ಸುದ್ದಿಒನ್ : ಬಾಹ್ಯಾಕಾಶದಿಂದ ಭೂಮಿಗೆ ಸುರಕ್ಷಿತವಾಗಿ ಮರಳಿದ ಗ್ರೂಪ್ ಕ್ಯಾಪ್ಟನ್ ಸುಭಾನ್ಶು ಶುಕ್ಲಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದರು. ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಗಗನಯಾತ್ರಿಯಾಗುವ ಮೂಲಕ ಸುಭಾನ್ಶು ಶುಕ್ಲಾ ಹೊಸ ಇತಿಹಾಸವನ್ನು ಸೃಷ್ಟಿಸಿದರು. ಅವರು ತಮ್ಮ ಸಮರ್ಪಣೆ, ಧೈರ್ಯದ ಮನೋಭಾವದ ಮೂಲಕ ಕೋಟ್ಯಂತರ ಕನಸುಗಳನ್ನು ನನಸಾಗಿಸಿದರು. ಇದು ಭಾರತದ ಮಾನವ ಬಾಹ್ಯಾಕಾಶ ಹಾರಾಟದ ಮಿಷನ್ – ಗಗನಯಾನಕ್ಕೆ ಮತ್ತೊಂದು ಮೈಲಿಗಲ್ಲು ಎಂದು ಪ್ರಧಾನಿ ಮೋದಿ ಹೇಳಿದರು. ಪ್ರಧಾನಿ ಇದನ್ನು ಟ್ವಿಟರ್ನಲ್ಲಿ ತಮ್ಮ ಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ಲಾ ಅವರನ್ನು ಅಭಿನಂದಿಸುತ್ತಾ, “ಐತಿಹಾಸಿಕ ಕಾರ್ಯಾಚರಣೆಯಿಂದ ಭೂಮಿಗೆ ಮರಳಿರುವ ಗ್ರೂಪ್ ಕ್ಯಾಪ್ಟನ್ ಶುಕ್ಲಾ ಅವರನ್ನು ಇಡೀ ರಾಷ್ಟ್ರದೊಂದಿಗೆ ನಾನು ಸ್ವಾಗತಿಸುತ್ತೇನೆ. ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಭಾರತದ ಮೊದಲ ಗಗನಯಾತ್ರಿಯಾಗಿ, ಅವರು ತಮ್ಮ ಸಮರ್ಪಣೆ, ಧೈರ್ಯ ಮತ್ತು ಪ್ರವರ್ತಕ ಮನೋಭಾವದ ಮೂಲಕ ಕೋಟ್ಯಂತರ ಜನರ ಕನಸುಗಳನ್ನು ನನಸಾಗಿಸಿದ್ದಾರೆ. ಇದು ನಮ್ಮದೇ ಆದ ಮಾನವ ಬಾಹ್ಯಾಕಾಶ ಹಾರಾಟ ಮಿಷನ್ – ಗಗನಯಾನಕ್ಕೆ ಮತ್ತೊಂದು ಮೈಲಿಗಲ್ಲು ಎಂದು ಹೇಳಿದರು.”
















