Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗ್ಯಾರಂಟಿಯಿಂದಾನೇ ಬೆಲೆ ಏರಿಕೆ : ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು..!

Facebook
Twitter
Telegram
WhatsApp

ಬೆಂಗಳೂರು: ನಂದಿನಿ ಹಾಲಿನಲ್ಲಿ 50 ML ಹೆಚ್ಚಳ ಮಾಡಿ, ಅದಕ್ಕೆ ಪ್ರತಿಯಾಗಿ 2 ರೂಪಾಯಿ ಪಡೆಯುತ್ತಿದೆ. ಇದಕ್ಕೆ ಜನರಿಂದಾನೂ ವಿರೋಧವಿದೆ. ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಮತ್ತೆ ಬೆಲೆ ಏರಿಕೆ ಸಾಕಾಗಿ ಹೋಗಿದೆ. ಇದಕ್ಕೆ ವಿರೋಧ ಪಕ್ಷದವರಿಂದಾನೂ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಗ್ಯಾರಂಟಿಗಳಿಂದಾನೇ ಈ ರೀತಿ ಬೆಲೆ ಏರಿಕೆಯಾಗುತ್ತಿರುವುದು ಎಂಬ ಆರೋಪವನ್ನು ಮಾಡಿದ್ದಾರೆ.

ಕುಮಾರಸ್ವಾಮಿ ಅವರ ಈ ಮಾತಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಮೊದಲು ಸರಿಯಾಗಿ ಓದಿಕೊಂಡು, ತಿಳಿದುಕೊಂಡು ಮಾತನಾಡಲಿ. ಬೆಲೆ ಏರಿಕೆ ಎಲ್ಲಿ ಆಗಿದೆ ಹೇಳಿ ನೋಡೋಣಾ. ಹೆಚ್ಚುವರಿಯಾಗಿ ಕೊಡುತ್ತಿರುವ ಹಾಲಿಗೆ ಹಣ ಪಡೆಯುತ್ತಿದ್ದೇವೆ. ಇದರ ಹೊರತಾಗಿ ಬೆಲೆ ಏರಿಕೆ ಎಲ್ಲಿ ಆಗಿದೆ. ವಿರೋಧ ಪಕ್ಷಗಳು ಸುಮ್ಮನೆ ಆರೋಪ ಮಾಡುತ್ತವೆ ಅಷ್ಟೇ ಎಂದಿದ್ದಾರೆ.

ಕಳೆದ ವರ್ಷ ಇದೇ ಸಂದರ್ಭದಲ್ಲಿ 90 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಾ ಇತ್ತು. ಈ ವರ್ಷ 99 ಲಕ್ಷ ಹಾಲು ಉತ್ಪಾದನೆಯಾಗುತ್ತಾ ಇದೆ. ರೈತರಿಂದ ಹಾಲು ಕೊಂಡುಕೊಳ್ಳಬೇಕು ಅಲ್ವಾ. ರೈತರಿಗೆ ನಾವೂ ಬೇಡ ಎಂದು ಹೇಳುವುದಕ್ಕೆ ಆಗುವುದಿಲ್ಲ. ಆ ಹಾಲನ್ನು ಚೆಲ್ಲುವುದಕ್ಕೆ ಆಗುತ್ತಾ..? ಅದಕ್ಕೋಸ್ಕರ ಪಾಕೇಟ್ ನಲ್ಲಿಯೇ ಹಾಲನ್ನು ಹೆಚ್ಚುವರಿಯಾಗಿ ನೀಡುತ್ತಿದ್ದೇವೆ. ಜನ ಆ ಹಾಲನ್ನು ತೆಗೆದುಕೊಳ್ಳಲೇಬೇಕು. ರೈತರ ಹಿತದೃಷ್ಠಿಯಿಂದಾನೇ ಈ ನಿರ್ಧಾರ ಮಾಡಿರುವುದು. ವಿರೋಧ ಪಕ್ಷದವರು ಸುಮ್ಮ ಸುಮ್ಮನೆ ಆರೋಪ ಮಾಡುತ್ತಾರೆ ಎಂದು ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಇನ್ನು ಹಾಲಿನ ಮೇಲೆ ಹೆಚ್ಚಿನ ದರ ಇಂದಿನಿಂದಾನೇ ಜಾರಿಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಚಲಪತಿ ನಿಧನ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 :ನಗರದ ತುರುವನೂರು ರಸ್ತೆ ನಿವಾಸಿ, ಶಿಕ್ಷಣ ಇಲಾಖೆ ನಿವೃತ್ತ ನೌಕರ ಚಲಪತಿ (66) ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ವಿಜಯಕರ್ನಾಟಕ ಚಿತ್ರದುರ್ಗ ಜಿಲ್ಲಾ ಪ್ರಸರಾಂಗ

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.   ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ

ಈ ಬಾರಿಯ ಬಿಗ್ ಬಾಸ್ ಗೆ ಹೋಗ್ತಿದ್ದಾರೆ ಈ ಸ್ಟಾರ್ ಗಳು : ಕನ್ಫರ್ಮ್ ಸುದ್ದಿ ಇದು..!

ಬೆಂಗಳೂರು : ಬಿಗ್ ಬಾಸ್ ಕನ್ನಡ‌ ಸೀಸನ್ 11ಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಮನೆಯೊಳಗೆ ಹೋಗೋದು ಯಾರು ಎಂಬ ಕುತೂಹಲ ಇಡೀ ಕರ್ನಾಟಕದ ಜನತೆಗೆ ಇದೆ. ಇಂದು ಸಂಜೆ ಅದಕ್ಕೆ ಕೊಂಚ ತೆರೆ

error: Content is protected !!