Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ ಸಚಿವ ಸ್ಥಾನದ ಜೊತೆಗೆ ಜಿಲ್ಲಾ ಉಸ್ತುವಾರಿ  ಹೊಣೆಯನ್ನು ನೀಡಿ : ಮಹೇಶ್

---Advertisement---

 

ವರದಿ ಮತ್ತು ಫೋಟೋ ಕೃಪೆ
                         ಸುರೇಶ್ ಪಟ್ಟಣ್,                         
ಮೊ : 87220 22817

ಚಿತ್ರದುರ್ಗ, (ಮೇ.15) : ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ ಸಚಿವ ಸ್ಥಾನ ನೀಡಿ, ಜೊತೆಗೆ ಜಿಲ್ಲಾ ಉಸ್ತುವಾರಿಯ ಹೊಣೆಯನ್ನು ಅವರಿಗೇ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷರನ್ನು ಅಖಿಲ ಭಾರತ ವೀರಶೈವ ಮಹಾ ಸಭಾದ ಚಿತ್ರದುರ್ಗ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ್ ಒತ್ತಾಯಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಏಕಾಂತಯ್ಯನವರು ಜಿಲ್ಲಾ ಉಸ್ತುವಾರಿ ಮಂತ್ರಿಗಳಾಗಿದ್ದು ಬಿಟ್ಟರೆ ತದ ನಂತರ ಚಿತ್ರದುರ್ಗ ಜಿಲ್ಲೆಯವರು ಯಾರೂ ಉಸ್ತುವಾರಿ ಸಚಿವರಾಗಿಲ್ಲ. ಚಿತ್ರದುರ್ಗದಿಂದ ಆಯ್ಕೆಯಾದ ಯಾರೊಬ್ಬರೂ ಸಹಾ ಮಂತ್ರಿ ಆಗಿಲ್ಲ.  ಜಿಲ್ಲೆಯ ಬೇರೆ ತಾಲ್ಲೂಕುಗಳಿಗೆ ಮಂತ್ರಿ ಸ್ಥಾನ ಸಿಕ್ಕಿದೆ, ಚಿತ್ರದುರ್ಗಕ್ಕೆ ಇಲ್ಲವಾಗಿದೆ. ಆದ್ದರಿಂದ ಈ ಭಾರಿ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಮಂತ್ರಿಯನ್ನಾಗಿ ಮಾಡಿ ಜಿಲ್ಲಾ ಉಸ್ತುವಾರಿಗಳಾಗಿ ಮಾಡುವಂತೆ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಅಧ್ಯಕ್ಷ ಕಾರ್ತಿಕ್, ವಾಣಿಜ್ಯ ಘಟಕದ ಉಪಾಧ್ಯಕ್ಷ ಟಿ.ದಯಾನಂದ ಪಾಟೀಲ್, ಖಜಾಂಚಿ ದಿವಾಕರ್ ಎಸ್.ಸಂಕೋಳ್, ಶಿವಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...