Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶೃಂಗೇರಿ ಶಾರದಾ ಪೀಠಕ್ಕೆ ಪ್ರಿಯಾಂಕ ಗಾಂಧಿ ಭೇಟಿ : ಇಂದಿರಾ ಗಾಂಧಿಯೂ ಅಂದು ಭೇಟಿ ನೀಡಿದ್ದರು..!

---Advertisement---

 

 

ಚಿಕ್ಕಮಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಆಕ್ಟೀವ್ ಆಗಿವೆ. ಇನ್ನು ಕೆಲವೇ ದಿನಗಳಲ್ಲಿ ಚುನಾವಣೆಯ ದಿನ ಬಂದೇಬಿಡುತ್ತೆ‌. ಹೀಗಾಗಿ ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಇದೀಗ ಕಾಂಗ್ರೆಸ್ ಅಭ್ಯರ್ಥಿ ಪರ‌ ಪ್ರಚಾರಕ್ಕೆಂದು ಪ್ರಿಯಾಂಕ ಗಾಂಧಿ, ಚಿಕ್ಕಮಗಳೂರಿಗೆ ಬಂದಿದ್ದಾರೆ.

ಇಂದು ಮಲೆನಾಡಿಗೆ ಭೇಟಿ ನೀಡಿದ ಪ್ರಿಯಾಂಕ ಗಾಂಧಿ ಮೊದಲಿಗೆ ಶೃಂಗೇರಿ ಶಾರಾದಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನ ಭೇಟಿ ಬಳಿಕ ಪ್ರಿಯಾಂಕ ಗಾಂಧಿ ನರಸಿಂಹ ವನದಲ್ಲಿರುವ ಗುರುಗಳ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಬಾಳೆಹೊನ್ನೂರು ರಂಭಾಪುರಿ ಪೀಠಕ್ಕೆ ಭೇಟಿ ನೀಡಲಿದ್ದಾರೆ. ದೇವಸ್ಥಾನಗಳ ಭೇಟಿ ಬಳಿಕ ಕಾಂಗ್ರೆಸ್ ಕ್ಷೇತ್ರದ ಅಭ್ಯರ್ಥಿ ಟಿ ಡಿ ರಾಜೇಗೌಡರ ಪರ ಮತಯಾಚನೆ ಮಾಡಲಿದ್ದಾರೆ.

ಶೃಂಗೇರಿ ಶಾರದಾ ಪೀಠದ ಬಗ್ಗೆ ಗಾಂಧಿ ಕುಟುಂಬಸ್ಥರು ವಿಶೇಷ ನಂಬಿಕೆ ಇಟ್ಟುಕೊಂಡಿದ್ದಾರೆ. 1978ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಇಂದಿರಾ ಗಾಂಧಿ ಅವರು, ಶಾರಾದಾಂಬ ಪೀಠಕ್ಕೆ ನಮಸ್ಕರಿಸಿ, ವಿಶೇಷ ಪೂಜೆ ಸಲ್ಲಿಸಿದ್ದರು. 2018 ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ‌ ಕೂಡ ಭೇಟಿ‌ ನೀಡಿ, ಪೂಜೆ ಸಲ್ಲಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...