ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮೈಸೂರು: ಇಲ್ಲಿನ ರಾಜಕುಮಾರಿ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡಬೇಕೆಂದು ಮಹಾನಗರ ಪಾಲಿಕೆ ನಿರ್ಧಾರ ಮಾಡಿತ್ತು. ಈ ವಿಚಾರಕ್ಕೆ ಬಿಜೆಪಿ ನಾಯಕರು ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ. ರಾಜವಂಶಸ್ಥರಾದ ಯದುವೀರ್ ಅವರು ಪಾಲಿಕೆಯ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಅವರದ್ದೇ ಪಕ್ಷದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಿದ್ದರಾಮಯ್ಯ ಅವರ ಹೆಸರಿಡಲಿ ಎಂದಿದ್ದರು.
ಸಿದ್ದರಾಮಯ್ಯ ಅವರ ಹೆಸರಿಟ್ಟರೆ ತಪ್ಪೇನು ಎಂದಿದ್ದರು. ಅವರ ಹೇಳಿಕೆಗೆ ಒಡೆಯರದ ಅವರು ವಿರೋಧ ವ್ಯಕ್ತಪಡಿಸಿ, ಪ್ರತಾಪ್ ಸಿಂಹರಿಗೆ ಇತಿಹಾಸ ತಿಳಿದಿಲ್ಲ. ಪ್ರಿನ್ಸೆಸ್ ರಸ್ತೆಯ ಇತಿಹಾಸ ತಿಳಿಸಿದ ಮೇಲೆ ಅವರಿಗೆ ಗೊತ್ತಾಗಲಿದೆ ಎಂದಿದ್ದರು. ಈಗ ಮತ್ತೆ ಸಿದ್ದರಾಮಯ್ಯ ಅವರ ಪರವೇ ಪ್ರತಾಪ್ ಸಿಂಹ ಮಾತನಾಡಿದ್ದಾರೆ. ಪ್ರಿನ್ಸೆಸ್ ರಸ್ತೆ ಅಂತ ದಾಖಲೆ ಇದ್ದರೆ ಬದಲಾವಣೆ ಬೇಡ. ಸಿದ್ದರಾಮಯ್ಯ ಅವರ ಹೆಸರನ್ನು ಬೇರೆ ರಸ್ತೆಗೆ ಇಡಲಿ. ನಾನು ಕಾಂಗ್ರೆಸ್ ಶಾಸಕ ಹರೀಶ್ ಗೌಡಗೆ ಮನವಿ ಮಾಡುತ್ತೇನೆ ಎಂದಿದ್ದಾರೆ.
ಒಂದೊಮ್ಮೆ ಪ್ರಿನ್ಸೆಸ್ ರಸ್ತೆ ಎಂದು ಕರೆಯುವುದಕ್ಕೆ ದಾಖಲೆ ಇದ್ದರೆ ಬದಲಾವಣೆ ಬೇಡ. ಹೊಸ ಬಡಾವಣೆ ಮಾಡಿ ಸಿದ್ದರಾಮಯ್ಯ ಅವರ ಹೆಸರಿಡಲಿ. ಇದನ್ನು ಇಲ್ಲಿಗೆ ನಿಲ್ಲಿಸೋಣ. ನಾನು ಕಾರ್ಪೋರೇಷನ್ ನಲ್ಲಿ ಕೇಳಿದಾಗ ಆ ರಸ್ತೆಗೆ ಹೆಸರಿಲ್ಲ ಎಂದಿದ್ದರು. ಹಾಗಾಗಿ ಸಿದ್ದರಾಮಯ್ಯ ಹೆಸರಿಡಲಿ ಬಿಡಿ ಎಂದಿದ್ದೆ. ಮೈಸೂರಿಗೆ ಸಿದ್ದರಾಮಯ್ಯ ಅವರ ಕೊಡುಗೆ ಸಾಕಷ್ಟಿದೆ. ಸಿದ್ದರಾಮಯ್ಯ ಹೆಸರಿಡಿ ಎಂದಾಕ್ಷಣ ನಾನು ಸಿದ್ದರಾಮಯ್ಯ ಪರ ಅಲ್ಲ. ಕಾಂಗ್ರೆಸ್ ಕೂಡ ಸೇರಲ್ಲ. ನಾನು ಬದ್ಧತೆ ಇರುವ ವ್ಯಕ್ತಿ. ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್