ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ

1 Min Read

 

 

ಬೆಂಗಳೂರು: ಪೇ ಸಿಎಂ ಪೋಸ್ಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆಪಿಸಿಸಿ ಸಾಮಾಜಿಕ ಜಾಲತಾಣದ ಇಬ್ಬರನ್ನು ಬಂಧಿಸಿದ್ದಾರೆ. ಈ ಸಂಬಂಧ ಶಾಸಕ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರ ಹಾಕಿದ್ದಾರೆ.

ಕ್ರಮ ಕೈಗೊಳ್ಳಬೇಕಿರುವುದು #PayCM ಪೋಸ್ಟರ್ ಅಂಟಿಸಿದವರ ಮೇಲಲ್ಲ, 40% ತಿಂದವರ ಮೇಲೆ. ಮರ್ಯಾದೆಯನ್ನು ಹೇಗೆ ಉಳಿಸಿಕೊಳ್ಳಬೇಕೆಂಬುದು ಸರ್ಕಾರಕ್ಕೆ ಇನ್ನೂ ತಿಳಿದಿಲ್ಲ! ಗುಬ್ಬಿ ಮೇಲೆ ಬ್ರಹ್ಮಸ್ತ್ರ ಎಂಬಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ ನಡೆಸುವ ಬದಲು ಈ ಅಭಿಯಾನ ಕೈಗೊಂಡರುವ ನಮ್ಮೆದುರು ಚರ್ಚೆಗೆ ಬರಲು ಸರ್ಕಾರಕ್ಕೆ ಭಯವೇಕೆ? ಎಂದು ಟ್ವೀಟ್ ಮಾಡಿದ್ದಾರೆ.

ಕಾರ್ಯಕರ್ತರ ವಶಕ್ಕೆ ಪಡೆದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಆಕ್ರೋಶ ಹೊರ ಹಾಕಿದ್ದರು. ನಾಳೆಯಿಂದ ನಾವೇ ಪೋಸ್ಟರ್ ಅಂಟಿಸುತ್ತೇವೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *