Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಂಡ್ಯ ಬಂದ್ ಬೆನ್ನಲ್ಲೇ ಬೆಂಗಳೂರು ಬಂದ್ ಗೆ ಕರೆ ನೀಡಿದ ಕನ್ನಡಪರ ಸಂಘಟನೆಗಳು

---Advertisement---

 

ಮಂಡ್ಯ: ಕಾವೇರಿಗಾಗಿ ಮಂಡ್ಯ ಭಾಗದಲ್ಲಿ ಹೋರಾಟ‌ ತೀವ್ರಗೊಳ್ಳುತ್ತಿದೆ. ರಸ್ತೆಗಳಲ್ಲಿ‌ ಮಲಗಿ, ರಾಜ್ಯ ಸರ್ಕಾರದ ವಿರುದ್ಧ ರೈತರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಇದರ ಬೆನ್ನಲ್ಲೇ ಬೆಂಗಳೂರು ಬಂದ್ ಗೂ ಕರೆ ನೀಡಲಾಗಿದೆ.

ಕನ್ನಡಪರ ಸಂಘಟನೆಗಳಿಂದ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಸೆಪ್ಟೆಂಬರ್ 26ರ ಮಂಗಳವಾರ ಬೆಂಗಳೂರು ಬಂದ್ ಮಾಡುವುದಾಗಿ ಹೇಳಿದ್ದಾರೆ. ಕಾವೇರಿ ನೀರು ರೈತರಿಗೆ ಎಷ್ಟು ಮುಖ್ಯವೋ ಬೆಂಗಳೂರಿಗರಿಗೂ ಅಷ್ಟೇ ಮುಖ್ಯವಾಗಿದೆ. ಯಾಕಂದ್ರೆ‌ ಬೆಂಗಳೂರಿಗೆ ಕುಡಿಯುವ ನೀರು ಸಿಗುತ್ತಿರುವುದು ಇದೇ ಕಾವೇರಿಯಿಂದ. ಹೀಗಾಗಿಯೇ ರೈತರು ಕೂಡ ಬೆಂಗಳೂರಿಗರು ಈ ಹೋರಾಟದಲ್ಲಿ ಭಾಗಿಯಾಗಲು ಸೂಚಿಸುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ.

ಇನ್ನು ಇಂದು ಮಂಡ್ಯದಲ್ಲಿ ಹೋರಾಟ ಭುಗಿಲೆದ್ದಿದೆ. ರಸ್ತೆಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸುತ್ತಿದ್ದಾರೆ. ಹೋರಾಟ‌ ಜೋರಾದ ಬೆನ್ನಲ್ಲೆ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಹೋರಾಟಕ್ಕೆ ರೈತರು, ರಾಜಕಾರಣಿಗಳು, ಕನ್ನಡ ಪರ ಸಂಘಟನೆಗಳು ಸಾಥ್ ನೀಡಿವೆ. ಇದೀಗ ಹೋರಾಟದ ತೀವ್ರತೆ ಹೆಚ್ಚಾದ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...