ಸುಡುಗಾಡು ಸಿದ್ದರಿಗೆ ನಿವೇಶನ ಹಂಚಿಕೆ,  ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ : ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

 

ಚಿತ್ರದುರ್ಗ, (ಮೇ.16) : ಬಹುದಿನಗಳಿಂದ ಮೆದೇಹಳ್ಳಿ ಗ್ರಾಮದ ತಮಟಕಲ್ಲು ರಸ್ತೆಯಲ್ಲಿ ಡೇರೆ ಹೂಡಿ ವಾಸಿಸುತ್ತಿರುವ ಅಲೆಮಾರಿ ಜನಾಂಗಕ್ಕೆ ಸೇರಿದ ಸುಡುಗಾಡು ಸಿದ್ದರ ಕುಟುಂಬಗಳಿಗೆ ಶಾಶ್ವತ ನೆಲೆ ಕಲ್ಪಿಸುವ ನಿಟ್ಟಿನಲ್ಲಿ, ಚಿತ್ರದುರ್ಗ ಜಿಲ್ಲಾಡಳಿತ ಇಂಗಳದಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎರಡು ಎಕರೆ ಜಮೀನು ಮಂಜೂರು ಮಾಡಿದೆ. ಈ ಜಾಗವನ್ನು ಬಯಲುಸೀಮೆ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ನಿವೇಶನಗಳಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಶೀಘ್ರವಾಗಿ ಅತ್ಯಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ, ಅಲೆಮಾರಿ ಕುಟುಂಬಗಳು ವಾಸಿಸಲು ಅನುಕೂಲ ಮಾಡಿಕೊಡಲಾಗುವುದು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.

ನಗರದ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಸೋಮವಾರ ನಿವೇಶನ ಹಂಚಿಕೆ ಕುರಿತು ಮೆದೇಹಳ್ಳಿ ಹಾಗೂ ಇಂಗಳದಾಳ್ ಗ್ರಾಮ ಪಂಚಾಯಿತಿಗೆ ಸಂಬಂದಿಸಿದಂತೆ ಜರುಗಿದ
ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಪ್ರಥಮ ಬಾರಿಗೆ ಅಲೆಮಾರಿ ಜನಾಂಗದವರನ್ನು ಗುರುತಿಸಿ ಶಾಶ್ವತ ನೆಲೆ ಕಲ್ಪಿಸಲಾಗುತ್ತಿದ್ದು, ಒಟ್ಟು 58 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲಾಗುವುದು. ಖಾಸಗಿ ಜಾಗದಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸುಡುಗಾಡು ಸಿದ್ದರ ಕುಟುಂಬಗಳು15 ದಿನನದಲ್ಲಿ ಸರ್ಕಾರದಿಂದ ಮಂಜೂರು ಮಾಡಿರುವ ಜಾಗಕ್ಕೆ ಸ್ಥಳಾಂತರವಾಗಲಿದ್ದಾರೆ ಎಂದರು. ಅಧಿಕಾರಿಗಳು ಶೀಘ್ರವಾಗಿ ಲೇಔಟ್ ವಿನ್ಯಾಸವನ್ನು ಪೂರ್ಣಗೊಳಿಸಬೇಕು. ಸ್ಥಳಾಂತರಗೊಳ್ಳುವ ಕುಟುಂಬಗಳಿಗೆ ಕುಡಿಯುವ ನೀರಿನ ಸಲುವಾಗಿ ಎರಡು ಕೊಳವೆ ಬಾವಿಗಳನ್ನು ಕೊರೆಯವಂತೆ ಸಂಬಂದಪಟ್ಟ ಅಧಿಕಾರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು.

ಅಲೆಮಾರಿಗಳು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಅಲೆಮಾರಿ ಜನಾಂಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ. ಮಕ್ಕಳನ್ನು ಇಂಗಾಳದಾಳ್ ಶಾಲೆಗೆ ಸೇರಿಸಿ, ಇಂಗಳದಾಳು ಗ್ರಾಮದಲ್ಲಿ ಪಡಿತರ ವಿತರಣಾ ಕೇಂದ್ರದಲ್ಲಿ ಪಡಿತರ ವಿತರಿಸಲಾಗುವುದು. ಮಂಜೂರಾದ ಜಾಗದಲ್ಲಿ ತಾತ್ಕಾಲಿಕವಾಗಿ ವಾಸಿಸಿ. ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು. ನಿವೇಶನ ಹಾಗೂ ಮನೆಗಳನ್ನು ನಿಷ್ಪಕ್ಷಪಾತವಾಗಿ ಮಂಜೂರಾತಿಯನ್ನು ಮಾಡಲಾಗುವುದು. ಅಧಿಕಾರಿಗಳು ಹಾಗೂ ಮಧ್ಯವರ್ತಿಗಳಿಗೆ ಹಣ ನೀಡಬೇಡಿ ಎಂದು‌ ಶಾಸಕ ತಿಪ್ಪಾರೆಡ್ಡಿ ಸುಡುಗಾಡು ಸಿದ್ದ ಫಲಾನುಭವಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಬಯಲುಸೀಮೆ ಪ್ರಾದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎನ್.ಇ.ಜೀವನಮೂರ್ತಿ, ಕಾರ್ಯದರ್ಶಿ ಡಾ.ಶ್ರೀಧರ ಭಿ.ಭಜಂತ್ರಿ, ತಾಲೂಕು ಪಂಚಾಯತಿ ವಸತಿ ಯೋಜನೆ ನೋಡಲ್ ಅಧಿಕಾರಿ ಲೋಕೇಶ್, ಮೆದೇಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷ ಧನ್ಯಕುಮಾರ್, ಸದಸ್ಯರಾದ ತಿಮ್ಮಣ್ಣ, ಜಯರಾಮ್ ರೆಡ್ಡಿ, ರಮೇಶ್ ಮೂಕುರು, ಸುಲೋಚನಮ್ಮ, ಪ್ರಿಯದರ್ಶಿನಿ, ಮಮತ, ವನಜಾಕ್ಷಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಕುಮಾರ್, ಇಂಗಳದಾಳ್ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿದ್ಯಾಶ್ರೀ ಉಪಸ್ಥಿತರಿದ್ದರು.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

34 minutes ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

2 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

2 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

2 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

2 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago