ಅಂದಿನಿಂದ ಇಂದಿನವರೆಗೂ ಆಯ್ಕೆಯಾದ ರಾಷ್ಟಪತಿಗಳ  ಹಿನ್ನೋಟ : ಅತಿಹೆಚ್ಚು ಬಹುಮತ ಪಡೆದವರು ಯಾರು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ನವದೆಹಲಿ : ಎನ್‌ಡಿಎ ಬೆಂಬಲಿತ ಅಭ್ಯರ್ಥಿ, ಮಾಜಿ ರಾಜ್ಯಪಾಲೆ ಹಾಗೂ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರು ದೇಶದ 15 ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

ಪ್ರಸ್ತುತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24 ರಂದು ಕೊನೆಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಇದೇ ತಿಂಗಳ 18 ರಂದು ರಾಷ್ಟ್ರಪತಿ ಚುನಾವಣೆಯ ಮತದಾನವನ್ನು ನಡೆಸಿತು.
ಅಂತಿಮವಾಗಿ ಇಂದು ಫಲಿತಾಂಶ ಪ್ರಕಟವಾಗಿ ದ್ರೌಪದಿ ಮುರ್ಮು ಅವರು ತಮ್ಮ ಪ್ರತಿಸ್ಪರ್ಧಿ ಯಶವಂತ್ ಸಿನ್ಹಾ ಅವರನ್ನು ಅತ್ಯಧಿಕ ಮತಗಳಿಂದ ಸೋಲಿಸಿ ಗೆಲುವಿನ ನಗೆ ಬೀರಿದ್ದಾರೆ.

ಇಲ್ಲಿಯವರೆಗೂ ನಡೆದ ರಾಷ್ಟಪತಿ ಚುನಾವಣೆಯ ಹಿನ್ನೋಟ :

ಡಾ.ಬಾಬು ರಾಜೇಂದ್ರ ಪ್ರಸಾದ್ ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಎರಡು ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಏಕೈಕ ವ್ಯಕ್ತಿ ಅವರು. ಮೇಲಾಗಿ ಅತಿ ಹೆಚ್ಚು ಬಹುಮತದಿಂದ ಗೆದ್ದ ದಾಖಲೆಯೂ ಅವರ ಹೆಸರಿನಲ್ಲಿದೆ. ಏತನ್ಮಧ್ಯೆ, ರಾಜೇಂದ್ರ ಪ್ರಸಾದ್ ಅವರು 26 ಜನವರಿ 1950 ರಂದು ರಾಷ್ಟ್ರಪತಿಯಾಗಿ ಆಯ್ಕೆಯಾದರು. ಅವರು 1952 ರಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸಿದ ಮೊದಲ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಸ್ವತಂತ್ರ ಭಾರತದ ಮೊದಲ ಉಪರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ಖ್ಯಾತ ತತ್ವಜ್ಞಾನಿ ಸರ್ವಪಲ್ಲಿ ರಾಧಾಕೃಷ್ಣನ್ ಅವರು 1962 ರಲ್ಲಿ ಎರಡನೇ ರಾಷ್ಟ್ರಪತಿಯಾಗಿ ಆಯ್ಕೆಯಾದರು.

ಜಾಕಿರ್ ಹುಸೇನ್ 1967 ರಲ್ಲಿ ಮೂರನೇ ರಾಷ್ಟ್ರಪತಿಯಾಗಿ ಆಯ್ಕೆಯಾದರು. ದುರದೃಷ್ಟವಶಾತ್, ಅವರು ಮೇ 3, 1969 ರಂದು ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ನಿಧನರಾದರು.

ಜಾಕೀರ್ ಹುಸೇನ್ ಅವರ ಮರಣದ ನಂತರ, 1969 ರಲ್ಲಿ ನಡೆದ ಚುನಾವಣೆಯಲ್ಲಿ ವರಾಹಗಿರಿ ವೆಂಕಟಗಿರಿ(ವಿ.ವಿ.ಗಿರಿ) ನಾಲ್ಕನೇ ಅಧ್ಯಕ್ಷರಾಗಿ ಆಯ್ಕೆಯಾದರು. ಎರಡನೇ ಪ್ರಾಶಸ್ತ್ಯದ ಮತಗಳಿಂದ ಗೆದ್ದ ಮೊದಲ ಅಧ್ಯಕ್ಷರಾಗಿ ಇತಿಹಾಸ ನಿರ್ಮಿಸಿದರು.

ಫಕ್ರುದ್ದೀನ್ ಅಲಿ ಅಹ್ಮದ್ ಭಾರತದ ಐದನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಅವರೂ ಸಹಾ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ಫೆಬ್ರವರಿ 11, 1977 ರಂದು ನಿಧನರಾದರು.

ನೀಲಂ ಸಂಜೀವ ರೆಡ್ಡಿ ಅವರು ಅವಿರೋಧವಾಗಿ ಅಧ್ಯಕ್ಷ ಸ್ಥಾನದ   ಗೌರವ ಪಡೆದರು. 1977ರ ಚುನಾವಣೆಯಲ್ಲಿ 37 ಅಭ್ಯರ್ಥಿಗಳ ಪೈಕಿ ಸಂಜೀವ ರೆಡ್ಡಿ ಅವರ ನಾಮಪತ್ರ ಹೊರತು ಪಡಿಸಿ ಯಾವುದೇ ನಾಮಪತ್ರ ಸಿಂಧುವಾಗದೆ ಅವಿರೋಧವಾಗಿ ಆಯ್ಕೆಯಾದರು.

ಗಿಯಾನಿ ಜೈಲ್ ಸಿಂಗ್ ಅವರು 1982 ರಲ್ಲಿ ದೇಶದ 7 ನೇ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡರು. ದೇಶದ ಪ್ರಥಮ ಪ್ರಜೆಯಾಗಿ ಆಯ್ಕೆಯಾದ ಏಕೈಕ ಸಿಖ್ ವ್ಯಕ್ತಿ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಆರ್. ವೆಂಕಟರಾಮನ್ ಅವರು 8ನೇ ರಾಷ್ಟ್ರಪತಿಯಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದರು. ಅವರ ಆಡಳಿತಾವಧಿಯಲ್ಲಿ ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರಗಳ ಯುಗ ಪ್ರಾರಂಭವಾಯಿತು.

ಶಂಕರ್ ದಯಾಳ್ ಶರ್ಮಾ ಅವರು 1992 ರಲ್ಲಿ ದೇಶದ 9 ನೇ ರಾಷ್ಟ್ರಪತಿಯಾಗಿ ಆಯ್ಕೆಯಾದರು. ಈ ಹಿಂದೆ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಕೆಆರ್ ನಾರಾಯಣನ್ ದೇಶದ ಮೊದಲ ದಲಿತ ರಾಷ್ಟ್ರಪತಿ. ಕೇಂದ್ರ ಸಂಪುಟದ ನಿರ್ಧಾರವನ್ನು ವಿರೋಧಿಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಕೇಂದ್ರದ ನಿರ್ಧಾರವನ್ನು ಅವರು ವಿರೋಧಿಸಿದರು. ಅವರು 1998 ರ ಸಾರ್ವತ್ರಿಕ ಚುನಾವಣೆಯಲ್ಲಿ ಮತ ಚಲಾಯಿಸಿದ ಮೊದಲ ಅಧ್ಯಕ್ಷರಾಗಿ ಅಧಿಕಾರದಲ್ಲಿ ಮುಂದುವರೆದರು.

ಭಾರತದ ಕ್ಷಿಪಣಿ ಮನುಷ್ಯ ಎಂದೇ ಖ್ಯಾತರಾಗಿರುವ ಎಪಿಜೆ ಅಬ್ದುಲ್ ಕಲಾಂ ಅವರು 11ನೇ ರಾಷ್ಟ್ರಪತಿಯಾಗಿ ದೇಶಕ್ಕೆ ವಿಶೇಷ ಸೇವೆ ಸಲ್ಲಿಸಿದ್ದರು. ಜನತೆಯ ಅಧ್ಯಕ್ಷರಾಗಿದ್ದ ಅವರು ರಾಷ್ಟ್ರಪತಿ ಹುದ್ದೆಯನ್ನು ಶ್ರೀಸಾಮಾನ್ಯನ ಹತ್ತಿರಕ್ಕೆ ತಂದರು.

ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ ಮೊದಲ ಮಹಿಳೆ ಪ್ರತಿಭಾ ಪಾಟೀಲ್. ಈ ಹಿಂದೆ ಅವರು ರಾಜಸ್ಥಾನದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅವರು ಹಲವಾರು ಟೀಕೆಗಳನ್ನು ಎದುರಿಸಿದರು.

ಸುದೀರ್ಘ ಕಾಲ ಕಾಂಗ್ರೆಸ್ ಪಕ್ಷದಲ್ಲಿಯೇ ಉಳಿದುಕೊಂಡಿದ್ದ ಪ್ರಣಬ್ ಮುಖರ್ಜಿ ಅವರು 2012ರಲ್ಲಿ ದೇಶದ 13ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು. ದೇಶದ ಅತ್ಯುನ್ನತ ಪ್ರಶಸ್ತಿಯನ್ನು ಪಡೆದ ಆರು ರಾಷ್ಟ್ರಪತಿಗಳಲ್ಲಿ ಒಬ್ಬರು. ರಾಷ್ಟ್ರಪತಿ ಭವನದ ಟ್ವಿಟ್ಟರ್ ಖಾತೆಯು ಪ್ರಣಬ್ ಅವರ ಅಧಿಕಾರಾವಧಿಯಲ್ಲಿ ಪ್ರಾರಂಭವಾಯಿತು.

ರಾಮ್ ನಾಥ್ ಕೋವಿಂದ್ ದೇಶದ ಎರಡನೇ ದಲಿತ ರಾಷ್ಟ್ರಪತಿ. ಈ ಹಿಂದೆ ಅವರು ಬಿಹಾರ ರಾಜ್ಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ರಾಷ್ಟ್ರಪತಿಯಾಗಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಈ ವರ್ಷ ಜುಲೈ 24 ರಂದು ಕೊನೆಗೊಳ್ಳಲಿದ್ದು ಜುಲೈ 25 ರಂದು ದೇಶದ 15 ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸುವರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

59 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago