ಹಾಸನ: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ನಾಯಕರು ಕೂಡ ಹಳೆ ಮೈಸೂರು ಭಾಗವನ್ನು ಗೆಲ್ಲುವುದಕ್ಕಾಗಿ ಕಸರತ್ತು ನಡೆಸುತ್ತಿದೆ. ಹೇಳಿ ಕೇಳಿ ಹಳೇ ಮೈಸೂರು ಭಾಗ ಜೆಡಿಎಸ್ ನ ಭದ್ರಕೋಟೆ ಇದ್ದಂತೆ. ಹಾಸನದಲ್ಲೂ ಜೆಡಿಎಸ್ ಪ್ರಾಬಲ್ಯವಿದೆ. ಆದರೆ ಈ ಬಾರಿ ಬಿಜೆಪಿ ಒಂದು ಕ್ಷೇತ್ರ ಕಬಳಿಸಿದೆ. ಪ್ರೀತಂ ಗೌಡ ಆ ಕ್ಷೇತ್ರದ ಶಾಸಕರಾಗಿದ್ದಾರೆ. ಈ ಬಾರಿ ಅದನ್ನೂ ಪಡೆಯಲೇಬೇಕೆಂದು ದೊಡ್ಡ ಗೌಡರ ಕುಟುಂಬಸ್ಥರು ಮನಸ್ತಾಪ ಮರೆತು ಒಂದಾದರೆ, ಈ ಕಡೆ ಪ್ರಧಾನಿ ಮೋದಿ ಅವರು ಅದೇ ಜೆಡಿಎಸ್ ಕೋಟೆಗೆ ಇಂದು ಭೇಟಿ ನೀಡಿದ್ದಾರೆ. ಜೆಡಿಎಸ್ ವಿರುದ್ಧ ಅಬ್ಬರಿಸಿ, ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಉಚ್ಛರಿಸಿದ್ದಾರೆ.
ಬೇಲೂರಿನಲ್ಲಿ ತಮ್ಮ ಅಭ್ಯರ್ಥಿ ಪರ ಪ್ರಚಾರ ಮಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ – ಜೆಡಿಎಸ್ ಗೆ ಮತ ಹಾಕಿದರೆ ಕರ್ನಾಟಕದ ಭವಿಷ್ಯದ ಬಾಗಿಲು ಮುಚ್ಚಿದಂತೆಯೇ. ಕಾಂಗ್ರೆಸ್ – ಜೆಡಿಎಸ್ ನಡುವೆ ವಿಚಿತ್ರವಾದ ಸಮಾನತೆ ಇದೆ. ಏನೆಂದರೆ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ನೆಲೆಸಿರುವ ಒಂದು ಪರಿವಾರದ ಸೇವೆ ಮಾಡುತ್ತಿದ್ದಾರೆ. ಯಾರು ಕುಟುಂಬದ ಸೇವೆ ಮಾಡುತ್ತಾರೋ..? ಯಾರು ಆ ಕುಟುಂಬಕ್ಕೆ ಹತ್ತಿರ ಇರುತ್ತಾರೊ..? ಯಾರು ಆ ಪರಿಹಾರಕ್ಕೆ ಮಂಡಿಯೂರಿ ಕೂರುತ್ತಾರೋ..? ಅಂತಹವೆಇಗೆ ಮಾತ್ರ ಕಾಂಗ್ರೆಸ್ ನಲ್ಲಿ ಸ್ಥಾನ- ಮಾನ ಸಿಗಲಿದೆ.
ಜೆಡಿಎಸ್ ಕೂಡ ಒಂದು ರೀತಿಯ ಪ್ರೈವೆಟ್ ಲಿಮಿಟೆಡ್. ಇಲ್ಲಿ ಕುಟುಂಬ ಅಭಿವೃದ್ಧಿಗೆ ಮಾತ್ರ ಒತ್ತು ಸಿಗಲಿದೆ. ಇಲ್ಲಿ ಜನರ ಹಿತ ಇಲ್ಲ. ಪರಿವಾರದ ಹಿತಾಸಕ್ತಿ ನಡೆಯುತ್ತದೆ. ಕುಟುಂಬಕ್ಕಾಗಿ ಕರ್ನಾಟಕದ ತುಂಬೆಲ್ಲಾ ಹೋರಾಟ ನಡೆಯುತ್ತದೆ ಎಂದಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…