Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಷ್ಟ್ರಪತಿ ಚುನಾವಣೆ : ಮೊದಲ ದಿನವೇ 11 ನಾಮಪತ್ರ ಸಲ್ಲಿಕೆ..!

Facebook
Twitter
Telegram
WhatsApp

ನವದೆಹಲಿ: ಜುಲೈ 18ರಂದು ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವವರು ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ. ಜೂನ್ 29ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮೊದಲ ದಿನವೇ ಹನ್ನೊಂದು ನಾಮಪತ್ರ ಸಲ್ಲಿಕೆಯಾಗಿದೆ. ಜೊತೆಗೆ ಒಂದು ನಾಮಪತ್ರ ತಿರಸ್ಕೃತಗೊಂಡಿದೆ ಎನ್ನಲಾಗಿದೆ. ಇನ್ನು ರಾಷ್ಟ್ರಪತಿ ಸ್ಥಾನಕ್ಕಾಗಿ ದೆಹಲಿ, ಮಹಾರಾಷ್ಟ್ರ, ಬಿಹಾರ, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ನಾಮಪತ್ರಗಳು ಸಲ್ಲಿಕೆಯಾಗಿದೆ. ಇನ್ನು ಬಿಹಾರದ ಸಾರನ್ ನಿಂದ ಲಾಲೂ ಪ್ರಸಾದ್ ಯಾದವ್ ನಾಮಪತ್ರ ಸಲ್ಲಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ನಿಂದಲೂ ನಾಮಪತ್ರ ಸಲ್ಲಿಕೆಯಾಗಲು ಯೋಜನೆ ನಡೆದಿದೆ. ಯಾರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕೆಂದು‌ ಮಮತಾ ಬ್ಯಾನರ್ಜಿ ಈ ಹಿಂದೆ ಸಭೆ ನಡೆಸಿದ್ದರು. ಸಭೆಯಲ್ಲಿ ಎನ್ ಸಿ ಪಿ ಪಕ್ಷದ ಶರದ್ ಪವಾರ್ ಅವರ ಹೆಸರು ಸೂಚಿಸಿದ್ದರು. ಆದರೆ ಅವರೆ ತಿರಸ್ಕಾರ ಮಾಡಿದ್ದಾರೆ. ಸದ್ಯಕ್ಕೆ ಇನ್ನು ಅಭ್ಯರ್ಥಿಯ ಹೆಸರು ಘೋಷಿಸಿಲ್ಲ.

ಇನ್ನು ಪ್ರತಿ ಅಭ್ಯರ್ಥಿಯೂ 15 ಸಾವಿರ ಠೇವಣಿ ಇಡಬೇಕಾಗುತ್ತದೆ. ಅಭ್ಯರ್ಥಿಯೂ ನಾಮನಿರ್ದೇಶನವನ್ನು ನಿಗದಿತ ನಮೂನೆಯಲ್ಲಿ ಮಾಡಬೇಕಾಗುತ್ತದೆ. ಕನಿಷ್ಠ 50 ಮತದಾರರು ಪ್ರತಿಪಾದಕರಾಗಿ ಮತ್ತು ಕನಿಷ್ಟ 50 ಮತದಾರರು ದ್ವಿತೀಯಕರಾಗಿ ಚಂದದಾರರಾಗಬೇಕಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!