Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸತತ ಪ್ರಯತ್ನದ ನಡುವೆಯೂ ಕಾಂಗ್ರೆಸ್ ತಿರಸ್ಕರಿಸಿ ಪ್ರಶಾಂತ್ ಕಿಶೋರ್ ರಿಂದ ಹೊಸ ಪಕ್ಷ ಘೋಷಣೆ..!

Facebook
Twitter
Telegram
WhatsApp

ದೆಹಲಿ: ರಾಜಕೀಯ ನಿಪುಣ ಪ್ರಶಾಂತ್ ಕಿಶೋರ್ ರಿಂದ ಮಹತ್ವದ ನಿರ್ಧಾರ ಹೊರ ಬಿದ್ದಿದೆ. ಕಳೆದ ಕೆಲವು ತಿಂಗಳುಗಳಿಂದ ಕಾಂಗ್ರೆಸ್ ನಾಯಕರು ತಮ್ಮ ಪಕ್ಷಕ್ಕೆ ಸೆಳೆದುಕೊಳ್ಳುವ ಸಲುವಾಗಿ ಸತತ ಪ್ರಯತ್ನ ಮಾಡಿದರು. ಆದರೆ ಅದೆಲ್ಲವನ್ನು ರಿಜೆಕ್ಟ್ ಮಾಡಿ ಇದೀಗ ಹಿಸ ಪಕ್ಷ ಘೋಷಣೆ ಮಾಡಿದ್ದಾರೆ.

ಬಿಜೆಪಿ, ಟಿಎಂಸಿ, ಡಿಎಂಕೆ ಸೇರಿದಂತೆ ಹಲವು ಪ್ರಮುಖ ರಾಜಕೀಯ ಪಕ್ಷಗಳು ಗದ್ದುಗೆ ಏರಲು ನೆರವಾಗಿದ್ದು ಇದೇ ಪ್ರಶಾಂತ್ ಕಿಶೋರ್. ಇವರ ರಾಜಕೀಯ ತಂತ್ರದಿಂದಲೇ ಆ ಪಕ್ಷಗಳು ಗದ್ದುಗೆ ಏರಲು ಸಾಧ್ಯವಾಗಿದ್ದು. ಇದೇ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಅವರನ್ನು ಸಂಪರ್ಕಿಸಿತ್ತು. ಈ ಬಾರಿ ಹೇಗಾದರೂ ಮಾಡಿ, ಅಧಿಕಾರದ ಗದ್ದುಗೆ ಹಿಡಿಯಲು ಬಯಸಿದ್ದ ಕಾಂಗ್ರೆಸ್ ಗೆ ಪ್ರಶಾಂತ್ ಕಿಶೋರ್ ಬರಲ್ಲ ಎಂದೇ ಹೇಳಿದ್ದರು.

ಹೊಸ ನಿರ್ಧಾರ ಪ್ರಕಟಿಸಿರುವ ಪ್ರಶಾಂತ್ ಕಿಶೋರ್ ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಎಲ್ಲರನ್ನು ಒಳಗೊಳ್ಳುವ ಅರ್ಥಪೂರ್ಣ ಪ್ರಜಾಪ್ರಭುತ್ವ ಮತ್ತು ಜನಸ್ನೇಹಿ ನೀತಿ ರೂಪಿಸುವ ನನ್ನ ಪ್ರಯತ್ನದ ಫಲವಾಗಿ 10 ವರ್ಷಗಳ ತಡೆಯಿಲ್ಲದ ಆಡಳಿತ ಅವಕಾಶಕ್ಕೆ ಮುನ್ನುಡಿ ಬರೆಯಿತು. ಈಗ ನಾನು ಪುಟ ತಿರುವಿ ಹಾಕಿದಂತೆ ಪ್ರಜಾಪ್ರಭುತ್ವದ ನಿಜವಾದ ಮಾಲೀಕರಾದ ಜನರ ಬಳಿಗೆ ಹೋಗಬೇಕಿದೆ. ವಿಚಾರಗಳನ್ನು ಸಮರ್ಪಕವಾಗಿ ಅರ್ಥ ಮಾಡಿಕೊಳ್ಳಲು ಮತ್ತು ಜನರಿಂದ ಉತ್ತಮ ಆಡಳಿತ ಸ್ಥಾಪಿಸಲು ಇದು ಸರಿಯಾದ ಸಮಯ ಎಂದುಕೊಂಡಿದ್ದೇನೆ. ಬಿಹಾರದಿಂದ ಈ ಪ್ರಯತ್ನ ಆರಂಭವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

error: Content is protected !!