾಲೆಯ ಶಿಕ್ಷಕಿಯಾದ ಶ್ರೀಮತಿ ರೇಷ್ಮಾ ಸಂವಿಧಾನದ ಸಮಿತಿಯ ಬಗ್ಗೆ ಹಾಗೂ ಭಾರತದಲ್ಲಿರುವ ವಿವಿಧತೆಯಲ್ಲಿ ಏಕತೆಯ ಬಗ್ಗೆ ತಿಳಿಸಿಕೊಟ್ಟರು.

ದೇಶದ ಸೈನಿಕರನ್ನು ನೆನಪಿಸಿಕೊಳ್ಳುತ್ತಾ ನಮ್ಮ ಶಾಲೆಯ 4ನೇ ತರಗತಿಯ ವಿದ್ಯಾರ್ಥಿಯಾದ ಶ್ರೀನಿಧಿ ದೇಶಭಕ್ತಿ ಗೀತೆಯನ್ನು ಹಾಡಿದರು. ಅಧ್ಯಾಪನ ಮಕ್ಕಳಿಂದ ದೇಶಭಕ್ತಿ ಗೀತೆಯ ನೃತ್ಯವನ್ನು ಮಾಡಿದರು. ಕಾರ್ಯದರ್ಶಿಗಳಾದಂತಹ ಕಾರ್ತಿಕ್ ಎಂ ರವರು ವಂದನಾರ್ಪಣೆಯನ್ನು ನಡೆಸಿಕೊಟ್ಟರು. 7ನೇ ತರಗತಿಯ ಮಕ್ಕಳದಂತಹ ಕುಮಾರಿ ಹೇಮಲತಾ ವೈ ಹಾಗೂ ಸೈಯದ್ ಫರಾನ್ ಈ ಕಾರ್ಯಕ್ರಮದ ನಿರೂಪಣೆಯನ್ನು ನೆರವೇರಿಸಿದರು.

ಈ ಕಾರ್ಯಕ್ರಮಕ್ಕೆ ಟ್ರಸ್ಟಿಗಳಾದ ಮಾರುತಿ ಮೋಹನ್, ಡಾ. ಮಧುಸೂಧನ, ಡಾ.ಶ್ವೇತ ಕಾರ್ತಿಕ್  ಮತ್ತು  ಮುಖ್ಯ ಶಿಕ್ಷಕಿಯಾದ ಶ್ರೀಮತಿ ಶಶಿಕಲಾ ಎಂ. ಎಸ್ ರವರು  ಸಿಹಿ ವಿತರಿಸುವುದರ ಮೂಲಕ ಈ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!