Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗಗನಕ್ಕೇರಿದ ಈರುಳ್ಳಿ ಬೆಲೆ : ಮಧ್ಯಪ್ರವೇಶಿಸಿದ ಕೇಂದ್ರ ಸರ್ಕಾರದಿಂದ ಬೆಂಗಳೂರಿನಲ್ಲಿ ಈರುಳ್ಳಿ ಮಾರಾಟ.. ಅತಿ ಕಡಿಮೆ ಬೆಲೆಗೆ..!

---Advertisement---

ಅತಿಯಾದ ಮಳೆಯ ಕಾರಣದಿಂದ ಉತ್ತರ ಕರ್ನಾಟಕ ಭಾಗದಲ್ಕಿ ಈರುಳ್ಳಿ ಬೆಳೆ ನಾಶವಾಗಿದೆ‌. ಹೀಗಾಗಿ ಎಲ್ಲೆಡೆ ಈರುಳ್ಳಿ ಸಿಗುತ್ತಿಲ್ಲ. ಆದ ಕಾರಣ ಈರುಳ್ಳಿ ಬೆಲೆಯಲ್ಲಿ ಸಾಮಾನ್ಯವಾಗಿಯೇ ಬೆಲೆ ಜಾಸ್ತಿಯಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 79 ರೂಪಾಯಿ ಇದೆ. ಚಿಲ್ಲರೆ ವ್ಯಾಪಾರಿಗಳು 55 ರಿಂದ 65 ರೂಪಾಯಿ ತನಕ ಮಾರಾಟ‌ ಮಾಡುತ್ತಿದ್ದಾರೆ. ಇದು ಗ್ರಾಹಕರಿಗೆ ಸರಿಯಾಗಿ ಹೊಡೆತ ಬಿದ್ದಿದೆ. ಈರುಳ್ಳಿ ಕೊಂಡುಕೊಳ್ಳುವುದಕ್ಕೆ ಹಿಂದೆ ಮುಂದೆ ನೋಡುವ ಪರಿಸ್ಥಿತಿ ಎದುರಾಗಿದೆ.

ಇದನ್ನೆಲ್ಲಾ ಗಮನಿಸಿದ ಕೇಂದ್ರ ಸರ್ಕಾರ ಸಾರ್ವಜನಿಕರ ಅನುಕೂಲದ ಕಡೆಗೆ ಗಮನ ಹರಿಸಿದೆ. ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲು ನಿರ್ಧರಿಸಿದೆ. ಇಂದಿನಿಂದ ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಅಡಿಯಲ್ಲಿ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದಡಿಯಲ್ಲಿ ಈ ಕೆಲಸ ನಡೆಯಲಿದೆ‌.

ಮೊಬೈಲ್ ವ್ಯಾನ್ ಮೂಲಕ ಬೆಂಗಳೂರಿನ ಬೀದಿ ಬೀದಿಗಳಲ್ಲಿ ಈರುಳ್ಳಿ ಮಾರಾಟವಾಗಲಿದೆ‌. ಕೇವಲ 35 ರೂಪಾಯಿಗೆ ಒಂದು ಕೆಜಿ ಈರುಳ್ಳಿಯಂತೆ ಮಾರಾಟ ಮಾಡಲಾಗುತ್ತದೆ. ಬೆಂಗಳೂರಿನ ಎಲ್ಲಾ ಕ್ಷೇತ್ರಗಳಲ್ಲೂ ಈರುಳ್ಳಿಯನ್ನು ಮಾರಾಟ ಮಾಡಲಾಗುತ್ತದೆ. ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದಿಂದ ತರಿಸಿದ ಈರುಳ್ಳಿಯನ್ನು ಮಾರಾಟ ಮಾಡಲಾಗುತ್ತದೆ. ಈರುಳ್ಳಿ ದರ ಸಹಜ ಸ್ಥಿತಿಗೆ ಬರುವ ತನಕವೂ ಈ ಮಾರಾಟ ಮುಂದುವರೆಯಲಿದೆ ಎಂದು ತಿಳಿಸಲಾಗಿದೆ. ಇಂದಿನಿಂದ 112 ಮೊಬೈಲ್ ವ್ಯಾನ್ ಗಳು ಮಾರಾಟ ಮಾಡಲಿವೆ. ಈ ರೀತಿಯ ಕಾರ್ಯದಿಂದ ಗ್ರಾಹಕರಿಗೆ ಸಾಕಷ್ಟು ಅನುಕೂಲವಾಗಲಿದೆ. ಅದರಲ್ಲೂ ಮಧ್ಯಮ ಹಾಗೂ ಬಡವರಿಗೆ ಈ ಯೋಜನೆ ತುಂಬಾ ಅನುಕೂಲವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment