ಕಾರ್ಯಕರ್ತರಿರುವುದು ಜೀತ ಮಾಡಲು : ಜೆಡಿಎಸ್ ಬಗ್ಗೆ ಕಿಡಿಕಾರಿದ ಪ್ರೀತಂಗೌಡ..!

suddionenews
1 Min Read

ಹಾಸನ: ವಿಧಾನ ಪರಿಷತ್ ಚುನಾವಣೆಗೆ ಹಾಸನದಿಂದ ಈ ಬಾರಿ ರೇವಣ್ಣ ಅವರ ಮಗ ಸೂರಜ್ ರೇವಣ್ಣ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಶಾಸಕ ಪ್ರೀತಂ ಗೌಡ ಜೆಡಿಎಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಜೆಡಿಎಸ್ ಕೇವಲ ಕುಟುಂಬ ರಾಜಕಾರಣದ ಪಕ್ಷ, ಕಾರ್ಯಕರ್ತರು ಪಕ್ಷದ ಜೀತದಾಳುಗಳಷ್ಟೇ ಎಂದಿದ್ದಾರೆ.

ಬಿಜೆಪಿಯಿಂದ ಜನಸ್ವರಾಜ್ ಸಮಾವೇಶ ನಡೆಯುತ್ತಿದೆ. ಇಂದು ಹಾಸನದ ಖಾಸಗಿ ಕಾಲೇಜೊಂದರಲ್ಲಿ ನಡೆದಿದೆ. ಈ ಸಮಾವೇಶದಲ್ಲಿ ಮಾತನಾಡಿದ ಪ್ರೀತಂ ಗೌಡ, ಕುಟುಂಬ ರಾಜಕಾರಣದಿಂದ ಜೆಡಿಎಸ್ ಕಾರ್ಯಕರ್ತರು ರೋಸಿ ಹೋಗಿದ್ದಾರೆ. ಜೆಡಿಎಸ್ ಇರುವುದೇ ಕುಟುಂಬ ರಾಜಕಾರಣ ಮಾಡಲು ಎಂದಿದ್ದಾರೆ.

ಎಂಎಲ್‌ಸಿ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ನೇರ ಹೋರಾಟ ನಡೆಯಲಿದೆ. ಜೆಡಿಎಸ್ ಪಕ್ಷ ಕೇವಲ ಮೂರು ಜೆಲ್ಲೆಗೆ ಮಾತ್ರ ಸೀಮಿತವಾಗಿದೆ. ನಮ್ಮ ಪಕ್ಷದ ಎಂಎಲ್‌ಸಿ ಅಭ್ಯರ್ಥಿ ಹೆಚ್.ಎಂ.ವಿಶ್ವನಾಥ್ ಗೆದ್ದೇ ಗೆಲ್ಲುತ್ತಾರೆ. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೆಲ್ಲಾ ಒಗ್ಗಟ್ಟಾಗಿ ಹೋರಾಟ ಮಾಡೋಣ ಎಂದು ಕರೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *