Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ ಜಾಹೀರಾತು ಫಲಕ ಅಳವಡಿಸಲು ಪೂರ್ವನುಮತಿ ಕಡ್ಡಾಯ

---Advertisement---

ಚಿತ್ರದುರ್ಗ. ಮಾ.12:  ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ ಜಾಹೀರಾತು ಫಲಕ, ಹೋರ್ಡಿಂಗ್ಸ್ ಗಳನ್ನು ಅಧಿಕೃತವಾಗಿ ಅಳವಡಿಸಲು, ನಗರಸಭೆಯಲ್ಲಿ ಪೂರ್ವಾನುಮತಿ ಪಡೆದು ನಿಗದಿತ ಶುಲ್ಕ ಪಾವತಿಸಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಳವಡಿಸಿಕೊಳ್ಳಲು ನಿಗಧಿತ ಸ್ಥಳಗಳನ್ನು ಗುರುತಿಸಿ, ಅಧಿಸೂಚನೆ ಹೊರಡಿಸಲಾಗಿದೆ.

ಆದಾಗ್ಯೂ ಸಾರ್ವಜನಿಕರು ಅಧಿಸೂಚನೆಯಲ್ಲಿ ನಿಗಧಿಪಡಿಸಿದ ಸ್ಥಳಗಳಲ್ಲಿ ನಗರಸಭೆಯಿಂದ ಅನುಮತಿ ಪಡೆಯದೇ ಅನಧಿಕೃತವಾಗಿ ಜಾಹೀರಾತುಗಳನ್ನು ಅಳವಡಿಸಿಕೊಳ್ಳುತ್ತಿರುವುದು ಹಾಗೂ ಕರ್ನಾಟಕ ಬಹಿರಂಗ ಸ್ಥಳಗಳನ್ನು ವಿರೂಪಗೊಳಿಸುವುದನ್ನು ಪ್ರತಿಬಂಧಿಸುವ ಅಧಿನಿಯಮ 1981 (1982 ಅಧಿನಿಯಮ ಸಂಖ್ಯೆ 35)ಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರಸಭೆಯಿಂದ ಅನುಮತಿ ಪಡೆಯದೇ ಅನಧಿಕೃತವಾಗಿ ಜಾಹೀರಾತು ಪ್ರಚುರಪಡಿಸಿದವರ ಮೇಲೆ ಎರಡು ಪ್ರಕರಣಗಳನ್ನು ಚಿತ್ರದುರ್ಗ ನಗರ ಪೆÇಲೀಸ್ ಠಾಣೆಯಲ್ಲಿ ಕಾನೂನು ರೀತ್ಯಾ ಕ್ರಮಕೈಗೊಳ್ಳಲು ದೂರು ದಾಖಲಿಸಲಾಗಿದೆ.
ಸಾರ್ವಜನಿಕರು ಇನ್ನು ಮುಂದೆ ನಗರಸಭೆಯಿಂದ ಅನುಮತಿ ಪಡೆದು, ನಿಗದಿಪಡಿಸಿದ ಸ್ಥಳಗಳಲ್ಲಿ ಜಾಹೀರಾತುಗಳನ್ನು ಪ್ರಚುರಪಡಿಸಬೇಕು. ಒಂದು ವೇಳೆ ನಗರಸಭೆಯಿಂದ ಅನುಮತಿ ಇಲ್ಲದೇ ಪ್ರಚುರಪಡಿಸಿದಲ್ಲಿ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...