ವಿದ್ಯಾರ್ಥಿಗಳಿಗೆ ಮಾದಿಗ ಯುವ ಸೇನೆಯಿಂದ ಪ್ರತಿಭಾ ಪುರಸ್ಕಾರ

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.17) : ಮತಗಳನ್ನು ಮೌಲ್ಯ ಮಾಡಿಕೊಂಡು ಚುನಾವಣೆಯಲ್ಲಿ ಯೋಗ್ಯರನ್ನು ಆಯ್ಕೆ ಮಾಡಿಕೊಳ್ಳುವ ಬದಲು ಮಾರಾಟ ಮಾಡಿದರೆ ಪ್ರಜಾಪ್ರಭುತ್ವ ನಾಶವಾಗುವುದರಲ್ಲಿ ಸಂದೇಹವಿಲ್ಲ ಎಂದು ಸಾಮಾಜಿಕ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಪ್ರೊ.ಸಿ.ಕೆ.ಮಹೇಶ್ ಹೇಳಿದರು.

ಜಿಲ್ಲಾ ಮಾದಿಗ ಯುವ ಸೇನೆ, ಕಣಿವೆ ಮಾರಮ್ಮ ಸಂಘ, ಸ್ಲಂ ಜನಾಂದೋಲನ-ಕರ್ನಾಟಕ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಡಾ.ಬಾಬು ಜಗಜೀವನರಾಂರವರ ಪುಣ್ಯತಿಥಿ ಅಂಗವಾಗಿ ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪತ್ರಕರ್ತರ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಆಶಯಗಳನ್ನಿಟ್ಟುಕೊಂಡು ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಕೊಟ್ಟಾಗ ಮಾತ್ರ ಸಮಾಜಮುಖಿಯಾಗಿ ಹೊರಹೊಮ್ಮಬಹುದು. ಉದ್ಯಮಿಗಳು ಚುನಾವಣೆಗೆ ನಿಂತು ಗೆಲ್ಲುತ್ತಾರೆಂದರೆ ವಿಧಾನಸಭೆಯಲ್ಲಿ ಬಡವರ ಅಭ್ಯುದಯದ ಬಗ್ಗೆ ಧ್ವನಿ ಎತ್ತುವವರ್ಯಾರು ಎಂದು ಪ್ರಶ್ನಿಸಿದ ಪ್ರೊ.ಸಿ.ಕೆ.ಮಹೇಶ್ ಶೇ. 96 ಭಾಗದಷ್ಟು ಕೋಟ್ಯಾಧಿಪತಿಗಳೆ ಚುನಾವಣೆಯಲ್ಲಿ ಗೆಲ್ಲುವಂತಾಗಿದೆ ಎಂದು ವಿಷಾಧಿಸಿದರು.

ಕಟ್ಟ ಕಡೆಯ ಮನುಷ್ಯನಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬದಲು ಕಾಂಗ್ರೆಸ್‍ನವರು ಚುನಾವಣಾ ಪೂರ್ವದಲ್ಲಿಯೇ ಐದು ಗ್ಯಾರೆಂಟಿಗಳನ್ನು ಘೋಷಿಸಿದ್ದರಿಂದ ಆಧಿಕಾರಕ್ಕೆ ಬರಲು ಸಾಧ್ಯವಾಯಿತು. ಆರ್.ಎಸ್.ಎಸ್. ಬಿಜೆಪಿ.ಯನ್ನು ಹೊರತುಪಡಿಸಿದರೆ ಇದು ಕೂಡ ಒಂದು ರೀತಿಯ ನಯವಂಚಕತನ ಎನ್ನುವುದರಲ್ಲಿ ಅನುಮಾನವಿಲ್ಲ. ಈಗಲಾದರೂ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಇಂತಹ ನಯವಂಚಕತನದ ವಿರುದ್ದ ಎಚ್ಚೆತ್ತುಕೊಂಡು ಬ್ರಾಹ್ಮಣ್ಯರ ವಿರುದ್ದ ರಾಜಕೀಯ ತೆರೆ ಎಳೆಯಬೇಕಾಗಿದೆ ಎಂದು ಜಾಗೃತಿಗೊಳಿಸಿದರು.

ಅಂಬೇಡ್ಕರ್ ಸಿದ್ದಾಂತವನ್ನು ಕೈಗೆತ್ತಿಕೊಂಡು ಬುದ್ದನ ಕಡೆ ಹೋದಾಗ ಮಾತ್ರ ಅಮೂಲ್ಯವಾದ ಮತಗಳನ್ನು ಮೌಲ್ಯ ಮಾಡಿಕೊಳ್ಳಬಹುದು. ಇದು ಅಂಬೇಡ್ಕರ್‍ರವರ ಆಶಯವೂ ಕೂಡ ಆಗಿತ್ತು ಎನ್ನುವುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.
ದಲಿತ ಮುಖಂಡ ಬಿ.ರಾಜಪ್ಪ ಮಾತನಾಡುತ್ತ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನವನ್ನು ಕೊಟ್ಟಿರುವುದರಿಂದ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಶಕ್ತಿ ಬಂದಿದೆ. ಹಿಂದಿನ ಕಾಲದಲ್ಲಿ ಬೀದಿ ದೀಪದ ಕೆಳಗೆ ಕುಳಿತು ಓದಿದವರು ದೊಡ್ಡ ಮಹನೀಯರಾಗಿದ್ದಾರೆ. ಇಂದು ಸಾಕಷ್ಟು ಸೌಲಭ್ಯಗಳಿವೆ. ಎಲ್ಲವನ್ನು ಬಳಸಿಕೊಂಡು ನೀವುಗಳು ಶಿಕ್ಷಣವಂತರಾದ ಮೇಲೆ ಕೊಳಗೇರಿ ಇನ್ನಿತರೆ ಕಡೆ ವಾಸಿಸುತ್ತಿರುವ ಬಡವರಿಗೆ ನೆರವಾಗಿ ಎಂದು ಮನವಿ ಮಾಡಿದರು.

1911, 1921, 1931 ರಲ್ಲಿ ಬ್ರಿಟೀಷ್ ಸರ್ಕಾರ ದಲಿತರನ್ನು ಅಸ್ಪøಶ್ಯರು ಎಂದು ಗುರುತಿಸಿತು. 1947 ರಿಂದ 51 ರವರೆಗೆ ಕಾನೂನು ಸಚಿವರಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಮಹಿಳೆಗೆ ಮೀಸಲಾತಿ ಬಿಲ್ ಪಾಸ್ ಮಾಡಲಿಲ್ಲ ಎಂದು ಅಧಿಕಾರವನ್ನು ತ್ಯಜಿಸಿ ಹೊರ ಬಂದರು. ಅದಕ್ಕಾಗಿ ಅವರ ತತ್ವ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಿರಿ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ಸರ್ಕಾರಿ ಕಲಾ ಕಾಲೇಜು ಉಪನ್ಯಾಸಕ ಪ್ರೊ.ಎಲ್.ನಾಗರಾಜಪ್ಪ, ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಬಿ.ಟಿ. ತಿಪ್ಪೇರುದ್ರಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ನಿವೃತ್ತ ನಿರ್ದೇಶಕ ಡಾ.ಎಲ್.ಮಲ್ಲಣ್ಣ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಪರಮೇಶ್ವರಪ್ಪ, ದಲಿತ ಮುಖಂಡ ನಾಗರಾಜ್, ಎನ್.ಶಿವಕುಮಾರ್, ಸಿ.ಎ.ತಿಪ್ಪೇಸ್ವಾಮಿ, ನೇಹ ಮಲ್ಲೇಶ್, ಮಹಲಿಂಗಪ್ಪ, ಸುರೇಶ್, ಜೆ.ಪ್ರಸನ್ನಕುಮಾರ್, ಬಿ.ಟಿ.ಸಂಪತ್‍ಕುಮಾರ್, ಎಂ.ವೆಂಕಟೇಶ್, ಓ.ಸೋಮಣ್ಣ, ನಾಗೇಂದ್ರಬಾಬು, ಪಿ.ದೇವರಾಜ್, ಪ್ರಕಾಶ್, ಮಲ್ಲಿಕಾರ್ಜುನ, ಮಹೇಶ, ಜಿ.ಚೌಡಪ್ಪ, ಹನುಮಂತಪ್ಪ, ಹೊನ್ನೂರಪ್ಪ, ಪುರುಷೋತ್ತಮ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago