ಶಿಳ್ಳೆ, ಚಪ್ಪಾಳೆ ಬೇಡ.. ಶಿಸ್ತು ಇರಲಿ : ನೂತನ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್

ಬೆಂಗಳೂರು: ಇಂದು ಯುವ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕರಿಸಿದ್ದಾರೆ. ಪ್ರತಿಜ್ಞಾ ವಿಧಿ ಕಾರ್ಯಕ್ರಮ ಅದ್ದೂರಿಯಾಗಿಯೇ ನಡೆದಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ನಲಪಾಡ್, ಶಿಳ್ಳೆ ಹೊಡೆಯಬೇಡಿ, ಚಪ್ಪಾಳೆ ಹೊಡೆಯಬೇಡಿ, ಶಿಸ್ತು ಇರಲಿ. ನಾನು ಇಲ್ಲಿಯವರೆಗೂ ಯಾವುದೇ ರೀತಿಯ ಕೆಟ್ಟದ್ದನ್ನು ಮಾಡಿಲ್ಲ. ಕೆಟ್ಟದ್ದನ್ನು ಕೂಡ ಬಯಸಿಲ್ಲ. ನಾನು ಯುವಕರ ಧ್ವನಿಯಾಗಬೇಕೆಂದೆ ಬಯಸಿದ್ದೇನೆ. ರಾಹುಲ್ ಗಾಂಧಿಯವರಿಗೆ ನಾನು ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

ಪ್ರತಿಜ್ಞಾ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆದ್ರೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ, ಮಾಜಿ ಅಧ್ಯಕ್ಷ ರಕ್ಷಾ ರಾಮಯ್ಯ ಕೂಡ ಗೈರಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *