ತುಮಕೂರು : ಇಂದು ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಹುಟ್ಟುಹಬ್ಬ. 119ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆ ಮಠವನ್ನ ಅದ್ದೂರಿಯಾಗಿ ಅಲಂಕಾರ ಮಾಡಲಾಗಿದೆ. ಪ್ರತಿದಿನದ ದಾಸೋಹಕ್ಕಿಂತ ದೊಡ್ಡಮಟ್ಟದಲ್ಲಿಯೇ ಇಂದು ದಾಸೋಹ ನಡೆಯುತ್ತಿದೆ. ಇಂದಿನ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಕೂಡ ಬಂದಿದ್ದರು. ಈ ವೇಳೆ ಸಿದ್ಧಗಂಗಾ ಮಠದ ಬಗ್ಗೆ ಹಾಡಿ ಹೊಗಳಿದ್ದಾರೆ.
ಸಿದ್ಧಗಂಗಾ ಮಠಕ್ಕೆ ಬಂದಿರುವುದಕ್ಕೆ ನನಗೆ ತುಂಬಾನೇ ಖುಷಿಯಿದೆ. ಬಡ ಮಕ್ಕಳಿಗೆ ಶಿಕ್ಷಣ, ದಾಸೋಹ ಆಶ್ರಯದ ಮೂಲಕ ಮಠ ಸೇವೆ ಸಲ್ಲಿಸಿದ್ದು, ದಯವೇ ಧರ್ಮದ ಮೂಲವಯ್ಯ ಎಂಬಂತೆ ಶ್ರೀಮಠ ನಡೆಯುತ್ತಿದೆ ಎಂದಿದ್ದಾರೆ.
ವೀರಶೈವ-ಲಿಂಗಾಯತ ಮಠಗಳು ತಮ್ಮದೇ ಆದ ಸೇವೆ ಸಲ್ಲಿಸುತ್ತಾ ಬಂದಿದ್ದು, ಅದರಲ್ಲಿ ಸಿದ್ಧಗಂಗಾಮಠ ಮುಂಚೂಣಿಯಲ್ಲಿದೆ. ಶಿವಕುಮಾರ ಸ್ವಾಮೀಜಿಗಳು ಇಷ್ಟು ವರ್ಷಗಳು ಒಂದೇ ಸ್ಥಳದಲ್ಲಿ ಒಂದೇ ಕಾರ್ಯ ನಿರಂತರವಾಗಿ ಮಾಡುವ ಮೂಲಕ ಜೀವನ ಸಮರ್ಪಣೆ ಮಾಡಿದ್ದಾರೆ. ಸ್ವಾಮೀಜಿಗಳ ದಾರಿಯನ್ನು ವಿಸ್ಮಯ ಹಾಗೂ ಪವಾಡ ಎನ್ನಬಹುದು ಎಂದು ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದಲಿಂಗಸ್ವಾಮೀಜಿ ಹೇಳಿದ್ದಾರೆ. ಶಿವಕುಮಾರ ಸ್ವಾಮೀಜಿಗಳ ಬದುಕಿನಲ್ಲಿ 2 ಘಟನೆಗಳಿವೆ. ಅವೆಂದರೆ ಬಡಮಕ್ಕಳಿಗೆ ಮತ್ತು ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡೋದು ಎಂದು ಶ್ರೀಗಳು ತಿಳಿಸಿದರು.
ಇಂದು ಮಠದಲ್ಲೆಲ್ಲಾ ಅದ್ದೂರಿಯಾಗಿ ಸ್ವಾಮೀಜಿಗಳ ಹುಟ್ಟುಹಬ್ಬ ನಡೆಯುತ್ತಿದೆ. ಮಠದಲ್ಲಿ ಓದುತ್ತಿರುವ ಮಕ್ಕಳು, ಓದಿ ಹೋದ ಮಕ್ಕಳೆಲ್ಲಾ ಸೇರಿ ಶ್ರೀಗಳನ್ನ ಸ್ಮರಣೆ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಸಹ ಶ್ರೀಗಳ ಜೊತೆಗಿನ ಫೋಟೋ ಹಾಕಿ, ಅವರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ. ಶ್ರೀಗಳು ಮಾಡಿರುವ ಸಮಾಜ ಸೇವೆ ಅಷ್ಟಿಷ್ಟಲ್ಲ. ಅದೆಷ್ಟೋ ಮಕ್ಕಳು ಈ ಮಠದಿಂದ ಕಲಿತು ಹೋಗಿದ್ದಾರೆ. ಅವರ ಭವಿಷ್ಯವೂ ಚೆನ್ನಾಗಿದೆ.














