ಪ್ರಧಾನಿ ಮೋದಿಯವರಿಗೆ ಮಾರಿಷಸ್‌ನ ಅತ್ಯುನ್ನತ ಪ್ರಶಸ್ತಿ

ಸುದ್ದಿಒನ್ : ಮಾರಿಷಸ್ ಪ್ರಧಾನಿ ನವೀನ್ ಚಂದ್ರ ರಾಮಗೂಲಂ ಅವರು ಪ್ರಧಾನಿ ಮೋದಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಅಂಡ್ ಕೀ ಆಫ್ ದಿ ಹಿಂದೂ ಮಹಾಸಾಗರ’ ವನ್ನು ಪ್ರದಾನ ಮಾಡಿದ್ದಾರೆ. ಈ ಗೌರವವನ್ನು ಪಡೆದ ಮೊದಲ ಭಾರತೀಯ ಪ್ರಧಾನಿ ಮೋದಿ, ಮತ್ತು ಇದು ಅವರಿಗೆ ದೊರೆತ 21 ನೇ ಅಂತರರಾಷ್ಟ್ರೀಯ ಪ್ರಶಸ್ತಿಯಾಗಿದೆ.

ಪ್ರಧಾನಿ ಮೋದಿ ಎರಡು ದಿನಗಳ ಮಾರಿಷಸ್ ಪ್ರವಾಸದಲ್ಲಿದ್ದಾರೆ. ಈ ಸಮಯದಲ್ಲಿ, ಅವರು ಪೋರ್ಟ್ ಲೂಯಿಸ್‌ನಲ್ಲಿ ನಡೆದ ಮಾರಿಷಸ್ ರಾಷ್ಟ್ರೀಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಮಾರಂಭದಲ್ಲಿ ಮಾರಿಷಸ್ ಪ್ರಧಾನಿ ರಾಮ್‌ಗೂಲಂ ಅವರು ಪ್ರಧಾನಿ ಮೋದಿ ಅವರಿಗೆ ಈ ಅತ್ಯುನ್ನತ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಮಾರ್ಚ್ 12, 1992 ರಂದು ಮಾರಿಷಸ್ ಸ್ವತಂತ್ರ ರಾಷ್ಟ್ರವಾದಾಗಿನಿಂದ, ಐದು ವಿದೇಶಿ ಗಣ್ಯರಿಗೆ ‘ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಅಂಡ್ ಕೀ ಆಫ್ ದಿ ಹಿಂದೂ ಮಹಾಸಾಗರ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ ಎಂದು ರಾಮ್‌ಗೂಲಮ್ ಹೇಳಿದರು. ವರ್ಣಭೇದ ನೀತಿ ವಿರೋಧಿ ಕಾರ್ಯಕರ್ತ ನೆಲ್ಸನ್ ಮಂಡೇಲಾ ಇದನ್ನು ಮೊದಲು 1998 ರಲ್ಲಿ ಪಡೆದರು ಎಂದು ಅವರು ಹೇಳಿದರು.

ಮತ್ತೊಂದೆಡೆ, ಪ್ರಧಾನಿ ಮೋದಿಯವರ ಮಾರಿಷಸ್ ಭೇಟಿ ಯಶಸ್ವಿಯಾಗಿ ಮುಂದುವರೆದಿದೆ. ಮಾರಿಷಸ್‌ನ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಮಾರಿಷಸ್‌ನ ರಾಜಧಾನಿ ಪೋರ್ಟ್ ಲೂಯಿಸ್‌ಗೆ ಆಗಮಿಸಿದ್ದಾರೆ. ಅಲ್ಲಿನ ಭಾರತೀಯ ಸಮುದಾಯವು ಪ್ರಧಾನಿ ಮೋದಿ ಅವರಿಗೆ ಆತ್ಮೀಯ ಸ್ವಾಗತ ನೀಡಿತು. ಪ್ರಧಾನ ಮಂತ್ರಿಯವರ ಗೌರವಾರ್ಥವಾಗಿ ಸಾಂಪ್ರದಾಯಿಕ ಬಿಹಾರಿ ಶೈಲಿಯ ಗೀತ್ ಗವಾಯಿಯನ್ನು ಏರ್ಪಡಿಸಲಾಗಿತ್ತು. ಅಲ್ಲಿನ ಮಹಿಳೆಯರು ಪ್ರಧಾನಿ ಮೋದಿಯವರನ್ನು ಸಾಂಪ್ರದಾಯಿಕ ಬಿಹಾರಿ ಭೋಜ್‌ಪುರಿ ಸಂಗೀತ ‘ಗೀತ್ ಗವಾಯಿ’ ನೊಂದಿಗೆ ಸ್ವಾಗತಿಸಿದರು. ಭೋಜ್‌ಪುರಿ ಭಾಷೆ ಮಾರಿಷಸ್ ಸಂಸ್ಕೃತಿಯ ಭಾಗವಾಗುತ್ತಿರುವುದಕ್ಕೆ ಪ್ರಧಾನಿ ಮೋದಿ ಸಂತೋಷ ವ್ಯಕ್ತಪಡಿಸಿದರು.

ಸಾಂಸ್ಕೃತಿಕ ವಿನಿಮಯದ ಭಾಗವಾಗಿ ಪ್ರಧಾನಿ ಮೋದಿ ಅವರು ಮಾರಿಷಸ್ ಅಧ್ಯಕ್ಷ ಧರ್ಮಬೀರ್ ಗೋಕುಲ್ ಅವರಿಗೆ ವಿಶೇಷ ಉಡುಗೊರೆಗಳನ್ನು ನೀಡಿದರು. ಅವರು ಹಿತ್ತಾಳೆ ಮತ್ತು ತಾಮ್ರದಿಂದ ಮಾಡಿದ ವಿಶೇಷ ಪಾತ್ರೆಯಲ್ಲಿ ತೆಗೆದುಕೊಂಡು ಹೋಗಿದ್ದ ಮಹಾಕುಂಭ ಮೇಳ ಸಂಗಮದ ನೀರನ್ನು ಅರ್ಪಿಸಿದರು. ಮಾರಿಷಸ್ ಅಧ್ಯಕ್ಷರ ಪತ್ನಿ ಬೃಂದಾ ಗೋಕುಲ್ ಅವರಿಗೆ ಗುಜರಾತ್‌ನಲ್ಲಿ ನೇಯ್ದ ಬನಾರಸ್ ರೇಷ್ಮೆ ಸೀರೆಯನ್ನು ಉಡುಗೊರೆಯಾಗಿ ನೀಡಲಾಯಿತು. ಇದನ್ನು ಪ್ರದಾನ ಮಾಡುವಾಗ, ಪ್ರಧಾನಿ ಮೋದಿ ಅದು ತಮ್ಮ ತವರು ರಾಜ್ಯದಲ್ಲಿ ತಯಾರಾದ ಸೀರೆ ಎಂದು ಹೆಮ್ಮೆಯಿಂದ ಹೇಳಿದರು.

ಪ್ರಧಾನಮಂತ್ರಿಯವರು ಬಿಹಾರದಲ್ಲಿ ವಿಶೇಷವಾಗಿ ಬೆಳೆಸುವ ಮಖಾನಾವನ್ನು ಉಡುಗೊರೆಯಾಗಿ ನೀಡಿದರು. ಎರಡೂ ದೇಶಗಳ ನಡುವೆ ಶತಮಾನಗಳಿಂದ ವ್ಯಾಪಾರ, ಸಾಂಸ್ಕೃತಿಕ ಮತ್ತು ವ್ಯವಹಾರ ಸಂಬಂಧಗಳಿವೆ ಎಂದು ಮೋದಿ ಹೇಳಿದರು. ಇದಕ್ಕೂ ಮುನ್ನ, ಪ್ರಧಾನಿ ಮೋದಿ ಅವರು ಮಾರಿಷಸ್ ಪ್ರಧಾನಿ ನವೀನ್ ರಾಮಗೂಲಂ ಅವರೊಂದಿಗೆ ಸರ್ ಸೀವೂಸಾಗೂರ್ ರಾಮಗೂಲಂ ಸಸ್ಯೋದ್ಯಾನದಲ್ಲಿ ಸಸಿ ನೆಟ್ಟರು.

suddionenews

Recent Posts

ಹಿರಿಯೂರು ಬಳಿ ಉಪ ಸಭಾಪತಿಗೆ ಬೈಕ್ ಡಿಕ್ಕಿ : ಪ್ರಾಣಾಪಾಯದಿಂದ ಪಾರು

ಸುದ್ದಿಒನ್, ಹಿರಿಯೂರು, ಮಾರ್ಚ್. 14 : ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು…

6 hours ago

ದೊಣ್ಣೆಹಳ್ಳಿಯಲ್ಲಿ ಮಾರ್ಚ್ 22 ಮತ್ತು 23 ರಂದು ಉಚಿತ ದಂತ ಪಂಕ್ತಿ ಜೋಡಣಾ ಶಿಬಿರ

  ಸುದ್ದಿಒನ್, ಜಗಳೂರು, ಮಾರ್ಚ್. 14 : ಶ್ರೀ ಶರಣ ಬಸವೇಶ್ವರ ದಾಸೋಹ ಮಠ, ದೊಣ್ಣೆಹಳ್ಳಿ, ಸರ್ಕಾರಿ ದಂತ ಕಾಲೇಜು…

8 hours ago

ಬಾಲಕಿ ಮೇಲೆ ಅತ್ಯಾಚಾರ : ಪೋಕ್ಸೋ ಕಾಯಿದೆಯಡಿ ಕಠಿಣ ಶಿಕ್ಷೆ ವಿಧಿಸಿ : ಕರುನಾಡ ವಿಜಯಸೇನೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

9 hours ago

ಮಾ.17 ರಂದು ದೊಣ್ಣೆಹಳ್ಳಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

10 hours ago

ಮಾರ್ಚ್ 16ರಂದು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ

ಚಿತ್ರದುರ್ಗ. ಮಾ.14: ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವ ಇದೇ ಮಾರ್ಚ್ 16 ರಂದು ಭಾನುವಾರ…

10 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಮಾರ್ಚ್‌. 14 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ,ಮಾರ್ಚ್. 14: ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)…

10 hours ago