Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜಕೀಯ ಪಕ್ಷಗಳಿಗೆ ಸಲಹೆ ನೀಡಲು ಪ್ರಶಾಂತ್ ಕಿಶೋರ್ ತೆಗೆದುಕೊಳ್ಳುವ ಹಣ 50-60 ಕೋಟಿ ಅಲ್ಲ.. ಕೇಳಿದ್ರೆ ಶಾಕ್ ಆಗ್ತೀರ..!

---Advertisement---

 

 

ಜನರ ನಾಡಿಮಿಡಿತ ಅರಿಯುವುದು ರಾಜಕೀಯ ಪಕ್ಷಗಳಿಗೆ ದೊಡ್ಡ ಸವಾಲಿನ ಕೆಲಸವೇ ಸರಿ. ಚುನಾವಣೆ ಎಂದು ಬಂದಾಗ ರಾಜಕೀಯ ಪಕ್ಷಗಳು ಐಡಿಯಾ ಕೊಡುವವರ ಮೊರೆ ಹೋಗುತ್ತಾರೆ. ಅಂದ್ರೆ ರಾಜಕೀಯದಲ್ಲಿ ತಂತ್ರಗಾರಿಕೆ ಬಹಳ ಮುಖ್ಯ. ಯಾವ ಸ್ಟಾಟರ್ಜಿ ಯೂಸ್ ಮಾಡಬೇಕು ಎಂಬುದು ಚೆನ್ನಾಗಿ ಅರಿತಿರಬೇಕಾಗುತ್ತದೆ. ಹೀಗಾಗಿ ರಾಜಕಾರಣಿಗಳಿಗೆ ಚುನಾವಣಾ ವಿಚಾರದಲ್ಲಿ ಸಲಹೆಗಳನ್ನು ನೀಡುವುದರಲ್ಲಿ ಪ್ರಶಾಂತ್ ಕಿಶೋರ್ ಹೆಸರು ಉತ್ತುಂಗದಲ್ಲಿದೆ. ಆದರೆ ರಾಜಕೀಯ ಪಕ್ಷಗಳಿಗೆ ಸಲಹೆಗಳನ್ನು ನೀಡಲು ಎಷ್ಟು ಹಣ ಪಡೆಯಬಹುದು ಎಂಬ ಕುತೂಹಲಕ್ಕೆ ಪ್ರಶಾಂತ್ ಕಿಶೋರ್ ಅವರೇ ಬ್ರೇಕ್ ಹಾಕಿದ್ದಾರೆ. ಹಣದ ವಿಚಾರವನ್ನು ರಿವೀಲ್ ಮಾಡಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಕ್ಕೆ ಪ್ರಶಾಂತ್ ಕಿಶೋರ್ ಅವರ ರಣತಂತ್ರವೇ ಕಾರಣ. ರಾಜಕೀಯ ಪಕ್ಷಗಳಿಗೆ ಸಲಹೆ ಕೊಡುತ್ತಿದ್ದವರು ಈಗ ಬಿಹಾರದಿಂದ ರಾಜಕಾರಣಕ್ಕೆ ಧುಮ್ಮುಕ್ಕಿದ್ದಾರೆ. ತಮ್ಮದೇ ಪಕ್ಷ ಕಟ್ಟಿ ಉಪಚುನಾವಣೆಗಳಲ್ಲಿ ಸ್ಪರ್ಧಿಸಲು ಸಿದ್ಧರಾಗಿದ್ದಾರೆ.

ಇದರ ನಡುವೆ ಸಲಹೆಗಾಗಿ ಎಷ್ಟು ಹಣ ತೆಗೆದುಕೊಳ್ಳುತ್ತಾರೆ ಎಂಬುದನ್ನು ಹೇಳಿದ್ದಾರೆ. ಯಾವುದೇ ರಾಜಕೀಯ ಪಕ್ಷ ಅಥವಾ ರಾಜಕಾರಣಿಗೆ ಸಲಹೆಗಳನ್ನು ನೀಡಿದರು. ಅವರ ಬಳಿ 100 ಕೋಟಿ ಹಣ ಪಡೆಯುತ್ತಾರಂತೆ. ಬೆಲಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾಗ ‘ನನ್ನ ಬಳಿ ಹಣವಿಲ್ಲ. ಹೇಗೆ ಪ್ರಚಾರ ಮಾಡುತ್ತಾನೆ ಎಂದು ಹೇಳುತ್ತಾರೆ. ನಾನು ಯಾವುದೇ ರಾಜಕೀಯ ಪಕ್ಷಗಳಿಗೆ ಸಲಹೆ ನೀಡಿದರೂ ಅವರಿಂದ 100 ಕೋಟಿ ಪಡೆಯುತ್ತೇನೆ. ನನ್ನ ಸಲಹೆ ಪಡೆದ ಪಕ್ಷಗಳು 10 ರಾಜ್ಯದಲ್ಲಿ ಅಧಿಕಾರ ಹಿಡಿದಿವೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment