ಕಾವೇರಿ ನೀರು ಉಳಿಸಿಕೊಳ್ಳುವುದಕ್ಕೆ ಹೋರಾಟ ನಿರಂತರವಾಗಿ ನಡೆಯುತ್ತಿದೆ. ಮಂಡ್ಯ ಭಾಗದಲ್ಲಂತು ರೈತರ ಹೋರಾಟ ಇನ್ನು ನಿಂತಿಲ್ಲ. ರಾಜ್ಯದಲ್ಲಿ ಮಳೆ ಇಲ್ಲದೆ ಕಾವೇರಿ ಕೊಳ್ಳದಲ್ಲಿ ನೀರು ಖಾಲಿಯಾಗುತ್ತಾ ಇದೆ. ಇದರ ಮಧ್ಯೆ ಪ್ರತಿ ಸಲ ತಮಿಳುನಾಡಿನ ಪರವೇ ತೀರ್ಪು ಬರುತ್ತಿದೆ.
ಕಾವೇರಿಗಾಗಿ ಮೊನ್ನೆ (ಶುಕ್ರವಾರ) ನಡೆದ ಕರ್ನಾಟಕ ಬಂದ್ ನಲ್ಲೂ ಸ್ಯಾಂಡಲ್ ವುಡ್ ನಟ-ನಟಿಯರು ಕೂಡ ಕೈಜೋಡಿಸಿದ್ದರು. ಈ ವೇಳೆ ಶಿವಣ್ಣ ಕೂಡ ಕಾವೇರಿ ವಿವಾದ ಬಗೆಹರಿಸಬೇಕಾದವರು ಯಾರು ಎಂದು ಹೇಳಿದರು. ಸುಮ್ಮನೆ ಬಂದು, ಕೂತು ಹೋದಾಗ ಏನು ಪ್ರಯೋಜನವಾಗುವುದಿಲ್ಲ. ಎರಡು ರಾಜ್ಯದಲ್ಲಿ ಜನಗಳು ಆರಿಸಿದವರು ಇದ್ದಾರೆ. ಕುಳಿತು ಬಗೆಹರಿಸಿ ಎಂದೇ ಸಲಹೆ ನೀಡಿದ್ದರು.
ಇದೀಗ ಲವ್ಲಿ ಸ್ಟಾರ್ ಪ್ರೇಮ್ ಪ್ರಧಾನಿ ಮೋದಿಗೆ ಪತ್ರದ ಮೂಲಕ ಕಾವೇರಿ ನಮ್ಮದು ಎಂಬ ಮನವರಿಕೆ ಮಾಡುವುದಕ್ಕೆ ಹೊರಟಿದ್ದಾರೆ. ನಟ ಪ್ರೇಮ್ ತಮ್ಮ ರಕ್ತದ ಮೂಲಕ ಪತ್ರ ಬರೆದಿದ್ದಾರೆ. ಕಾವೇರಿ ನಮ್ಮದು. ಕಾವೇರಿ ವಿಚಾರಕ್ಕೆ ನಮಗೆ ನ್ಯಾಯ ಕೊಡಿಸಿ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










