Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ – ಜೆಡಿಎಸ್ ಮೈತ್ರಿಕೂಟ ಸೇರಿದಂತೆ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಕೋಡಿಶ್ರೀಗಳಿಂದ ಭವಿಷ್ಯ..!

---Advertisement---

 

ಇತ್ತಿಚೆಗೆ ರಾಜ್ಯ ರಾಜಕೀಯದಲ್ಲಿ ಲೋಕಸಭಾ ಚುನಾವಣೆಗಾಗಿ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ಬಿಜೆಪಿ ಸೋಲಿಸಲು ವಿಪಕ್ಷಗಳು ಒಂದಾಗಿದ್ದರೆ, ಇತ್ತ ಕಾಂಗ್ರೆಸ್ ಸೋಲಿಸಲು ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಒಂದಾಗಿದೆ. ಮೈತ್ರಿ ಬಗ್ಗೆ ಈಗಾಗಲೇ ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಕೋಡಿಶ್ರೀ ಮಠದ ಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.

ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಅವರು ಆಗಾಗ ಸಮಾಜದಲ್ಲಿನ ಆಗುಹೋಗುಗಳು ಬಗ್ಗೆ ಭವಿಷ್ಯ ನುಡಿಯುತ್ತಿರುತ್ತಾರೆ. ಆ ಭವಿಷ್ಯ ಸಾಕಷ್ಟು ಬಾರಿ ನಿಜವಾಗಿದೆ. ಇದೀಗ ಮೈತ್ರಿ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,’ಅದುವ ಅವರವರ ವಿಚಾರ. ಈ ವಿಚಾರದ ಬಗ್ಗೆ ಏನನ್ನು ಹೇಳುವುದಕ್ಕೆ ಆಗುವುದಿಲ್ಲ. ದೇಶದ ಬಗ್ಗೆ ಈ ಹಿಂದೆಯೂ ಹೇಳಿದ್ದೆ. ದೊಡ್ಡ ದೊಡ್ಡ ನಗರಗಳಿಗೆ ಆಪತ್ತು ಕಾದಿದೆ ಎಂದು. ಮುಂದಿನ ದಿನಗಳಲ್ಲಿ ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಕಾಡಲಿದೆ. ಯುಗಾದಿ ನಂತರ ಏನಾಗುತ್ತೋ ಕಾದು ನೋಡೋಣಾ’ ಎಂದು ಅಚ್ಚರಿಯ ಮಾತುಗಳನ್ನು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಮಳೆಯಿಲ್ಲದ ರೈತ ಕಂಗಲಾಗಿದ್ದಾನೆ. ಈಗಲೂ ಭರವಸೆಯಿಂದಾನೇ ನೋಡುತ್ತಿದ್ದಾರೆ. ಆದರೆ ಮಳೆ ಹಾಗೊಮ್ಮೆ ಬಂದು ಹೀಗೊಮ್ಮೆ ಕೈಕೊಡುತ್ತಿದೆ. ಹೀಗಾಗಿ ರಾಜ್ಯದ ಬರದ ಪರಿಸ್ಥಿತಿ ಬಗ್ಗೆಯೂ ಕೋಡಿಶ್ರೀ ಮಾತನಾಡಿದ್ದಾರೆ. ‘ಮನುಷ್ಯ ಮಾಡಿದ ತಪ್ಪುಗಳಿಗೆ ದೇವರು ಕ್ಷಮಿಸುತ್ತಾನೆ. ಆದರೆ ಮನುಷ್ಯ ಮಾಡಿದ ಪಾಪ ಕರ್ಮಗಳು ಮನುಷ್ಯನನ್ನು ಕ್ಷಮಿಸುವುದಿಲ್ಲ. ಮನುಷ್ಯನ ಪಾಪ ಕರ್ಮಗಳೇ ಇಂಥಹ ಪರಿಸ್ಥಿತಿಗೆ ಕಾರಣ. ಮನುಷ್ಯನ ಕರ್ಮಬಾಧೆ ಹೆಚ್ಚಿದಾಗ, ಇಂತಹ ಪಾಪ ಕರ್ಮಗಳನ್ನು ಸಾಮೂಹಿಕವಾಗಿ ಅನುಭವಿಸಬೇಕಾಗುತ್ತದೆ’ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...