Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ | ಕನ್ನಡದಲ್ಲೇ ಭಾಷಣ ಆರಂಭಿಸಿ ಭರ್ಜರಿ ಭಾಷಣ

---Advertisement---

ಶಿವಮೊಗ್ಗ: ಲೋಕಸಭಾ ಚುನಾವಣೆ ಸನಿಹವಾಗುತ್ತಿದ್ದು, ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಕರ್ನಾಟಕದಲ್ಲೂ ಮೋದಿ ಹವಾ ಜೋರಾಗಿದೆ. ಈಗಾಗಲೇ ಕಲಬುರ್ಗಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು, ಇದೀಗ ಇಂದು ಶಿವಮೊಗ್ಗಕ್ಕೂ ಭೇಟಿ ನೀಡಿದ್ದಾರೆ‌. ಈ ವೇಳೆ ಡಾ. ಮಂಜುನಾಥ್ ಅವರು ಕೂಡ ವೇದಿಕೆ ಹಂಚಿಕೊಂಡಿದ್ದಾರೆ‌.

ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಪ್ರಧಾನಿ ಮೋದಿಯವರ ಬೃಹತ್ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಬರುತ್ತಿದ್ದಂತೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಟಿಕೆಟ್ ಪಡೆದಿರುವ ಡಾ. ಮಂಜುನಾಥ್ ಅವರು, ಮೋದಿ ಅವರಿಗೆ ಪೇಟ ಧರಿಸಿ, ಹಸ್ತಲಾಘವ ಮಾಡಿ, ಸ್ವಾಗತಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ನೋಡಲು ಲಕ್ಷಾಂತರ ಮಂದಿ ಬಂದಿದ್ದರು. ಅವರ ಭಾಷಣಕ್ಕೆ ಚಪ್ಪಾಳೆ ತಟ್ಟಿದರು.

ಇದೆ ವೇಳೆ ಕನ್ನಡಲ್ಲೇ ಭಾಷಣ ಆರಂಭಿಸಿದರು ಮತ್ತು ಶಕ್ತಿ ಸ್ವರೂಪಿಣಿ ಸಿಗಂದೂರು ಚೌಡೇಶ್ವರು ದೇವಿಗೆ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ಶ್ರದ್ಧಾಪೂರ್ವಕವಾಗಿ ನಮಿಸಿದರು. ನೆರೆದಿರುವ ಜನರ ಪ್ರೀತಿ, ಅವರ ಆಶೀರ್ವಾದ ಮತ್ತು ಬೆಂಬಲವನ್ನು ಗಮನಿಸಿದರೆ ಕರ್ನಾಟಕದಲ್ಲಿ ಈಗಾಗಲೇ ಬಿಜೆಪಿಗೆ ಜನರ ಸಮರ್ಥನೆ ಸಿಕ್ಕಿರುವುದದು ದೃಢವಾಗುತ್ತದೆ ಎಂದು ಮೋದಿ ಹೇಳಿದರು. ಇಡೀ ಮೈದಾನ ಉತ್ಸಾಹ ಮತ್ತು ಹುಮ್ಮಸ್ಸಿನಿಂದ ತುಳುಕುತ್ತಿರುವುದನ್ನು ತಾವು ಗಮನಿಸುತ್ತಿರುವುದಾಗಿ ಹೇಳಿದ ಪ್ರಧಾನಿ ಮೋದಿ, ಮತ್ತೊಂದೆಡೆ ಭ್ರಷ್ಟಾಚಾರ ಮತ್ತು ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿರುವ ಇಂಡಿ ಮೈತ್ರಿಕೂಟದ ನಿದ್ರೆ ಹಾರಿಹೋಗಿರುವುದು ಸಷ್ಟವಾಗುತ್ತಿದೆ ಎಂದರು. ವಿಶ್ವದ ಅತಿದೊಡ್ಡ ಪಕ್ಷವಾಗಿ ಬೆಳೆದಿರುವ ಬಿಜೆಪಿಯ ಜನಸಂಘದ ದಿನಗಳಲ್ಲಿ ಅದರ ನಾಯಕರನ್ನು ಯಾರೂ ಗುರುತಿಸದಂಥ ಸ್ಥಿತಿ ಇತ್ತು ಎಂದು ಪ್ರಧಾನಿ ಮೋದಿ ಹೇಳಿದರು.

 

ಮೋದಿ ಜೊತೆಗೆ ವೇದಿಕೆ ಹಂಚಿಕೊಂಡ್ರು ಡಾ.ಮಂಜುನಾಥ್

ಶಿವಮೊಗ್ಗ: ಲೋಕಸಭಾ ಚುನಾವಣೆ ಸನಿಹವಾಗುತ್ತಿದ್ದು, ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಕರ್ನಾಟಕದಲ್ಲೂ ಮೋದಿ ಹವಾ ಜೋರಾಗಿದೆ. ಈಗಾಗಲೇ ಕಲಬುರ್ಗಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು, ಇದೀಗ ಇಂದು ಶಿವಮೊಗ್ಗಕ್ಕೂ ಭೇಟಿ ನೀಡಿದ್ದಾರೆ‌. ಈ ವೇಳೆ ಡಾ. ಮಂಜುನಾಥ್ ಅವರು ಕೂಡ ವೇದಿಕೆ ಹಂಚಿಕೊಂಡಿದ್ದಾರೆ‌.

 

ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಪ್ರಧಾನಿ ಮೋದಿಯವರ ಬೃಹತ್ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಬರುತ್ತಿದ್ದಂತೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಟಿಕೆಟ್ ಪಡೆದಿರುವ ಡಾ. ಮಂಜುನಾಥ್ ಅವರು, ಮೋದಿ ಅವರಿಗೆ ಪೇಟ ಧರಿಸಿ, ಹಸ್ತಲಾಘವ ಮಾಡಿ, ಸ್ವಾಗತಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ನೋಡಲು ಲಕ್ಷಾಂತರ ಮಂದಿ ಬಂದಿದ್ದರು. ಅವರ ಭಾಷಣಕ್ಕೆ ಚಪ್ಪಾಳೆ ತಟ್ಟಿದರು.

 

ಇದೆ ವೇಳೆ ಕನ್ನಡಲ್ಲೇ ಭಾಷಣ ಆರಂಭಿಸಿದರು ಮತ್ತು ಶಕ್ತಿ ಸ್ವರೂಪಿಣಿ ಸಿಗಂದೂರು ಚೌಡೇಶ್ವರು ದೇವಿಗೆ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ಶ್ರದ್ಧಾಪೂರ್ವಕವಾಗಿ ನಮಿಸಿದರು. ನೆರೆದಿರುವ ಜನರ ಪ್ರೀತಿ, ಅವರ ಆಶೀರ್ವಾದ ಮತ್ತು ಬೆಂಬಲವನ್ನು ಗಮನಿಸಿದರೆ ಕರ್ನಾಟಕದಲ್ಲಿ ಈಗಾಗಲೇ ಬಿಜೆಪಿಗೆ ಜನರ ಸಮರ್ಥನೆ ಸಿಕ್ಕಿರುವುದದು ದೃಢವಾಗುತ್ತದೆ ಎಂದು ಮೋದಿ ಹೇಳಿದರು. ಇಡೀ ಮೈದಾನ ಉತ್ಸಾಹ ಮತ್ತು ಹುಮ್ಮಸ್ಸಿನಿಂದ ತುಳುಕುತ್ತಿರುವುದನ್ನು ತಾವು ಗಮನಿಸುತ್ತಿರುವುದಾಗಿ ಹೇಳಿದ ಪ್ರಧಾನಿ ಮೋದಿ, ಮತ್ತೊಂದೆಡೆ ಭ್ರಷ್ಟಾಚಾರ ಮತ್ತು ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿರುವ ಇಂಡಿ ಮೈತ್ರಿಕೂಟದ ನಿದ್ರೆ ಹಾರಿಹೋಗಿರುವುದು ಸಷ್ಟವಾಗುತ್ತಿದೆ ಎಂದರು. ವಿಶ್ವದ ಅತಿದೊಡ್ಡ ಪಕ್ಷವಾಗಿ ಬೆಳೆದಿರುವ ಬಿಜೆಪಿಯ ಜನಸಂಘದ ದಿನಗಳಲ್ಲಿ ಅದರ ನಾಯಕರನ್ನು ಯಾರೂ ಗುರುತಿಸದಂಥ ಸ್ಥಿತಿ ಇತ್ತು ಎಂದು ಪ್ರಧಾನಿ ಮೋದಿ ಹೇಳಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment