Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮತ್ತೆ ಸಿದ್ದರಾಮಯ್ಯ ಹೆಸರಿನ ಪರ ಬ್ಯಾಟ್ ಬೀಸಿದ ಪ್ರತಾಪ್ ಸಿಂಹ : ಯದುವೀರ್ ಮಾತಿಗೆ ಹೇಳಿದ್ದೇನು..?

---Advertisement---

ಮೈಸೂರು: ಇಲ್ಲಿನ ರಾಜಕುಮಾರಿ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡಬೇಕೆಂದು ಮಹಾನಗರ ಪಾಲಿಕೆ ನಿರ್ಧಾರ ಮಾಡಿತ್ತು. ಈ ವಿಚಾರಕ್ಕೆ ಬಿಜೆಪಿ ನಾಯಕರು ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ. ರಾಜವಂಶಸ್ಥರಾದ ಯದುವೀರ್ ಅವರು ಪಾಲಿಕೆಯ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಅವರದ್ದೇ ಪಕ್ಷದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಿದ್ದರಾಮಯ್ಯ ಅವರ ಹೆಸರಿಡಲಿ ಎಂದಿದ್ದರು.

ಸಿದ್ದರಾಮಯ್ಯ ಅವರ ಹೆಸರಿಟ್ಟರೆ ತಪ್ಪೇನು ಎಂದಿದ್ದರು. ಅವರ ಹೇಳಿಕೆಗೆ ಒಡೆಯರದ ಅವರು ವಿರೋಧ ವ್ಯಕ್ತಪಡಿಸಿ, ಪ್ರತಾಪ್ ಸಿಂಹರಿಗೆ ಇತಿಹಾಸ ತಿಳಿದಿಲ್ಲ. ಪ್ರಿನ್ಸೆಸ್ ರಸ್ತೆಯ ಇತಿಹಾಸ ತಿಳಿಸಿದ ಮೇಲೆ ಅವರಿಗೆ ಗೊತ್ತಾಗಲಿದೆ ಎಂದಿದ್ದರು. ಈಗ ಮತ್ತೆ ಸಿದ್ದರಾಮಯ್ಯ ಅವರ ಪರವೇ ಪ್ರತಾಪ್ ಸಿಂಹ ಮಾತನಾಡಿದ್ದಾರೆ. ಪ್ರಿನ್ಸೆಸ್ ರಸ್ತೆ ಅಂತ ದಾಖಲೆ ಇದ್ದರೆ ಬದಲಾವಣೆ ಬೇಡ. ಸಿದ್ದರಾಮಯ್ಯ ಅವರ ಹೆಸರನ್ನು ಬೇರೆ ರಸ್ತೆಗೆ ಇಡಲಿ. ನಾನು ಕಾಂಗ್ರೆಸ್ ಶಾಸಕ ಹರೀಶ್ ಗೌಡಗೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ಒಂದೊಮ್ಮೆ ಪ್ರಿನ್ಸೆಸ್ ರಸ್ತೆ ಎಂದು ಕರೆಯುವುದಕ್ಕೆ ದಾಖಲೆ ಇದ್ದರೆ ಬದಲಾವಣೆ ಬೇಡ. ಹೊಸ ಬಡಾವಣೆ ಮಾಡಿ ಸಿದ್ದರಾಮಯ್ಯ ಅವರ ಹೆಸರಿಡಲಿ. ಇದನ್ನು ಇಲ್ಲಿಗೆ ನಿಲ್ಲಿಸೋಣ. ನಾನು ಕಾರ್ಪೋರೇಷನ್ ನಲ್ಲಿ ಕೇಳಿದಾಗ ಆ ರಸ್ತೆಗೆ ಹೆಸರಿಲ್ಲ ಎಂದಿದ್ದರು. ಹಾಗಾಗಿ ಸಿದ್ದರಾಮಯ್ಯ ಹೆಸರಿಡಲಿ ಬಿಡಿ ಎಂದಿದ್ದೆ. ಮೈಸೂರಿಗೆ ಸಿದ್ದರಾಮಯ್ಯ ಅವರ ಕೊಡುಗೆ ಸಾಕಷ್ಟಿದೆ. ಸಿದ್ದರಾಮಯ್ಯ ಹೆಸರಿಡಿ ಎಂದಾಕ್ಷಣ ನಾನು ಸಿದ್ದರಾಮಯ್ಯ ಪರ ಅಲ್ಲ. ಕಾಂಗ್ರೆಸ್ ಕೂಡ ಸೇರಲ್ಲ. ನಾನು ಬದ್ಧತೆ ಇರುವ ವ್ಯಕ್ತಿ. ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...