Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪರಪ್ಪನ ಅಗ್ರಹಾರದಲ್ಲಿ ಬಿಂದಾಸ್ ಲೈಫ್ ಲೀಡ್ ಮಾಡ್ತಿರೋ ಕೈದಿಗಳು : ಗೃಹ ಸಚಿವರು ಏನಂದ್ರು..?

ಸಚಿವ ಪರಮೇಶ್ವರ್
---Advertisement---

ಬೆಂಗಳೂರು: ನಾಮಕವಸ್ಥೆಗಷ್ಟೇ ಜೈಲುವಾಸ ಅನ್ನೋ ಹಾಗೇ ಕೆಲವೊಂದಿಷ್ಟು ಕೈದಿಗಳು ಜೈಲಿನಲ್ಲೂ ರಾಯಲ್ ಲೈಫ್ ಲೀಡ್ ಮಾಡ್ತಾ ಇದ್ದಾರೆ.ಆ ಸಂಬಂಧ ಫೋಟೋ, ವಿಡಿಯೋಗಳು ವೈರಲ್ ಆಗುತ್ತಿವೆ. ಇದಕ್ಕೆ ಜನರ ವಿರೋಧವು ಇದೆ. ಈ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಪರಮೇಶ್ವರ್ ಅವರು, ಈ ಹಿಂದೆ ಮಂಗಳೂರು, ಬೆಳಗಾವಿಯ ಜೈಲುಗಳಲ್ಲಿ ಈ ರೀತಿ ಆಗಿದ್ದಾಗ ಅಧಿಕಾರಿಗಳನ್ನು ಶ್ಪೆಂಡ್ ಮಾಡಿ ಕ್ರಮ ತೆಗೆದುಕೊಂಡಿದ್ದೇವೆ. ಎಡಿಜಿಪಿ ಬಿ.ದಯಾನಂದ ಅವರನ್ನು ಮುಖ್ಯಸ್ಥರನ್ನಾಗಿ ಮಾಡಿದ್ದೇವೆ. ಅವರು ನಿನ್ನೆ ರಜೆ ಇದ್ದರು. ಈ ಬಗ್ಗೆ ಅವರ ಬಳಿ ಮಾತನಾಡಿದ್ದೇನೆ. ಕೆಳ ಅಧಿಕಾರಿಗಳ ಮೇಲೆ ತಕ್ಷಣ ಕ್ರಮ ತೆಗೆದುಕೊಂಡು ವರದಿ ಕೊಡಬೇಕು ಎಂದಿದ್ದೇನೆ.

ಸಿಬ್ಬಂದಿ ಕಡಿಮೆ ಎನ್ನುತ್ತಾರೆ. ಆದರೆ ಇರುವಂತಹ ಸಿಬ್ಬಂದಿ ಸರಿಯಾಗಿ ಕೆಲಸ ಮಾಡಬೇಕು ಅಲ್ವಾ..? ಸ್ಟಾಪ್ ಕಡಿಮೆ ಇದ್ದಾರೆ ಎಂದು ಜೈಲಿನಲ್ಲಿದ್ದವರಿಗೆ ಮೊಬೈಕ್, ಟಿವಿ ಸೇರಿ ಬೇರೆ ಬೇರೆ ಕೊಟ್ಟೃ ಅದು ಜೈಲು ಎಂದು ಎನಿಸಿಕೊಳ್ಳಲ್ಲ. ಈಗಾಗಲೇ ಈ ಸಂಬಂಧ ವರದಿಯನ್ನು ಕೇಳಿದ್ದೇನೆ. ಶೀಘ್ರದಲ್ಲಿಯೇ ಒಂದು ಸಭೆ ಮಾಡುತ್ತೇನೆ. ಇದಕ್ಕೆಲ್ಲಾ ಏನು ಮಾಡಬೇಕು ಎಂದು ಚರ್ಚೆ ಮಾಡಲಾಗುವುದಹ. ಜಾಮರ್ ಇದ್ದರು ಈ ರೀತಿ ಆಗುತ್ತವೆ. ವರದಿ ಕೊಡಿ ಎಂದು ಕೇಳಿದ್ದೇನೆ. ವರದು ನನಗೆ ಸರಿ ಅನ್ನಿಸಲಿಲ್ಲ ಎಂದರೆ ಸಮಿತಿ ರಚನೆ ಮಾಡಿ ಕೂಡಲೇ ಕ್ರಮ ತೆಗೆದುಕೊಳ್ಳಲಾಗುವುದು. ಉಗ್ರನ ಕೈಯಲ್ಲಿ ಮೊಬೈಲ್​ ಇದೆ ಎಂದಿದ್ದಕ್ಕೆ ಉತ್ತರಿಸಿದ ಗೃಹ ಸಚಿವರು, ಉಗ್ರ ಅಂತಲ್ಲ, ಜೈಲಿನಲ್ಲಿ ಇರುವ ಯಾರ ಬಳಿಯೂ ಮೊಬೈಲ್ ಇರಲೇಬಾರದು ಎಂದು ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now