Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಗ್ಯಾರಂಟಿಯಿಂದಾನೇ ಬೆಲೆ ಏರಿಕೆ : ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು..!

---Advertisement---

ಬೆಂಗಳೂರು: ನಂದಿನಿ ಹಾಲಿನಲ್ಲಿ 50 ML ಹೆಚ್ಚಳ ಮಾಡಿ, ಅದಕ್ಕೆ ಪ್ರತಿಯಾಗಿ 2 ರೂಪಾಯಿ ಪಡೆಯುತ್ತಿದೆ. ಇದಕ್ಕೆ ಜನರಿಂದಾನೂ ವಿರೋಧವಿದೆ. ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಮತ್ತೆ ಬೆಲೆ ಏರಿಕೆ ಸಾಕಾಗಿ ಹೋಗಿದೆ. ಇದಕ್ಕೆ ವಿರೋಧ ಪಕ್ಷದವರಿಂದಾನೂ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಗ್ಯಾರಂಟಿಗಳಿಂದಾನೇ ಈ ರೀತಿ ಬೆಲೆ ಏರಿಕೆಯಾಗುತ್ತಿರುವುದು ಎಂಬ ಆರೋಪವನ್ನು ಮಾಡಿದ್ದಾರೆ.

ಕುಮಾರಸ್ವಾಮಿ ಅವರ ಈ ಮಾತಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಮೊದಲು ಸರಿಯಾಗಿ ಓದಿಕೊಂಡು, ತಿಳಿದುಕೊಂಡು ಮಾತನಾಡಲಿ. ಬೆಲೆ ಏರಿಕೆ ಎಲ್ಲಿ ಆಗಿದೆ ಹೇಳಿ ನೋಡೋಣಾ. ಹೆಚ್ಚುವರಿಯಾಗಿ ಕೊಡುತ್ತಿರುವ ಹಾಲಿಗೆ ಹಣ ಪಡೆಯುತ್ತಿದ್ದೇವೆ. ಇದರ ಹೊರತಾಗಿ ಬೆಲೆ ಏರಿಕೆ ಎಲ್ಲಿ ಆಗಿದೆ. ವಿರೋಧ ಪಕ್ಷಗಳು ಸುಮ್ಮನೆ ಆರೋಪ ಮಾಡುತ್ತವೆ ಅಷ್ಟೇ ಎಂದಿದ್ದಾರೆ.

ಕಳೆದ ವರ್ಷ ಇದೇ ಸಂದರ್ಭದಲ್ಲಿ 90 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಾ ಇತ್ತು. ಈ ವರ್ಷ 99 ಲಕ್ಷ ಹಾಲು ಉತ್ಪಾದನೆಯಾಗುತ್ತಾ ಇದೆ. ರೈತರಿಂದ ಹಾಲು ಕೊಂಡುಕೊಳ್ಳಬೇಕು ಅಲ್ವಾ. ರೈತರಿಗೆ ನಾವೂ ಬೇಡ ಎಂದು ಹೇಳುವುದಕ್ಕೆ ಆಗುವುದಿಲ್ಲ. ಆ ಹಾಲನ್ನು ಚೆಲ್ಲುವುದಕ್ಕೆ ಆಗುತ್ತಾ..? ಅದಕ್ಕೋಸ್ಕರ ಪಾಕೇಟ್ ನಲ್ಲಿಯೇ ಹಾಲನ್ನು ಹೆಚ್ಚುವರಿಯಾಗಿ ನೀಡುತ್ತಿದ್ದೇವೆ. ಜನ ಆ ಹಾಲನ್ನು ತೆಗೆದುಕೊಳ್ಳಲೇಬೇಕು. ರೈತರ ಹಿತದೃಷ್ಠಿಯಿಂದಾನೇ ಈ ನಿರ್ಧಾರ ಮಾಡಿರುವುದು. ವಿರೋಧ ಪಕ್ಷದವರು ಸುಮ್ಮ ಸುಮ್ಮನೆ ಆರೋಪ ಮಾಡುತ್ತಾರೆ ಎಂದು ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಇನ್ನು ಹಾಲಿನ ಮೇಲೆ ಹೆಚ್ಚಿನ ದರ ಇಂದಿನಿಂದಾನೇ ಜಾರಿಯಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...