Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಗನಕ್ಕೇರಿದ ಈರುಳ್ಳಿ ಬೆಲೆ : ಮಧ್ಯಪ್ರವೇಶಿಸಿದ ಕೇಂದ್ರ ಸರ್ಕಾರದಿಂದ ಬೆಂಗಳೂರಿನಲ್ಲಿ ಈರುಳ್ಳಿ ಮಾರಾಟ.. ಅತಿ ಕಡಿಮೆ ಬೆಲೆಗೆ..!

Facebook
Twitter
Telegram
WhatsApp

ಅತಿಯಾದ ಮಳೆಯ ಕಾರಣದಿಂದ ಉತ್ತರ ಕರ್ನಾಟಕ ಭಾಗದಲ್ಕಿ ಈರುಳ್ಳಿ ಬೆಳೆ ನಾಶವಾಗಿದೆ‌. ಹೀಗಾಗಿ ಎಲ್ಲೆಡೆ ಈರುಳ್ಳಿ ಸಿಗುತ್ತಿಲ್ಲ. ಆದ ಕಾರಣ ಈರುಳ್ಳಿ ಬೆಲೆಯಲ್ಲಿ ಸಾಮಾನ್ಯವಾಗಿಯೇ ಬೆಲೆ ಜಾಸ್ತಿಯಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 79 ರೂಪಾಯಿ ಇದೆ. ಚಿಲ್ಲರೆ ವ್ಯಾಪಾರಿಗಳು 55 ರಿಂದ 65 ರೂಪಾಯಿ ತನಕ ಮಾರಾಟ‌ ಮಾಡುತ್ತಿದ್ದಾರೆ. ಇದು ಗ್ರಾಹಕರಿಗೆ ಸರಿಯಾಗಿ ಹೊಡೆತ ಬಿದ್ದಿದೆ. ಈರುಳ್ಳಿ ಕೊಂಡುಕೊಳ್ಳುವುದಕ್ಕೆ ಹಿಂದೆ ಮುಂದೆ ನೋಡುವ ಪರಿಸ್ಥಿತಿ ಎದುರಾಗಿದೆ.

ಇದನ್ನೆಲ್ಲಾ ಗಮನಿಸಿದ ಕೇಂದ್ರ ಸರ್ಕಾರ ಸಾರ್ವಜನಿಕರ ಅನುಕೂಲದ ಕಡೆಗೆ ಗಮನ ಹರಿಸಿದೆ. ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲು ನಿರ್ಧರಿಸಿದೆ. ಇಂದಿನಿಂದ ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಅಡಿಯಲ್ಲಿ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದಡಿಯಲ್ಲಿ ಈ ಕೆಲಸ ನಡೆಯಲಿದೆ‌.

ಮೊಬೈಲ್ ವ್ಯಾನ್ ಮೂಲಕ ಬೆಂಗಳೂರಿನ ಬೀದಿ ಬೀದಿಗಳಲ್ಲಿ ಈರುಳ್ಳಿ ಮಾರಾಟವಾಗಲಿದೆ‌. ಕೇವಲ 35 ರೂಪಾಯಿಗೆ ಒಂದು ಕೆಜಿ ಈರುಳ್ಳಿಯಂತೆ ಮಾರಾಟ ಮಾಡಲಾಗುತ್ತದೆ. ಬೆಂಗಳೂರಿನ ಎಲ್ಲಾ ಕ್ಷೇತ್ರಗಳಲ್ಲೂ ಈರುಳ್ಳಿಯನ್ನು ಮಾರಾಟ ಮಾಡಲಾಗುತ್ತದೆ. ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದಿಂದ ತರಿಸಿದ ಈರುಳ್ಳಿಯನ್ನು ಮಾರಾಟ ಮಾಡಲಾಗುತ್ತದೆ. ಈರುಳ್ಳಿ ದರ ಸಹಜ ಸ್ಥಿತಿಗೆ ಬರುವ ತನಕವೂ ಈ ಮಾರಾಟ ಮುಂದುವರೆಯಲಿದೆ ಎಂದು ತಿಳಿಸಲಾಗಿದೆ. ಇಂದಿನಿಂದ 112 ಮೊಬೈಲ್ ವ್ಯಾನ್ ಗಳು ಮಾರಾಟ ಮಾಡಲಿವೆ. ಈ ರೀತಿಯ ಕಾರ್ಯದಿಂದ ಗ್ರಾಹಕರಿಗೆ ಸಾಕಷ್ಟು ಅನುಕೂಲವಾಗಲಿದೆ. ಅದರಲ್ಲೂ ಮಧ್ಯಮ ಹಾಗೂ ಬಡವರಿಗೆ ಈ ಯೋಜನೆ ತುಂಬಾ ಅನುಕೂಲವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನನ್ನ ಬಳಿ ಇರುವ ದಾಖಲೆ ಕೊಟ್ಟರೆ ಇನ್ನು 6-7 ಸಚಿವರು ರಾಜೀನಾಮೆ ಕೊಡಬೇಕಾಗುತ್ತದೆ : ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ

  ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಕರೆದಿದ್ದರು. ವಿಚಾರಣೆಗೆ ಹಾಜರಾಗಿ ಬಂದ ಮರುದಿನವೇ ಸುದ್ದಿಗೋಷ್ಟಿ ನಡೆಸಿರುವ ಕುಮಾರಸ್ವಾಮಿ ಅವರು, ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ. ವಿಚಾರಣೆ ಮಾಡುವುದಕ್ಕೆ

ನಿರ್ಮಲಾ ಸೀತರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರು ಕೋರ್ಟ್ ಆದೇಶ : ಕಾರಣವೇನು ಗೊತ್ತಾ..?

  ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ವಿರುದ್ಧ ಎಫ್ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಲಯಕ್ಕೆ ನಿರ್ಮಲಾ ಸೀತರಾಮನ್ ವಿರುದ್ಧ ದೂರು ಸಲ್ಲಿಕೆಯಾದ ಹಿನ್ನೆಲೆ ಎಫ್ಐಆರ್ ದಾಖಲಿಸಲು ಸೂಚನೆ

ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ : ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ..?

  ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಅಂಬಾರಿ ಮೇಲೆ ನಾಡ ಅಧಿದೇವತೆಯನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಅದ್ದೂರಿ ಆಚರಣೆಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಬರದ ಸಿದ್ಧತೆ ಮಾಡಿಕೊಂಡಿದೆ. ದಸರಾ

error: Content is protected !!