Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ | ಕನ್ನಡದಲ್ಲೇ ಭಾಷಣ ಆರಂಭಿಸಿ ಭರ್ಜರಿ ಭಾಷಣ

---Advertisement---

ಶಿವಮೊಗ್ಗ: ಲೋಕಸಭಾ ಚುನಾವಣೆ ಸನಿಹವಾಗುತ್ತಿದ್ದು, ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಕರ್ನಾಟಕದಲ್ಲೂ ಮೋದಿ ಹವಾ ಜೋರಾಗಿದೆ. ಈಗಾಗಲೇ ಕಲಬುರ್ಗಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು, ಇದೀಗ ಇಂದು ಶಿವಮೊಗ್ಗಕ್ಕೂ ಭೇಟಿ ನೀಡಿದ್ದಾರೆ‌. ಈ ವೇಳೆ ಡಾ. ಮಂಜುನಾಥ್ ಅವರು ಕೂಡ ವೇದಿಕೆ ಹಂಚಿಕೊಂಡಿದ್ದಾರೆ‌.

ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಪ್ರಧಾನಿ ಮೋದಿಯವರ ಬೃಹತ್ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಬರುತ್ತಿದ್ದಂತೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಟಿಕೆಟ್ ಪಡೆದಿರುವ ಡಾ. ಮಂಜುನಾಥ್ ಅವರು, ಮೋದಿ ಅವರಿಗೆ ಪೇಟ ಧರಿಸಿ, ಹಸ್ತಲಾಘವ ಮಾಡಿ, ಸ್ವಾಗತಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ನೋಡಲು ಲಕ್ಷಾಂತರ ಮಂದಿ ಬಂದಿದ್ದರು. ಅವರ ಭಾಷಣಕ್ಕೆ ಚಪ್ಪಾಳೆ ತಟ್ಟಿದರು.

ಇದೆ ವೇಳೆ ಕನ್ನಡಲ್ಲೇ ಭಾಷಣ ಆರಂಭಿಸಿದರು ಮತ್ತು ಶಕ್ತಿ ಸ್ವರೂಪಿಣಿ ಸಿಗಂದೂರು ಚೌಡೇಶ್ವರು ದೇವಿಗೆ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ಶ್ರದ್ಧಾಪೂರ್ವಕವಾಗಿ ನಮಿಸಿದರು. ನೆರೆದಿರುವ ಜನರ ಪ್ರೀತಿ, ಅವರ ಆಶೀರ್ವಾದ ಮತ್ತು ಬೆಂಬಲವನ್ನು ಗಮನಿಸಿದರೆ ಕರ್ನಾಟಕದಲ್ಲಿ ಈಗಾಗಲೇ ಬಿಜೆಪಿಗೆ ಜನರ ಸಮರ್ಥನೆ ಸಿಕ್ಕಿರುವುದದು ದೃಢವಾಗುತ್ತದೆ ಎಂದು ಮೋದಿ ಹೇಳಿದರು. ಇಡೀ ಮೈದಾನ ಉತ್ಸಾಹ ಮತ್ತು ಹುಮ್ಮಸ್ಸಿನಿಂದ ತುಳುಕುತ್ತಿರುವುದನ್ನು ತಾವು ಗಮನಿಸುತ್ತಿರುವುದಾಗಿ ಹೇಳಿದ ಪ್ರಧಾನಿ ಮೋದಿ, ಮತ್ತೊಂದೆಡೆ ಭ್ರಷ್ಟಾಚಾರ ಮತ್ತು ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿರುವ ಇಂಡಿ ಮೈತ್ರಿಕೂಟದ ನಿದ್ರೆ ಹಾರಿಹೋಗಿರುವುದು ಸಷ್ಟವಾಗುತ್ತಿದೆ ಎಂದರು. ವಿಶ್ವದ ಅತಿದೊಡ್ಡ ಪಕ್ಷವಾಗಿ ಬೆಳೆದಿರುವ ಬಿಜೆಪಿಯ ಜನಸಂಘದ ದಿನಗಳಲ್ಲಿ ಅದರ ನಾಯಕರನ್ನು ಯಾರೂ ಗುರುತಿಸದಂಥ ಸ್ಥಿತಿ ಇತ್ತು ಎಂದು ಪ್ರಧಾನಿ ಮೋದಿ ಹೇಳಿದರು.

 

ಮೋದಿ ಜೊತೆಗೆ ವೇದಿಕೆ ಹಂಚಿಕೊಂಡ್ರು ಡಾ.ಮಂಜುನಾಥ್

ಶಿವಮೊಗ್ಗ: ಲೋಕಸಭಾ ಚುನಾವಣೆ ಸನಿಹವಾಗುತ್ತಿದ್ದು, ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಕರ್ನಾಟಕದಲ್ಲೂ ಮೋದಿ ಹವಾ ಜೋರಾಗಿದೆ. ಈಗಾಗಲೇ ಕಲಬುರ್ಗಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು, ಇದೀಗ ಇಂದು ಶಿವಮೊಗ್ಗಕ್ಕೂ ಭೇಟಿ ನೀಡಿದ್ದಾರೆ‌. ಈ ವೇಳೆ ಡಾ. ಮಂಜುನಾಥ್ ಅವರು ಕೂಡ ವೇದಿಕೆ ಹಂಚಿಕೊಂಡಿದ್ದಾರೆ‌.

 

ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಪ್ರಧಾನಿ ಮೋದಿಯವರ ಬೃಹತ್ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಬರುತ್ತಿದ್ದಂತೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಟಿಕೆಟ್ ಪಡೆದಿರುವ ಡಾ. ಮಂಜುನಾಥ್ ಅವರು, ಮೋದಿ ಅವರಿಗೆ ಪೇಟ ಧರಿಸಿ, ಹಸ್ತಲಾಘವ ಮಾಡಿ, ಸ್ವಾಗತಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ನೋಡಲು ಲಕ್ಷಾಂತರ ಮಂದಿ ಬಂದಿದ್ದರು. ಅವರ ಭಾಷಣಕ್ಕೆ ಚಪ್ಪಾಳೆ ತಟ್ಟಿದರು.

 

ಇದೆ ವೇಳೆ ಕನ್ನಡಲ್ಲೇ ಭಾಷಣ ಆರಂಭಿಸಿದರು ಮತ್ತು ಶಕ್ತಿ ಸ್ವರೂಪಿಣಿ ಸಿಗಂದೂರು ಚೌಡೇಶ್ವರು ದೇವಿಗೆ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ಶ್ರದ್ಧಾಪೂರ್ವಕವಾಗಿ ನಮಿಸಿದರು. ನೆರೆದಿರುವ ಜನರ ಪ್ರೀತಿ, ಅವರ ಆಶೀರ್ವಾದ ಮತ್ತು ಬೆಂಬಲವನ್ನು ಗಮನಿಸಿದರೆ ಕರ್ನಾಟಕದಲ್ಲಿ ಈಗಾಗಲೇ ಬಿಜೆಪಿಗೆ ಜನರ ಸಮರ್ಥನೆ ಸಿಕ್ಕಿರುವುದದು ದೃಢವಾಗುತ್ತದೆ ಎಂದು ಮೋದಿ ಹೇಳಿದರು. ಇಡೀ ಮೈದಾನ ಉತ್ಸಾಹ ಮತ್ತು ಹುಮ್ಮಸ್ಸಿನಿಂದ ತುಳುಕುತ್ತಿರುವುದನ್ನು ತಾವು ಗಮನಿಸುತ್ತಿರುವುದಾಗಿ ಹೇಳಿದ ಪ್ರಧಾನಿ ಮೋದಿ, ಮತ್ತೊಂದೆಡೆ ಭ್ರಷ್ಟಾಚಾರ ಮತ್ತು ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿರುವ ಇಂಡಿ ಮೈತ್ರಿಕೂಟದ ನಿದ್ರೆ ಹಾರಿಹೋಗಿರುವುದು ಸಷ್ಟವಾಗುತ್ತಿದೆ ಎಂದರು. ವಿಶ್ವದ ಅತಿದೊಡ್ಡ ಪಕ್ಷವಾಗಿ ಬೆಳೆದಿರುವ ಬಿಜೆಪಿಯ ಜನಸಂಘದ ದಿನಗಳಲ್ಲಿ ಅದರ ನಾಯಕರನ್ನು ಯಾರೂ ಗುರುತಿಸದಂಥ ಸ್ಥಿತಿ ಇತ್ತು ಎಂದು ಪ್ರಧಾನಿ ಮೋದಿ ಹೇಳಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment