Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗುಣಮಟ್ಟದ ಕಾಮಗಾರಿಗೆ ಆದ್ಯತೆ : ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ, ಜೂ. 18 : ಗುಣಮಟ್ಟದ ಕಾಮಗಾರಿಯಿಂದ ಮಾತ್ರ ಕ್ಷೇತ್ರದಲ್ಲಿ ಹೆಸರು ಉಳಿಯಲು ಸಾಧ್ಯ. ಆ ಒಂದು ನಿಟ್ಟಿನಲ್ಲಿ ವಿವಿಧ ಕಾಮಗಾರಿ ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ತಿಳಿಸಿದರು.

ನಗರದ ತಿಮ್ಮಣ್ಣ ನಾಯಕನ ಕೆರೆ ಏರಿಯ ಮೇಲೆ ಎಡಭಾಗದಲ್ಲಿ ಪಾತ್ವೆ ಮತ್ತು ಅಲಂಕಾರಿಕ ವಿದ್ಯುತ್ ದೀಪಗಳು, ಜಿಮ್ ಮತ್ತು ಮಕ್ಕಳ ಆಟಿಕೆ ಸಾಮಾಗ್ರಿಗಳು ಹಾಗೂ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ, ನಗರದ 2ನೇ ವಾರ್ಡ್‍ನಲ್ಲಿರುವ ಚಂದ್ರಮಾಸದ ಹೊಂಡದ ಪುಷ್ಕರಣೆ ಅಭಿವೃದ್ಧಿ ಕಾಮಗಾರಿ ಹಾಗೂ ಜಿಮ್ ಮಕ್ಕಳ ಆಟಿಕೆ ಸಾಮಾಗ್ರಿಗಳನ್ನು ಆಳವಡಿಸುವ ಕಾಮಗಾರಿ, ಐತಿಹಾಸಿಕ ಕೋಟೆಯ ಕುರವತ್ತಿ ಈಶ್ವರ ದೇವಸ್ಥಾನದ ರಾಮದೇವರ ವಡ್ಡು ಏರಿ ಅಭಿವೃದ್ಧಿ ಕಾಮಗಾರಿ, ಮೆದೇಹಳ್ಳಿ ಗ್ರಾಮದ ಉದ್ಯಾನವನ ನಿರ್ಮಾಣ ಕಾಮಗಾರಿ, ಕೆಳಗೋಟೆಯ ಚೆನ್ನಕೇಶವ ಸ್ವಾಮಿ ದೇವಸ್ಥಾನದ ಹಿಂಭಾಗದ ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು,

ಸಾರ್ವಜನಿಕ ಅನುಕೂಲಕ್ಕಾಗಿ ಉದ್ಯಾನವನದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನ ಮಾಡಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಹಾಗೂ  ಇಲಾಖೆ ಅಧಿಕಾರಿಗಳಿಗೆ ಅಭಿವೃದ್ಧಿ ಕಾರ್ಯಗಳು ಗುಣಮಟ್ಟದಲ್ಲಿ ಕೂಡಿರಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment