Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೈ ನಾಯಕರನ್ನು ದೆಹಲಿಗೆ ಕರೆಸಿಕೊಂಡ ಪ್ರಿಯಾಂಕ ಗಾಂಧಿ : ಚುನಾವಣೆಯ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಾರಾ..?

Facebook
Twitter
Telegram
WhatsApp

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಭರ್ಜರಿ ಪ್ರಚಾರ ಕಾರ್ಯ ಶುರುವಾಗಿದೆ. ಮೂರು ಪಕ್ಷಗಳು ಕರ್ನಾಟಕ ಚುನಾವಣೆ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಈ ಬಾರಿ ಜನರ ಮನಸ್ಸನ್ನು ಗೆಲ್ಲಲೇಬೇಕೆಂಬ ಪಣ ತೊಟ್ಟಿದ್ದಾರೆ. ಇದರ ನಡುವೆ ಗುಜರಾತ್ ಚುನಾವಣೆಯ ಸೋಲು ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ. ಹಿಮಾಚಲ ಪ್ರದೇಶದಲ್ಲಿ ಅಧಿಕಾರ ಸಿಕ್ಕ ತೃಪ್ತಿಗಿಂತ ಸೋಲಿನ ಬೇಸರ ಹೆಚ್ಚಾಗಿ ಕಾಡುತ್ತಿದೆ. ಇದೆ ಕಾರಣಕ್ಕೆ ಕರ್ನಾಟಕದ ಮೇಲೆ ಹೆಚ್ಚು ಗಮನಹರಿಸಲಾಗುತ್ತಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇದೆ. ಇದರ ನಡುವೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಬೆಲೆಯುತ್ತಾ ಹೋಗುತ್ತಿದೆ. ಜೊತೆಗೆ ದಲಿತ ಸಿಎಂ ಕೂಗು ಮತ್ತೆ ಜೋರಾಗುಇದೆ. ಈ ಎಲ್ಲಾ ಬೆಳವಣಿಗೆಯ ನಡುವೆ ಕರ್ನಾಟಕದ ಚುನಾವಣೆಯಲ್ಲಿ ಗೆಲ್ಲುವುದು ಬಹಳ ಮುಖ್ಯವಾಗಿದೆ. ಹೀಗಾಗಿ ಇಂದು ಕಾಂಗ್ರೆಸ್ ನ ರಾಜ್ಯ ನಾಯಕರಿಗೆ ಪ್ರಿಯಾಂಕ ಗಾಂಧಿ ಬುಲಾವ್ ನೀಡಿದ್ದಾರೆ. ದೆಹಲಿಯಲ್ಲಿ ಮುಂದಿನ ಚುನಾವಣೆಯ ರೂಪುರೇಷೆಯ ಬಗ್ಗೆ ಚರ್ಚೆಯಾಗಲಿದೆ.

ಒಂದು ಕಡೆ ಗುಜರಾತ್ ನಲ್ಲಿ ಬಿಜೆಪಿ ಹೊಸ ಪ್ಲ್ಯಾನ್ ಹಾಕಿಕೊಂಡಿತ್ತು. ಹಿರಿಯರಿಗೆ ಕೊಕ್ ನೀಡಿ, ಯುವಕರಿಗೆ ಮಣೆ ಹಾಕಿತ್ತು. ಈ ಎಲ್ಲಾ ಅಂಶಗಳಿಂದ ಗೆಲುವು ಸುಲಭವಾಗಿತ್ತು. ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕರಿಗೆ ಇದನ್ನು ಪರೋಕ್ಷವಾಗಿ, ಸೂಕ್ಷ್ಮವಾಗಿ ತಿಳಿಸಿದ್ದಾರೆ. ಹೀಗಾಗಿ ಆ ಬಗ್ಗೆಯೂ ಇಂದು ಪ್ರಿಯಾಂಕ ಗಾಂಧಿ ರಾಜ್ಯ ನಾಯಕರ ಜೊತೆಗೆ ಚರ್ಚಿಸಲಿದ್ದಾರಾ ಎಂಬ ಪ್ರಶ್ನೆಯೂ ಕಾಡಿದೆ.

ಪ್ರಿಯಾಂಕ ಗಾಂಧಿಯವರ ಕರೆಗೆ ಹೂಗೊಟ್ಟು, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬಿ ಕೆ ಹರಿಪ್ರಸಾದ್, ಎಂ ಬಿ ಪಾಟೀಲ್, ಜಿ ಪರಮೇಶ್ವರ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾ ರೆಡ್ಡಿ, ಧ್ರುವ ನಾರಾಯಣ್ ದೆಹಲಿ ಕಡೆಗೆ ಪಯಣ ಬೆಳೆಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

error: Content is protected !!